ಮೈಸೂರು

ಸತ್ಯ ನಿಷ್ಠೆಯಿಂದ ಪಕ್ಷ, ವ್ಯಕ್ತಿ ನಿಷ್ಠತೆ ಕಡೆಗೆ ಜಾರುತ್ತಿರುವ ಪತ್ರಿಕೋದ್ಯಮ : ಪ್ರಭಾಕರ್‌ ಬೇಸರ

ಮೈಸೂರು: ಪತ್ರಿಕೋದ್ಯಮದ ಆದ್ಯತೆ ಸತ್ಯ ನಿಷ್ಠೆಯಿಂದ ಪಕ್ಷ ನಿಷ್ಠೆಗೆ ಜಾರಿ ಈಗ ವ್ಯಕ್ತಿ ನಿಷ್ಠತೆ ಕಡೆಗೆ ಜಾರುತ್ತಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್‌ ಬೇಸರಿಸಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಮಾಧ್ಯಮ ಅಕಾಡೆಮಿ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಮೈಸೂರು ವಿಶ್ವವಿದ್ಯಾಲಯದ ಸಹಭಾಗಿತ್ವದ “ಏನ್‌ ಸಮಾಚಾರ ಮೀಡಿಯಾ ಹಬ್ಬ” ಎರಡು ದಿನಗಳ ಕಾರ್ಯಾಗಾರದ ಸಮಾರೋಪ ಭಾಷಣದಲ್ಲಿ ಅವರು ಮಾತನಾಡಿದರು.

ಪಕ್ಷ ಹಾಗೂ ವ್ಯಕ್ತಿ ನಿಷ್ಠೆಗೆ ಜಾರುತ್ತಿರುವ ವೃತ್ತಿ ನೈತಿಕತೆ ಮತ್ತು ತಂತ್ರಜ್ಞಾನದ ಸವಾಲುಗಳನ್ನು ಜೀರ್ಣಿಸಿಕೊಂಡು ವೃತ್ತಿಪರತೆ ರೂಪಿಸಲು ಮಾಧ್ಯಮ ಅಕಾಡೆಮಿಯಿಂದ ಕಾರ್ಯಾಗಾರ ನಡೆಸಲಾಗುತ್ತಿದೆ ಎಂದು ಹೇಳಿದರು.

ಪತ್ರಿಕೋದ್ಯಮಕ್ಕೆ ಭವಿಷ್ಯ ಇಲ್ಲಪ್ಪಾ, ಬೇರೆ ಏನಾದ್ರೂ ಮಾಡೋಣ ಅಂತಿದೀನಿ ಅಂತ ನನ್ನ ಸ್ನೇಹಿತರು ಹೇಳ್ತಾನೇ ಇರ್ತಾರೆ.
ನಿಜ, ಇವತ್ತು ನಾವು-ನೀವು ಅನುಭವಿಸುತ್ತಿರುವ ದಾವಂತದ, ಊಹಾ ಪತ್ರಿಕೋದ್ಯಮಕ್ಕೆ ಭವಿಷ್ಯ ಇಲ್ಲ. ಆದರೆ, ವೃತ್ತಿಪರ ಸತ್ಯ ನಿಷ್ಠ ಪತ್ರಿಕೋದ್ಯಮಕ್ಕೆ ಭವಿಷ್ಯ ಉಜ್ವಲವಾಗಿದೆ. ಸತ್ಯನಿಷ್ಠೆಯ ಪತ್ರಿಕೋದ್ಯಮಕ್ಕೆ ಸಂದರ್ಭ ಹದವಾಗಿದೆ ಎಂದರು.

ವಿದ್ಯಾರ್ಥಿಗಳು ಪತ್ರಿಕೋದ್ಯಮದ ಕೌಶಲ್ಯ, ತಂತ್ರಜ್ಞಾನ ಎಲ್ಲವನ್ನು ಕಲಿಯುವ ಜೊತೆಗೆ ಹೊಣೆಗಾರಿಕೆಯನ್ನೂ ಅರಿತುಕೊಳ್ಳುವುದು ಅತ್ಯಂತ ಅಗತ್ಯವಾಗಿದೆ.

