ಮೈಸೂರು

ಕ್ಷಯರೋಗ ನಿರ್ಮೂಲನೆಗೆ ಕೈ ಜೋಡಿಸಿ : ಡಾ.ಕೆ.ಹೆಚ್ ಪ್ರಸಾದ್‌

ಮೈಸೂರು : ಕ್ಷಯರೋಗ ಒಂದು ಸಾಂಕ್ರಾಮಿಕ ರೋಗವಾಗಿದ್ದು, ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ. ಜೊತೆಗೆ ರೋಗಿಗಳಲ್ಲಿ ದೀರ್ಘಕಾಲದ ವರೆಗೆ ಉಳಿಯುವ ಖಾಯಿಲೆಯಾಗಿದೆ. ಆದರೆ ಕ್ಷಯ ರೋಗಿಗಳನ್ನು ಗುರುತಿಸಿ, ಸೂಕ್ತ ಚಿಕಿತ್ಸೆ ನೀಡಿದರೆ ಕ್ಷಯರೋಗವನ್ನು ವಾಸಿ ಮಾಡಬಹುದು. ಹೀಗಾಗಿ ಕ್ಷಯರೋಗಿಗಳ ಮಾಹಿತಿ ನೀಡಿ, ಕ್ಷಯರೋಗ ಮುಕ್ತ ಭಾರತ ನಿರ್ಮಿಸಲು ಕೈ ಜೋಡಿಸಿ  ಎಂದು ಮೈಸೂರು ವಿಭಾಗದ ವಿಭಾಗೀಯ ಸಹ ನಿರ್ದೇಶಕ ಡಾ.ಕೆ.ಹೆಚ್ ಪ್ರಸಾದ್  ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿಯಂತ್ರಣ ಕೇಂದ್ರ, ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕೇಂದ್ರ, ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಅಕಾಡೆಮಿ ಇವರ ಸಹಯೋಗದಲ್ಲಿ ಸೋಮವಾರ  ಜೆ.ಕೆ ಮೈದಾನದ ಅಮೃತ್ ಮಹೋತ್ಸವ ಭವನದಲ್ಲಿ ಆಯೋಜಿಸಲಾಗಿದ್ದ ವಿಶ್ವ ಕ್ಷಯರೋಗ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕ್ಷಯರೋಗ ಮುಕ್ತ ಗ್ರಾಮಗಳನ್ನು ನಿರ್ಮಿಸಲು ಜನಾಂದೋಲನ ಮಾದರಿಯಲ್ಲಿ ಅಭಿಯಾನ ನಡೆಸಬೇಕಾದ ಅಗತ್ಯವಿದೆ. ಇಲ್ಲವಾದರೆ ಇಡೀ ದೇಶ ಕ್ಷಯರೋಗ ಮಯವಾಗಿ ಪರಿವರ್ತನೆಗೊಳ್ಳುವ ಅಪಾಯವಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಕ್ಷಯರೋಗ ಅತ್ಯಂತ ಅಪಾಯಕಾರಿ ಖಾಯಿಲೆಯಾಗಿದೆ. ಸ್ವಾತಂತ್ರ್ಯ ಬಂದಾಗಿನಿಂದಲೂ ಸಹ ದೇಶ ಕ್ಷಯರೋಗದ ವಿರುದ್ಧ ಹೋರಾಟ ಮಾಡುತ್ತಲೇ ಬರುತ್ತಿದ್ದು, ಕ್ಷಯರೋಗ ನಿರ್ಮೂಲನೆಗಾಗಿ ಸರ್ಕಾರ ಮತ್ತು ಆರೋಗ್ಯ ಇಲಾಖೆ, ವೈದ್ಯರು, ವೈದ್ಯಕೀಯ ಸಿಬ್ಬಂದಿಗಳ ಜೊತೆಗೆ ಸಾರ್ವಜನಿಕರೂ ಕೈಜೋಡೊಸಬೇಕಾದ ಅಗತ್ಯವಿದೆ. ಒಂದು ಕೈ ಸೇರಿದರೆ ಚಪ್ಪಾಳೆಯಾಗುವುದಿಲ್ಲ. ಸಮಾಜದ ಸಹಕಾರವಿದ್ದರೆ ಯಾವ ಕಾರ್ಯವೂ ಸಹ ಕಷ್ಟವಾಗುವುದಿಲ್ಲ ಎಂದು ಅವರು ತಿಳಿಸಿದರು.

