ಮೈಸೂರು

ಕ್ಷಯರೋಗ ನಿರ್ಮೂಲನೆಗೆ ಕೈ ಜೋಡಿಸಿ : ಡಾ.ಕೆ.ಹೆಚ್ ಪ್ರಸಾದ್‌

ಮೈಸೂರು : ಕ್ಷಯರೋಗ ಒಂದು ಸಾಂಕ್ರಾಮಿಕ ರೋಗವಾಗಿದ್ದು, ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ. ಜೊತೆಗೆ ರೋಗಿಗಳಲ್ಲಿ ದೀರ್ಘಕಾಲದ ವರೆಗೆ ಉಳಿಯುವ ಖಾಯಿಲೆಯಾಗಿದೆ. ಆದರೆ ಕ್ಷಯ ರೋಗಿಗಳನ್ನು ಗುರುತಿಸಿ, ಸೂಕ್ತ ಚಿಕಿತ್ಸೆ ನೀಡಿದರೆ ಕ್ಷಯರೋಗವನ್ನು ವಾಸಿ ಮಾಡಬಹುದು. ಹೀಗಾಗಿ ಕ್ಷಯರೋಗಿಗಳ ಮಾಹಿತಿ ನೀಡಿ, ಕ್ಷಯರೋಗ ಮುಕ್ತ ಭಾರತ ನಿರ್ಮಿಸಲು ಕೈ ಜೋಡಿಸಿ  ಎಂದು ಮೈಸೂರು ವಿಭಾಗದ ವಿಭಾಗೀಯ ಸಹ ನಿರ್ದೇಶಕ ಡಾ.ಕೆ.ಹೆಚ್ ಪ್ರಸಾದ್  ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿಯಂತ್ರಣ ಕೇಂದ್ರ, ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕೇಂದ್ರ, ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಅಕಾಡೆಮಿ ಇವರ ಸಹಯೋಗದಲ್ಲಿ ಸೋಮವಾರ  ಜೆ.ಕೆ ಮೈದಾನದ ಅಮೃತ್ ಮಹೋತ್ಸವ ಭವನದಲ್ಲಿ ಆಯೋಜಿಸಲಾಗಿದ್ದ ವಿಶ್ವ ಕ್ಷಯರೋಗ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕ್ಷಯರೋಗ ಮುಕ್ತ ಗ್ರಾಮಗಳನ್ನು ನಿರ್ಮಿಸಲು ಜನಾಂದೋಲನ ಮಾದರಿಯಲ್ಲಿ ಅಭಿಯಾನ ನಡೆಸಬೇಕಾದ ಅಗತ್ಯವಿದೆ. ಇಲ್ಲವಾದರೆ ಇಡೀ ದೇಶ ಕ್ಷಯರೋಗ ಮಯವಾಗಿ ಪರಿವರ್ತನೆಗೊಳ್ಳುವ ಅಪಾಯವಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಕ್ಷಯರೋಗ ಅತ್ಯಂತ ಅಪಾಯಕಾರಿ ಖಾಯಿಲೆಯಾಗಿದೆ. ಸ್ವಾತಂತ್ರ್ಯ ಬಂದಾಗಿನಿಂದಲೂ ಸಹ ದೇಶ ಕ್ಷಯರೋಗದ ವಿರುದ್ಧ ಹೋರಾಟ ಮಾಡುತ್ತಲೇ ಬರುತ್ತಿದ್ದು, ಕ್ಷಯರೋಗ ನಿರ್ಮೂಲನೆಗಾಗಿ ಸರ್ಕಾರ ಮತ್ತು ಆರೋಗ್ಯ ಇಲಾಖೆ, ವೈದ್ಯರು, ವೈದ್ಯಕೀಯ ಸಿಬ್ಬಂದಿಗಳ ಜೊತೆಗೆ ಸಾರ್ವಜನಿಕರೂ ಕೈಜೋಡೊಸಬೇಕಾದ ಅಗತ್ಯವಿದೆ. ಒಂದು ಕೈ ಸೇರಿದರೆ ಚಪ್ಪಾಳೆಯಾಗುವುದಿಲ್ಲ. ಸಮಾಜದ ಸಹಕಾರವಿದ್ದರೆ ಯಾವ ಕಾರ್ಯವೂ ಸಹ ಕಷ್ಟವಾಗುವುದಿಲ್ಲ ಎಂದು ಅವರು ತಿಳಿಸಿದರು.

