ಮೈಸೂರು

ಪತ್ರಿಕೋದ್ಯಮ : ವಿದ್ಯಾರ್ಹತೆ ಜೊತೆ ಕೌಶಲ ಮುಖ್ಯ

ಮೈಸೂರು: ಪತ್ರಿಕೋದ್ಯಮದ ದಾರಿ ಹಿಡಿಯುವ ವಿದ್ಯಾರ್ಥಿಗಳು ಅಧ್ಯಯನದ ಜೊತೆ ಜಾಗತಿಕ ವಿದ್ಯಮಾನಗಳ ಅರಿವು, ಕೌಶಲ್ಯಗಳನ್ನು ಅರಿಯಬೇಕಿದೆ  ಎಂದು ಪ್ರಜಾವಾಣಿಯ ಮೈಸೂರು ಬ್ಯೂರೋ ಮುಖ್ಯಸ್ಥ ಕೆ.ನರಸಿಂಹಮೂರ್ತಿ ಹೇಳಿದರು.

ಮಾನಸಗಂಗೋತ್ರಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ” ಡೆಸ್ಕ್ ವರ್ಕ್ ಮತ್ತು ವರದಿಗಾರಿಕೆ” ವಿಷಯ ಕುರಿತು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.

ವರದಿಗಾರಿಕೆಗೆ ತೆರಳುವ ಮುನ್ನ ಅನ್ಲೈನ್ ವಿಷಯವಾದರೂ ಸರಿ, ಪುಸ್ತಕಗಳ ಮೂಲಕವಾದರೂ ಒಂದು ವಿಷಯದ ಪೂರ್ಣ ಮಾಹಿತಿಯನ್ನು ವರದಿಗಾರರು ತಿಳಿದಿರಬೇಕು ಎಂದು ಸಲಹೆ ನೀಡಿದರು.

ಡೆಸ್ಕ್ ವರ್ಕ್ ಮತ್ತು ವರದಿಗಾರರು ಒಂದೇ ಸಂಸ್ಥೆಯ ಎರಡು ಕಣ್ಣುಗಳಿದ್ದಂತೆ. ಪ್ರತಿಯೊಂದು ಸಂಸ್ಥೆಯಲ್ಲಿಯೂ ವರದಿಗಾರಿಕೆಯೂ ಇರುತ್ತದೆ ಹಾಗೇ ಸಂಪಾದಕೀಯ ತಂಡವು ಇರುತ್ತದೆ, ಎರಡು ಕೂಡ ವಿಭಿನ್ನವಾಗಿ ಕಾರ್ಯನಿರ್ವಹಿಸಿದರೂ, ವರದಿಗಾರನಿಗೆ ಸಂಪಾದಕನ ಕೆಲಸ ಹಾಗೂ ಸಂಪಾದಕನಿಗೆ ವರದಿಗಾರಿಕೆಯು ತಿಳಿದಿರಬೇಕು ಎಂದು ಅವರು ಹೇಳಿದರು.

ಒಬ್ಬ ಉತ್ತಮ ವರದಿಗಾರನಾದಾಗ ಮಾತ್ರ ಉತ್ತಮ ಸಂಪಾದಕನಾಗಲು ಸಾಧ್ಯ, ಹಾಗೆಯೇ ಉತ್ತಮ ಸಂಪಾದಕನಿಗೆ ವರದಿಗಾರನ ವಿಷಯ ಮತ್ತು ವಸ್ತುಪ್ರಜ್ಞೆ ತಿಳಿದಿರಬೇಕು. ಯಾವುದೇ ವಿಷಯದ ಬಗ್ಗೆ ಬರೆಯುವಾಗ ಅಥವಾ ವರದಿಗಾರಿಕೆ ಮಾಡುವಾಗ ವಿಷಯಗಳ ಕುರಿತು ಆಳವಾದ ಅಧ್ಯಯನ ಮಾಡಿದಾಗ ಮಾತ್ರ ಅದರ ಕುರಿತಾದ ಸಂಪೂರ್ಣ ಚಿತ್ರಣಗಳು ನಮಗೆ ಸಿಗುತ್ತದೆ ಎಂದು ಹೇಳಿದರು.