ಕೆ.ಆರ್.ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ.ಎಚ್.ಪಿ.ಶೋಭಾ  ಮಾತನಾಡಿ, ಕ್ಷಯರೋಗ ನಿರ್ಮೂಲನೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಅತ್ಯಂತ ಮಹತ್ವದ್ದಾಗಿರುವುದರಿಂದ ವಿದ್ಯಾರ್ಥಿಗಳು ಮನಸ್ಸು ವಾಡಿದರೆ ಸಂಪೂರ್ಣವಾಗಿ ಕ್ಷಯರೋಗವನ್ನು ನಮ್ಮ ದೇಶದಿಂದ ನಿರ್ಮೂಲನೆ ಗೊಳಿಸಬಹುದು ಎಂದು ಹೇಳಿದರು.

ಎಲ್ಲಾ ವಿದ್ಯಾರ್ಥಿಗಳು ತಮ್ಮ ಗ್ರಾಮದಲ್ಲಿ ಮತ್ತು ತಮ್ಮ ನೆರೆಹೊರೆ ಮನೆಗಳಲ್ಲಿ ಕ್ಷಯ ರೋಗಿಗಳು ಅಥವಾ ಕ್ಷಯ ರೋಗದ ಲಕ್ಷಣಗಳು ಇರುವ ವ್ಯಕ್ತಿಗಳು ಕಂಡು ಬಂದರೆ ತಕ್ಷಣ ತಮ್ಮ ಹತ್ತಿರದ ಆಸ್ಪತ್ರೆಗಳಿಗೆ ಸೇರಿಸಬೇಕು ಎಂದು ಸಲಹೆ ನೀಡಿದರು.

ಕ್ಷಯ ಮುಕ್ತ ಗ್ರಾಮ ಪಂಚಾಯತಿಗಳಾದ ಹೆಚ್.ಡಿ ಕೋಟೆ, ಸರಗೂರು, ಹುಣಸೂರು, ಕೆ. ಆರ್ ನಗರ, ಪಿರಿಯಾಪಟ್ಟಣ ನಂಜನಗೂಡು, ಟಿ.ನರಸೀಪುರ ತಾಲ್ಲೂಕಿನ ಗ್ರಾಮಪಂಚಾಯಿತಿಗಳಾದ ಭೀಮನಹಳ್ಳಿ, ಹೆಬ್ಬಲಗುಪ್ಪೆ, ಭಾಚೇಗೌಡನಹಳ್ಳಿ, ಹೊಮ್ಮರಗಳ್ಳಿ, ಕಂಚಮಳ್ಳಿ, ಇಟ್ನ, ಕೊತ್ತೇಗಾಲ, ಮುಳ್ಳೂರು, ಸಾಗರೆ, ಹೆಗ್ಗನೂರು, ಭೋಳನಹಳ್ಳಿ, ಗಾಗೇನಹಳ್ಳಿ, ಹಳೇಬೀಡು, ಕರ್ಣಕುಪ್ಪೆ, ಮೋದೂರು, ಮುಳ್ಳೂರು, ತಟ್ಟೆಕೆರೆ , ಉದ್ದೂರು ಕಾವಲ್, ಚಂದೇಗಾಲ, ಅಡಗೂರು, ಗಂಧನಹಳ್ಳಿ, ಹರದನಹಳ್ಳಿ, ತಿಪ್ಪೂರು, ಹಗ್ಗಿನವಾಳು ಕಂಪಲಾಪುರ, ಕೋಮಲಾ ಪುರ, ಮುತ್ತೂರು, ಪುನ್ನಾಡಹಳ್ಳಿ, ಗರ್ಗೆಶ್ವರಿ, ಕಲಿಯೂರು, ಕುಪ್ಯ, ಮಾದಾಪುರ, ಮುತ್ತಲವಾಡಿ, ಸೋಸಲೆ , ತುರುಗನೂರು, ವಾಟಾಳು ಗ್ರಾಮ ಪಂಚಾಯಿತಿಗಳಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಎಂ.ಎಸ್.ಜಯoತ್, ಆರ್.ಸಿ.ಎಚ್.ಒ ಡಾ.ಸಿರಾಜ್ ಅಹಮ್ಮದ್, ಕಾರ್ಯಕ್ರಮ ಸಂಯೋಜಕ ಕೆ.ಹನುಮಂತಪ್ಪ, ಆಶ್ರಯ ಹಸ್ತ ಟ್ರಸ್ಟ್ ನ ವಿಕ್ರಮ್ ಪಾಟೀಲ್, ಡಾ.ಬೃಂಧ, ಡಾ. ಸ್ವಾಮಿ, , ಸೆಂಟ್ರಲ್ ಆಸ್ಪತ್ರೆಯ ಡಾ.ಲತಾ ಕುಮಾರಿ, ಡಾ.ಗಣಪತಿ ಉಪ್ಪಿನಾಳ್, ಗ್ರಾಮ ಪಂಚಾಯಿತಿಯ ಸದಸ್ಯರು, ಎನ್.ಟಿ.ಡಿ ಸಂಸ್ಥೆಯ ಸಿಬ್ಬಂದಿಗಳು, ಕೆ.ಹೆಚ್.ಪಿ.ಟಿ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಜ್ಯದಲ್ಲಿ ಮತ್ತೆ ಟಿಪ್ಪು ಜಯಂತಿ: ಆಡಳಿತಾರೂಢ ಕಾಂಗ್ರೆಸ್‌ ನಡೆಗೆ ವಿಪಕ್ಷ ಬಿಜೆಪಿ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್‌ ಶಾಸಕ ಕಾಶಪ್ಪನವರ್‌…

