ಮೈಸೂರು: ಮುಂದಿನ 25 ವರ್ಷಗಳ ಅವಧಿಯಲ್ಲಿ ಪ್ರಧಾನಿ ಮೋದಿ ಅವರು ಭಾರತವನ್ನು ಪ್ರಪಂಚದಲ್ಲಿಯೇ ನಂಬರ್.1 ಸ್ಥಾನಕ್ಕೆ ಕೊಂಡೊಯ್ಯಲು ಶ್ರಮಿಸುತ್ತಿದ್ದು, ಇವರಿಗೆ ಜೊತೆಯಾಗಿ ಕೈ ಜೋಡಿಸಲು ಮೈಸೂರು-ಕೊಡಗು ಕ್ಷೇತ್ರದಿಂದ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಗೆಲ್ಲಿಸಿ ಪಾರ್ಲಿಮೆಂಟಿಗೆ ಕಳುಹಿಸಬೇಕು ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಶ್ ಮನವಿ ಮಾಡಿದ್ದಾರೆ.
ಮೈಸೂರಿನ ಕೆ.ಆರ್ ಕ್ಷೇತ್ರದಲ್ಲಿ ನಡೆದ ಬಿಜೆಪಿ ನಾರಿ ಶಕ್ತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೈಸೂರು ಸ್ವಾತಂತ್ರ ಪೂರ್ವದಲ್ಲಿಯೇ ಅಭಿವೃದ್ಧಿ ಹೊಂದಿದ ನಗರವಾಗಿದೆ. ಈ ಆಧುನಿಕ ನಗರ ನಿರ್ಮಾಣಕ್ಕೆ ಮೈಸೂರು ಮಹಾರಾಜರ ಕೊಡುಗೆ ಬಹಳಷ್ಟಿದೆ. ಇಂತಹ ಮಹಾರಾಜರು ನಿಮ್ಮ ಸೇವೆ ಮಾಡಲು ಮುಂದೆ ಬಂದಿದ್ದು, ಅವರನ್ನು ಅವಿರೋಧವಾಗಿ ಆಯ್ಕೆ ಮಾಡುವ ಮೂಲಕ ಮೈಸೂರು ಮಹಾರಾಜರ ಋಣ ತೀರಿಸಲು ಇರುವ ಅವಕಾಶ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ನುಡಿದರು.
ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಬೆಂಗಳೂರಿನ ಜನರ ಮೇಲೆ ಮಹಾರಾಜರ ಋಣ ಇದೆ. ಈ ಬಾರಿ ಅವರನ್ನು ಗೆಲ್ಲಿಸಿ ಲೋಕಸಭೆಗೆ ಕಳುಹಿಸುವ ಮೂಲಕ ಮಹಾರಾಜರನ್ನು ವಿರೋಧಿಸುವವರಿಗೆ ತಕ್ಕ ಉತ್ತರ ನೀಡಬೇಕಿದೆ ಎಂದು ಸಂಸದೆ ಸುಮಲತಾ ಅಂಬರೀಶ್ ಅವರು ತಿಳಿಸಿದರು.
ಬೆಂಗಳೂರು : ಬೆಂಗಳೂರಿನ ಸಿನಿಮಾ ಪ್ರೇಮಿಗಳು ಕುತೂಹಲ ಮತ್ತು ನಿರೀಕ್ಷೆಯಿಂದ ಕಾಯುತ್ತಿರುವ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 17ನೇ ಅವತರಣಿಕೆಗೆ ವೇದಿಕೆ…
ಬೆಂಗಳೂರು : ದೆಹಲಿಯಿಂದ ರಾಜಭವನಕ್ಕೆ ಫೋನ್ ಮಾಡಲಾಗಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಾಡಿದ ಆರೋಪವು ವಿಧಾನಸಭೆಯಲ್ಲಿ ಆಡಳಿತ ಮತ್ತು…
ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್ಆರ್ಟಿಸಿ ಸೇರಿದಂತೆ ನಾಲ್ಕು ಸಾರಿಗೆ…
ಬೆಂಗಳೂರು: ಇತ್ತೀಚೆಗೆ ಕಾರು ಅಪಘಾತದಲ್ಲಿ ಮೃತಪಟ್ಟ ಐಎಎಸ್ ಅಧಿಕಾರಿ ದಿ.ಮಹಾಂತೇಶ್ ಬೀಳಗಿ ಅವರ ಪುತ್ರಿಗೆ ಸರ್ಕಾರಿ ಉದ್ಯೋಗ ಲಭಿಸಿದೆ. ಸಿಎಂ…
ಮಂಡ್ಯ: 2026ನೇ ಸಾಲಿನ ಪದ್ಮಶ್ರೀ ಪುರಸ್ಕೃತ ಅಂಕೇಗೌಡರಿಗೆ ಮಂಡ್ಯ ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಅಂಕೇಗೌಡ ಅವರನ್ನು ಸನ್ಮಾನಿಸಿ…
ನವದೆಹಲಿ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿಯ ಭೀಕರ ವಿಮಾನ ಅಪಘಾತದ ಕುರಿತು ಸುಪ್ರೀಂಕೋರ್ಟ್ ಮೇಲ್ವಿಚಾರಣೆಯಲ್ಲಿ…