ಮೈಸೂರು: ಕಳೆದ 10 ವರ್ಷಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಕಸಿತ ಭಾರತಕ್ಕೆ ಅಡಿಪಾಯ ಇಟ್ಟಿದ್ದಾರೆ. ವಿಕಸಿತ ಭಾರತ 2047ಕ್ಕೆ ಅಭಿವೃದ್ದಿ ಗುರಿಯನ್ನು ಮುಟ್ಟಲಿದೆ ಎಂದು ಮೈಸೂರು-ಕೊಡಗು ಲೋಕಸಭಾ ಸಂಸದರಾದ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ರೋಜ಼್ಗಾರ್ ಯೋಜನೆಯ ಅಡಿಯಲ್ಲಿ ಯುವ ಶಕ್ತಿಯೊಂದಿಗೆ ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪವನ್ನು ಬಲಪಡಿಸುವ ಗುರಿಯೊಂದಿಗೆ, ಸರ್ಕಾರಿ ಉದ್ಯೋಗಗಳಲ್ಲಿ ಆಯ್ಕೆಯಾದ 51,000ಕ್ಕೂ ಅಧಿಕ ಯುವ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳ ವಿತರಣೆ ಮಾಡುವ ಉದ್ಯೋಗ ಮೇಳದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಕೇಂದ್ರ ಸರ್ಕಾರದ ಹಲವು ಇಲಾಖೆಗಳು ದೇಶದ ಅಭಿವೃದ್ದಿಗೆ ಪೂರಕೆವಾಗಿ ಯುವಕರಿಗೆ ಉದ್ಯೋಗ ನೀಡುವಲ್ಲಿ ತಮ್ಮದೇ ಆದ ಕೊಡುಗೆಯನ್ನು ನೀಡುತ್ತಿವೆ. ಭಾರತ ಉತ್ತಮ ಭವಿಷ್ಯವನ್ನು ಹೊಂದಿದ್ದು, ವಿಕಸಿತ ಭಾರತದ ಅಬಿವೃದ್ದಿಗೆ ಪ್ರತಿಯೊಬ್ಬರೂ ಕೈಜೋಡಿಸಿ ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ ಉದ್ಯೋಗ ಪಡೆದ ಅಭ್ಯರ್ಥಿಗಳಿಗೆ ಶುಭಹಾರೈಸಿದರು. ಶಾಸಕರಾದ ಟಿ.ಎಸ್.ಶ್ರೀವತ್ಸ, ದಕ್ಷಿಣ ಕರ್ನಾಟಕ ವಿಭಾಗದ ಅಂಚೆ ಇಲಾಖೆಯ ನಿರ್ದೇಶಕರಾದ ಸಂದೇಶ್ ಮಹದೇವಪ್ಪ, ರೈಲ್ವೆ ಇಲಾಖೆಯ ಡಿ ಆರ್ ಎಂ ಶಿಲ್ಪಿ ಅಗರವಾಲ್, ಆಯುಷ್ ಸಂಸ್ಥೆ ನಿರ್ದೇಶಕರಾದ ಪುಷ್ಪಾವತಿ, ದಕ್ಷಿಣ ಭಾರತದ ಪೋಸ್ಟ್ ಮಾಸ್ಟರ್ ಜನರಲ್ ಮ್ಯಾನೇಜರ್ ಚಂದ್ರಶೇಖರ್ ಕಾಕುಮಾನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ತುಮಕೂರು : ನೀಟ್ ಪರೀಕ್ಷೆ ರದ್ದಾಗಿ 22 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡಿ, ಹಲವು ವಿದ್ಯಾರ್ಥಿಗಳ ಆತಹತ್ಯೆಗೆ…
ತುಮಕೂರು : ವಿಧಾನಸಭೆ ಚುನಾವಣೆಗೂ ಮುನ್ನ ರಾಜ್ಯದ ಜನತೆಗೆ ಪ್ರಣಾಳಿಕೆಯಲ್ಲಿ ನೀಡಿದ್ದ 580 ಭರವಸೆಗಳ ಪೈಕಿ 290ಕ್ಕೂ ಹೆಚ್ಚು ಭರವಸೆಗಳನ್ನು…
ತುಮಕೂರು: 2023ರಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನೇತೃತ್ವದ ಸರ್ಕಾರ ಮೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ, 4ನೇ ವರ್ಷಕ್ಕೆ ಪಾದಾರ್ಪಣೆ…
ನವದೆಹಲಿ: ಬೀದಿ ನಾಯಿಗಳ ನಿಯಂತ್ರಣಕ್ಕೆ ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಲು ಆದೇಶಿಸಿದ್ದ ಸುಪ್ರೀಂಕೋರ್ಟ್ ತನ್ನ ಆದೇಶವನ್ನು ಹಿಂಪಡೆಯುವುದಿಲ್ಲ ಎಂದು ಹೇಳಿದೆ.…
ಕೊಡಗು: ಜಿಲ್ಲೆಯ ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಸ್ನಾನ ಮಾಡುವ ವೇಳೆ ಕಂಜನ್ ಆನೆ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ…
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ ಸಾರಿಗೆ ಸಂಘಟನೆಗಳು ಮೇ.20ರಂದು ಕರೆ ನೀಡಿದ್ದ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ಅಂಕುಶ ಹಾಕಿದೆ.…