ಕೆ.ಆರ್.ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ.ಎಚ್.ಪಿ.ಶೋಭಾ  ಮಾತನಾಡಿ, ಕ್ಷಯರೋಗ ನಿರ್ಮೂಲನೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಅತ್ಯಂತ ಮಹತ್ವದ್ದಾಗಿರುವುದರಿಂದ ವಿದ್ಯಾರ್ಥಿಗಳು ಮನಸ್ಸು ವಾಡಿದರೆ ಸಂಪೂರ್ಣವಾಗಿ ಕ್ಷಯರೋಗವನ್ನು ನಮ್ಮ ದೇಶದಿಂದ ನಿರ್ಮೂಲನೆ ಗೊಳಿಸಬಹುದು ಎಂದು ಹೇಳಿದರು.

ಎಲ್ಲಾ ವಿದ್ಯಾರ್ಥಿಗಳು ತಮ್ಮ ಗ್ರಾಮದಲ್ಲಿ ಮತ್ತು ತಮ್ಮ ನೆರೆಹೊರೆ ಮನೆಗಳಲ್ಲಿ ಕ್ಷಯ ರೋಗಿಗಳು ಅಥವಾ ಕ್ಷಯ ರೋಗದ ಲಕ್ಷಣಗಳು ಇರುವ ವ್ಯಕ್ತಿಗಳು ಕಂಡು ಬಂದರೆ ತಕ್ಷಣ ತಮ್ಮ ಹತ್ತಿರದ ಆಸ್ಪತ್ರೆಗಳಿಗೆ ಸೇರಿಸಬೇಕು ಎಂದು ಸಲಹೆ ನೀಡಿದರು.