ಪತ್ರಿಕೋದ್ಯಮ ಹಿಂದೆ ಸೇವೆಯಾಗಿತ್ತು. ಇಂದು ಉದ್ಯಮವಾಗಿದೆ. ಹಿಂದೆ ವಸ್ತುನಿಷ್ಠತೆ ಪತ್ರಿಕೋದ್ಯಮದ ಜೀವ ಸೆಲೆ ಆಗಿತ್ತು. ಆದರೆ ಇಂದು ವ್ಯಕ್ತಿ ನಿಷ್ಠತೆ ಪಿಡುಗು ಆತಂಕಕಾರಿಯಾಗಿ ಬೆಳೆಯುತ್ತಿದೆ ಎಂದರು.

ಕಳೆದ ವಾರ ಕಲಬುರಗಿಯಲ್ಲಿ ಇದೇ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಲ್ಲಿಗಿಂತ ಮೈಸೂರಿನ ಮಾಧ್ಯಮ ಹಬ್ಬ ಹೆಚ್ಚು ಯಶಸ್ವಿಯಾಗಿದೆ. ಇದಕ್ಕೆ ವಿದ್ಯಾರ್ಥಿಗಳ ಪರಿಣಾಮಕಾರಿ ಪಾಲ್ಗೊಳ್ಳುವಿಕೆ ಪ್ರಮುಖ ಕಾರಣ ಎಂದರು.‌

ಆದ್ದರಿಂದ ಜನರಿಗೆ ಸರಿಯಾದ ಮಾಹಿತಿ ನೀಡುವ ನಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳುವಂತಿಲ್ಲ. ಇದನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು. ಮಾಧ್ಯಮ ರಂಗದಲ್ಲಿ ನಾವು ಅಪೇಕ್ಷಿಸುವ ಬದಲಾವಣೆ ನಿಮ್ಮಿಂದಲೇ ಪ್ರಾರಂಭವಾಗಲಿ.

ಸತ್ಯದ ಅನ್ವೇಷಣೆ ಹಾಗೂ ವಾಸ್ತವವನ್ನೇ ಜನರ ಮುಂದಿಡುವ ಸಂಕಲ್ಪವನ್ನು ನೀವು, ವಿದ್ಯಾರ್ಥಿಗಳು ಮಾಡಬೇಕು ಎಂದು ಕರೆ ನೀಡಿದರು.

ಎರಡು ದಿನಗಳ ಕಾರ್ಯಾಗಾರದಲ್ಲಿ ನಡೆದ ವಿವಿಧ ವಿಭಾಗಗಳ ಸ್ಫರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಕೆ.ವಿ.ಪ್ರಭಾಕರ್ ಅವರು ಪ್ರಶಸ್ತಿ ಮತ್ತು ಪ್ರಶಸ್ತಿಪತ್ರಗಳನ್ನು ವಿತರಿಸಿ ಶುಭ ಹಾರೈಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಪ್ಪಟ ಸಮಾಜವಾದಿ, ಗುಡಿಸಲೂ ಇರದಿದ್ದ ಜೋಗಿ ಕಿಶನ್ ಪಟ್ನಾಯಕ್

ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…

4 hours ago

ಶೀಘ್ರವೇ ಆಟೋ ಬಾಡಿಗೆ ಪರಿಷ್ಕೃತ ದರ ಪ್ರಕಟ

ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…

4 hours ago

ಜೇನು ಕೃಷಿಗೆ ಸರ್ಕಾರದ ಬಲ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…

4 hours ago

ಜು.20ಕ್ಕೆ ವಿಧಾನಪರಿಷತ್ ಐದು ಸ್ಥಾನ ತೆರವು

ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್‌ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…

4 hours ago

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

13 hours ago