ತಮ್ಮ ವರದಿಗಾರಿಕೆಯ ಅನುಭವಗಳ ಬಿಚ್ಚಿಡುತ್ತ ಹಲವು ಮುಖ್ಯ ವರದಿಗಾರಿಕೆಗಳ ಕುರಿತು ವಿವರಿಸಿದರು. ಒಬ್ಬ ಪತ್ರಕರ್ತನಿಗೆ ಇರಬೇಕಾದಂತಹ ಗುಣಗಳು ಯಾವುದು? ಆತ ಹೇಗೆ ಒಂದು ವಿಷಯವನ್ನು ವರದಿಗಾರಿಕೆ ಮಾಡಬೇಕು? ಎಂಬುದನ್ನು ಸವಿಸ್ತಾರವಾಗಿ ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿದರು.

ಉಪನ್ಯಾಸದ ನಂತರ ವಿದ್ಯಾರ್ಥಿಗಳಲ್ಲಿದ್ದ ಹಲವು ಗೊಂದಲಗಳಿಗೆ ಸೂಕ್ತವಾದ ಉತ್ತರಗಳನ್ನು ನೀಡಿ ಸಂವಾದವನ್ನು ನಡೆಸಿದರು.

ಕಾರ್ಯಕ್ರಮದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗದ ಮುಖ್ಯಸ್ಥೆ ಪ್ರೊ. ಎನ್ ಮಮತ , ಅತಿಥಿ ಉಪನ್ಯಾಸಕ ಡಾ ಕುಮಾರಸ್ವಾಮಿ, ಸಂಶೋಧನಾ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಾಯುಪಡೆ ಅರಣ್ಯಭೂಮಿ ಮರುವಶಕ್ಕೆ ಪ್ರಕ್ರಿಯೆ : ಈಶ್ವರ ಖಂಡ್ರೆ

ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…

40 mins ago

ಪೆಟ್ರೋಲ್‌,ಡೀಸೆಲ್‌ ಬೆಲೆ ಏರಿಕೆ ಆತಂಕದ ನಡುವೆ ಗುಡ್‌ ನ್ಯೂಸ್‌ ನೀಡಿದ ಕೇಂದ್ರ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಆತಂಕ ಸೃಷ್ಠಿಯಾಗಿರುವ ನಡುವೆ ಕೇಂದ್ರ…

59 mins ago

ಇರಾನ್‌ ಮೇಲಿನ ದಾಳಿಗೆ ಮತ್ತೆ 10 ದಿನ ಗಡುವು ವಿಸ್ತರಿಸಿದ ಟ್ರಂಪ್!‌

ವಾಷಿಂಗ್ಟನ್‌ : ಇರಾನ್‌ ಕೋರಿಕೆಯ ಮೇರೆಗೆ ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು 10 ದಿನ ಮುಂದೂಡಿದ್ದೇವೆ ಎಂದು ಅಮೆರಿಕ ಅಧ್ಯಕ್ಷ…

1 hour ago

IPL 2ನೇ ಹಂತದ ವೇಳಾಪಟ್ಟಿ ಬಿಡುಗಡೆ

ಮುಂಬೈ : ಬಿಸಿಸಿಐ ಮಾರ್ಚ್ 26ರ ಗುರುವಾರದಂದು ಬಹುನಿರೀಕ್ಷಿತ 19 ನೇ ಸೀಸನ್ ಐಪಿಎಲ್‌ನ ಎರಡನೇ ಹಂತದ ವೇಳಾಪಟ್ಟಿಯನ್ನು ಪ್ರಕಟಿಸಿದೆ.…

2 hours ago

ಮೈಸೂರು ವಿಶ್ವವಿದ್ಯಾಲಯ : 53.76 ಕೋಟಿ ರೂ. ವಿತ್ತೀಯ ಕೊರತೆ ಬಜೆಟ್

ಮೈಸೂರು ವಿವಿಯಲ್ಲಿ ಆರ್ಥಿಕ ಶಿಸ್ತು ಇಲ್ಲ ; ಕೋವಿಡ್ ನಂತರದಲ್ಲಿ ಅನುದಾನದ ಕೊರತೆ : ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಮೈಸೂರು :…

2 hours ago

ಓದುಗರ ಪತ್ರ: ವಿ…ರಾಮ ..!

ದೇಶದ ತುಂಬಾ ಇಂದು ಭಕ್ತ ಗಣ ಮಾಡುತ್ತಿದೆ ಜಪ ರಾಮ ರಾಮ... ಆ ಟ್ರಂಪಣ್ಣನೂ ಜಪಿಸುತ್ತಿದ್ದಾರಂತೆ ಯಾವಾಗ ಘೋಷಿಸುತ್ತದೆಯೋ ಇರಾನ್,…

7 hours ago