ಮೈಸೂರು: ಮುಂದಿನ 25 ವರ್ಷಗಳ ಅವಧಿಯಲ್ಲಿ ಪ್ರಧಾನಿ ಮೋದಿ ಅವರು ಭಾರತವನ್ನು ಪ್ರಪಂಚದಲ್ಲಿಯೇ ನಂಬರ್.1 ಸ್ಥಾನಕ್ಕೆ ಕೊಂಡೊಯ್ಯಲು ಶ್ರಮಿಸುತ್ತಿದ್ದು, ಇವರಿಗೆ ಜೊತೆಯಾಗಿ ಕೈ ಜೋಡಿಸಲು ಮೈಸೂರು-ಕೊಡಗು ಕ್ಷೇತ್ರದಿಂದ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಗೆಲ್ಲಿಸಿ ಪಾರ್ಲಿಮೆಂಟಿಗೆ ಕಳುಹಿಸಬೇಕು ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಶ್ ಮನವಿ ಮಾಡಿದ್ದಾರೆ.
ಮೈಸೂರಿನ ಕೆ.ಆರ್ ಕ್ಷೇತ್ರದಲ್ಲಿ ನಡೆದ ಬಿಜೆಪಿ ನಾರಿ ಶಕ್ತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೈಸೂರು ಸ್ವಾತಂತ್ರ ಪೂರ್ವದಲ್ಲಿಯೇ ಅಭಿವೃದ್ಧಿ ಹೊಂದಿದ ನಗರವಾಗಿದೆ. ಈ ಆಧುನಿಕ ನಗರ ನಿರ್ಮಾಣಕ್ಕೆ ಮೈಸೂರು ಮಹಾರಾಜರ ಕೊಡುಗೆ ಬಹಳಷ್ಟಿದೆ. ಇಂತಹ ಮಹಾರಾಜರು ನಿಮ್ಮ ಸೇವೆ ಮಾಡಲು ಮುಂದೆ ಬಂದಿದ್ದು, ಅವರನ್ನು ಅವಿರೋಧವಾಗಿ ಆಯ್ಕೆ ಮಾಡುವ ಮೂಲಕ ಮೈಸೂರು ಮಹಾರಾಜರ ಋಣ ತೀರಿಸಲು ಇರುವ ಅವಕಾಶ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ನುಡಿದರು.
ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಬೆಂಗಳೂರಿನ ಜನರ ಮೇಲೆ ಮಹಾರಾಜರ ಋಣ ಇದೆ. ಈ ಬಾರಿ ಅವರನ್ನು ಗೆಲ್ಲಿಸಿ ಲೋಕಸಭೆಗೆ ಕಳುಹಿಸುವ ಮೂಲಕ ಮಹಾರಾಜರನ್ನು ವಿರೋಧಿಸುವವರಿಗೆ ತಕ್ಕ ಉತ್ತರ ನೀಡಬೇಕಿದೆ ಎಂದು ಸಂಸದೆ ಸುಮಲತಾ ಅಂಬರೀಶ್ ಅವರು ತಿಳಿಸಿದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…