ಕ್ಷಯ ಮುಕ್ತ ಗ್ರಾಮ ಪಂಚಾಯತಿಗಳಾದ ಹೆಚ್.ಡಿ ಕೋಟೆ, ಸರಗೂರು, ಹುಣಸೂರು, ಕೆ. ಆರ್ ನಗರ, ಪಿರಿಯಾಪಟ್ಟಣ ನಂಜನಗೂಡು, ಟಿ.ನರಸೀಪುರ ತಾಲ್ಲೂಕಿನ ಗ್ರಾಮಪಂಚಾಯಿತಿಗಳಾದ ಭೀಮನಹಳ್ಳಿ, ಹೆಬ್ಬಲಗುಪ್ಪೆ, ಭಾಚೇಗೌಡನಹಳ್ಳಿ, ಹೊಮ್ಮರಗಳ್ಳಿ, ಕಂಚಮಳ್ಳಿ, ಇಟ್ನ, ಕೊತ್ತೇಗಾಲ, ಮುಳ್ಳೂರು, ಸಾಗರೆ, ಹೆಗ್ಗನೂರು, ಭೋಳನಹಳ್ಳಿ, ಗಾಗೇನಹಳ್ಳಿ, ಹಳೇಬೀಡು, ಕರ್ಣಕುಪ್ಪೆ, ಮೋದೂರು, ಮುಳ್ಳೂರು, ತಟ್ಟೆಕೆರೆ , ಉದ್ದೂರು ಕಾವಲ್, ಚಂದೇಗಾಲ, ಅಡಗೂರು, ಗಂಧನಹಳ್ಳಿ, ಹರದನಹಳ್ಳಿ, ತಿಪ್ಪೂರು, ಹಗ್ಗಿನವಾಳು ಕಂಪಲಾಪುರ, ಕೋಮಲಾ ಪುರ, ಮುತ್ತೂರು, ಪುನ್ನಾಡಹಳ್ಳಿ, ಗರ್ಗೆಶ್ವರಿ, ಕಲಿಯೂರು, ಕುಪ್ಯ, ಮಾದಾಪುರ, ಮುತ್ತಲವಾಡಿ, ಸೋಸಲೆ , ತುರುಗನೂರು, ವಾಟಾಳು ಗ್ರಾಮ ಪಂಚಾಯಿತಿಗಳಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಎಂ.ಎಸ್.ಜಯoತ್, ಆರ್.ಸಿ.ಎಚ್.ಒ ಡಾ.ಸಿರಾಜ್ ಅಹಮ್ಮದ್, ಕಾರ್ಯಕ್ರಮ ಸಂಯೋಜಕ ಕೆ.ಹನುಮಂತಪ್ಪ, ಆಶ್ರಯ ಹಸ್ತ ಟ್ರಸ್ಟ್ ನ ವಿಕ್ರಮ್ ಪಾಟೀಲ್, ಡಾ.ಬೃಂಧ, ಡಾ. ಸ್ವಾಮಿ, , ಸೆಂಟ್ರಲ್ ಆಸ್ಪತ್ರೆಯ ಡಾ.ಲತಾ ಕುಮಾರಿ, ಡಾ.ಗಣಪತಿ ಉಪ್ಪಿನಾಳ್, ಗ್ರಾಮ ಪಂಚಾಯಿತಿಯ ಸದಸ್ಯರು, ಎನ್.ಟಿ.ಡಿ ಸಂಸ್ಥೆಯ ಸಿಬ್ಬಂದಿಗಳು, ಕೆ.ಹೆಚ್.ಪಿ.ಟಿ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಕ್ಕಳನ್ನು ಪ್ರಚೋದಿಸಬೇಡಿ, ಸರಿಯಾದ ದಾರಿ ತೋರಿಸಿ: ಪ್ರಧಾನಿ ಮೋದಿ ಮಹತ್ವದ ಸಂದೇಶ

ನವದೆಹಲಿ: ನೀಟ್‌-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…

9 hours ago

ಪ್ರಧಾನಿ ನಿವಾಸದ ಎದುರು ರಾಹುಲ್‌, ಪ್ರಿಯಾಂಕಾ ಪ್ರತಿಭಟನೆ

ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಂದು ಪ್ರಧಾನಿ…

9 hours ago

ಖಾಸಗಿ ಆಸ್ಪತ್ರೆಗೆ ಸೋನಮ್‌ ವಾಂಗ್ಚುಕ್‌ ಸ್ಥಳಾಂತರಕ್ಕೆ ದೆಹಲಿ ಹೈಕೋರ್ಟ್‌ ಸೂಚನೆ

ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.‌28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್‌ ವಾಂಗ್ಚುಕ್‌ ಅವರನ್ನು ಇಲ್ಲಿನ ಸಫ್ದರ್‌ಜಂಗ್‌…

10 hours ago

ಹಾರಂಗಿ ಜಲಾಶಯ ಭರ್ತಿಗೆ 8 ಅಡಿ ಬಾಕಿ: ಅನ್ನದಾತರ ಮೊಗದಲ್ಲಿ ಮಂದಹಾಸ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…

11 hours ago

ಹುಣಸೂರು: ಇಬ್ಬರು ಮಕ್ಕಳು, ಹೆಂಡತಿಯನ್ನು ಕೊಂದು ಪತಿ ಆತ್ಮಹತ್ಯೆ

ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…

11 hours ago

ಇಂದು ಚಲೋ ಸಂಸದ್ ಮುಂದುವರಿಯಲಿದೆ: ಅಭಿಜಿತ್‌ ದೀಪ್ಕೆ ಘೋಷಣೆ

ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್‌ ಮುಂದುವರಿಯಲಿದೆ ಎಂದು ಕಾಕ್ರೋಚ್‌ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ…

14 hours ago