ಮೈಸೂರು

ಪತ್ರಿಕೋದ್ಯಮ : ವಿದ್ಯಾರ್ಹತೆ ಜೊತೆ ಕೌಶಲ ಮುಖ್ಯ

ಮೈಸೂರು: ಪತ್ರಿಕೋದ್ಯಮದ ದಾರಿ ಹಿಡಿಯುವ ವಿದ್ಯಾರ್ಥಿಗಳು ಅಧ್ಯಯನದ ಜೊತೆ ಜಾಗತಿಕ ವಿದ್ಯಮಾನಗಳ ಅರಿವು, ಕೌಶಲ್ಯಗಳನ್ನು ಅರಿಯಬೇಕಿದೆ  ಎಂದು ಪ್ರಜಾವಾಣಿಯ ಮೈಸೂರು ಬ್ಯೂರೋ ಮುಖ್ಯಸ್ಥ ಕೆ.ನರಸಿಂಹಮೂರ್ತಿ ಹೇಳಿದರು.

ಮಾನಸಗಂಗೋತ್ರಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ” ಡೆಸ್ಕ್ ವರ್ಕ್ ಮತ್ತು ವರದಿಗಾರಿಕೆ” ವಿಷಯ ಕುರಿತು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.

ವರದಿಗಾರಿಕೆಗೆ ತೆರಳುವ ಮುನ್ನ ಅನ್ಲೈನ್ ವಿಷಯವಾದರೂ ಸರಿ, ಪುಸ್ತಕಗಳ ಮೂಲಕವಾದರೂ ಒಂದು ವಿಷಯದ ಪೂರ್ಣ ಮಾಹಿತಿಯನ್ನು ವರದಿಗಾರರು ತಿಳಿದಿರಬೇಕು ಎಂದು ಸಲಹೆ ನೀಡಿದರು.

ಡೆಸ್ಕ್ ವರ್ಕ್ ಮತ್ತು ವರದಿಗಾರರು ಒಂದೇ ಸಂಸ್ಥೆಯ ಎರಡು ಕಣ್ಣುಗಳಿದ್ದಂತೆ. ಪ್ರತಿಯೊಂದು ಸಂಸ್ಥೆಯಲ್ಲಿಯೂ ವರದಿಗಾರಿಕೆಯೂ ಇರುತ್ತದೆ ಹಾಗೇ ಸಂಪಾದಕೀಯ ತಂಡವು ಇರುತ್ತದೆ, ಎರಡು ಕೂಡ ವಿಭಿನ್ನವಾಗಿ ಕಾರ್ಯನಿರ್ವಹಿಸಿದರೂ, ವರದಿಗಾರನಿಗೆ ಸಂಪಾದಕನ ಕೆಲಸ ಹಾಗೂ ಸಂಪಾದಕನಿಗೆ ವರದಿಗಾರಿಕೆಯು ತಿಳಿದಿರಬೇಕು ಎಂದು ಅವರು ಹೇಳಿದರು.

ಒಬ್ಬ ಉತ್ತಮ ವರದಿಗಾರನಾದಾಗ ಮಾತ್ರ ಉತ್ತಮ ಸಂಪಾದಕನಾಗಲು ಸಾಧ್ಯ, ಹಾಗೆಯೇ ಉತ್ತಮ ಸಂಪಾದಕನಿಗೆ ವರದಿಗಾರನ ವಿಷಯ ಮತ್ತು ವಸ್ತುಪ್ರಜ್ಞೆ ತಿಳಿದಿರಬೇಕು. ಯಾವುದೇ ವಿಷಯದ ಬಗ್ಗೆ ಬರೆಯುವಾಗ ಅಥವಾ ವರದಿಗಾರಿಕೆ ಮಾಡುವಾಗ ವಿಷಯಗಳ ಕುರಿತು ಆಳವಾದ ಅಧ್ಯಯನ ಮಾಡಿದಾಗ ಮಾತ್ರ ಅದರ ಕುರಿತಾದ ಸಂಪೂರ್ಣ ಚಿತ್ರಣಗಳು ನಮಗೆ ಸಿಗುತ್ತದೆ ಎಂದು ಹೇಳಿದರು.

ತಮ್ಮ ವರದಿಗಾರಿಕೆಯ ಅನುಭವಗಳ ಬಿಚ್ಚಿಡುತ್ತ ಹಲವು ಮುಖ್ಯ ವರದಿಗಾರಿಕೆಗಳ ಕುರಿತು ವಿವರಿಸಿದರು. ಒಬ್ಬ ಪತ್ರಕರ್ತನಿಗೆ ಇರಬೇಕಾದಂತಹ ಗುಣಗಳು ಯಾವುದು? ಆತ ಹೇಗೆ ಒಂದು ವಿಷಯವನ್ನು ವರದಿಗಾರಿಕೆ ಮಾಡಬೇಕು? ಎಂಬುದನ್ನು ಸವಿಸ್ತಾರವಾಗಿ ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿದರು.

ಉಪನ್ಯಾಸದ ನಂತರ ವಿದ್ಯಾರ್ಥಿಗಳಲ್ಲಿದ್ದ ಹಲವು ಗೊಂದಲಗಳಿಗೆ ಸೂಕ್ತವಾದ ಉತ್ತರಗಳನ್ನು ನೀಡಿ ಸಂವಾದವನ್ನು ನಡೆಸಿದರು.

ಕಾರ್ಯಕ್ರಮದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗದ ಮುಖ್ಯಸ್ಥೆ ಪ್ರೊ. ಎನ್ ಮಮತ , ಅತಿಥಿ ಉಪನ್ಯಾಸಕ ಡಾ ಕುಮಾರಸ್ವಾಮಿ, ಸಂಶೋಧನಾ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

9 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

10 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

10 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

12 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

16 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

16 hours ago