48 mins ago

ರಾಜ್ಯದ ಮಹಿಳಾ ನೌಕರರಿಗೆ ಬಿಗ್‌ ಶಾಕ್:‌ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ರಾಜ್ಯದ ಮಹಿಳಾ ನೌಕರರಿಗೆ ಬಿಗ್‌ ಶಾಕ್‌ ಎಂಬಂತೆ ರಾಜ್ಯ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.…

59 mins ago

ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ಕೊಡಗು: ಶನಿವಾರಸಂತೆಯಲ್ಲಿ ವಿದ್ಯುತ್‌ ವಿತರಣಾ ಉಪಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ಅವಧಿಯ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ನಾಳೆ ಕೊಡಗಿನ ಕೆಲ ಪ್ರದೇಶಗಳಲ್ಲಿ…

1 hour ago

ಇಂಡಿಗೋ ಬಿಕ್ಕಟ್ಟಿನ ನಡುವೆ ಸಚಿವರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ

ನವದೆಹಲಿ: ಇಂಡಿಗೋ ವಿಮಾನಯಾ ಸಂಸ್ಥೆಗಳ ಆರ್ಥಿಕ ಬಿಕ್ಕಟ್ಟಿನ ನಡುವೆ ಕಾನೂನು ಮತ್ತು ನಿಯಮಗಳು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವಂತೆ ಪ್ರಧಾನಿ ನರೇಂದ್ರ…

1 hour ago

ವಿಶ್ವದ 2ನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜ ಅನಾವರಣಗೊಳಿಸಿದ ಸಿಎಂ

ಬೆಳಗಾವಿ: ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಸಿಎಂ ಸಿದ್ದರಾಮಯ್ಯ ಅವರಿಂದು ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಅನಾವರಣಗೊಳಿಸಿದರು.…

2 hours ago

ನಟ ರಿಷಬ್‌ ಶೆಟ್ಟಿ ತೊಡೆ ಮೇಲೆ ಮಲಗಿದ್ದು ಪಂಜುರ್ಲಿಯಲ್ಲ ನರ್ತಕ: ಸೋಷಿಯಲ್‌ ಮೀಡಿಯಾದಲ್ಲಿ ಆಕ್ರೋಶ

ಬೆಂಗಳೂರು: ಇತ್ತೀಚೆಗೆ ಮಂಗಳೂರಿನಲ್ಲಿ ಹರಕೆ ಕೋಲಾ ಮಾಡಿಸಿದ್ದ ರಿಷಬ್‌ ಶೆಟ್ಟಿ ತೊಡೆ ಮೇಲೆ ದೈವಾರಾಧಕ ಮಲಗಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ.…

2 hours ago