ಮೈಸೂರು

ಸತ್ಯ ನಿಷ್ಠೆಯಿಂದ ಪಕ್ಷ, ವ್ಯಕ್ತಿ ನಿಷ್ಠತೆ ಕಡೆಗೆ ಜಾರುತ್ತಿರುವ ಪತ್ರಿಕೋದ್ಯಮ : ಪ್ರಭಾಕರ್‌ ಬೇಸರ

ಮೈಸೂರು: ಪತ್ರಿಕೋದ್ಯಮದ ಆದ್ಯತೆ ಸತ್ಯ ನಿಷ್ಠೆಯಿಂದ ಪಕ್ಷ ನಿಷ್ಠೆಗೆ ಜಾರಿ ಈಗ ವ್ಯಕ್ತಿ ನಿಷ್ಠತೆ ಕಡೆಗೆ ಜಾರುತ್ತಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್‌ ಬೇಸರಿಸಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಮಾಧ್ಯಮ ಅಕಾಡೆಮಿ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಮೈಸೂರು ವಿಶ್ವವಿದ್ಯಾಲಯದ ಸಹಭಾಗಿತ್ವದ “ಏನ್‌ ಸಮಾಚಾರ ಮೀಡಿಯಾ ಹಬ್ಬ” ಎರಡು ದಿನಗಳ ಕಾರ್ಯಾಗಾರದ ಸಮಾರೋಪ ಭಾಷಣದಲ್ಲಿ ಅವರು ಮಾತನಾಡಿದರು.

ಪಕ್ಷ ಹಾಗೂ ವ್ಯಕ್ತಿ ನಿಷ್ಠೆಗೆ ಜಾರುತ್ತಿರುವ ವೃತ್ತಿ ನೈತಿಕತೆ ಮತ್ತು ತಂತ್ರಜ್ಞಾನದ ಸವಾಲುಗಳನ್ನು ಜೀರ್ಣಿಸಿಕೊಂಡು ವೃತ್ತಿಪರತೆ ರೂಪಿಸಲು ಮಾಧ್ಯಮ ಅಕಾಡೆಮಿಯಿಂದ ಕಾರ್ಯಾಗಾರ ನಡೆಸಲಾಗುತ್ತಿದೆ ಎಂದು ಹೇಳಿದರು.

ಪತ್ರಿಕೋದ್ಯಮಕ್ಕೆ ಭವಿಷ್ಯ ಇಲ್ಲಪ್ಪಾ, ಬೇರೆ ಏನಾದ್ರೂ ಮಾಡೋಣ ಅಂತಿದೀನಿ ಅಂತ ನನ್ನ ಸ್ನೇಹಿತರು ಹೇಳ್ತಾನೇ ಇರ್ತಾರೆ.
ನಿಜ, ಇವತ್ತು ನಾವು-ನೀವು ಅನುಭವಿಸುತ್ತಿರುವ ದಾವಂತದ, ಊಹಾ ಪತ್ರಿಕೋದ್ಯಮಕ್ಕೆ ಭವಿಷ್ಯ ಇಲ್ಲ. ಆದರೆ, ವೃತ್ತಿಪರ ಸತ್ಯ ನಿಷ್ಠ ಪತ್ರಿಕೋದ್ಯಮಕ್ಕೆ ಭವಿಷ್ಯ ಉಜ್ವಲವಾಗಿದೆ. ಸತ್ಯನಿಷ್ಠೆಯ ಪತ್ರಿಕೋದ್ಯಮಕ್ಕೆ ಸಂದರ್ಭ ಹದವಾಗಿದೆ ಎಂದರು.

ವಿದ್ಯಾರ್ಥಿಗಳು ಪತ್ರಿಕೋದ್ಯಮದ ಕೌಶಲ್ಯ, ತಂತ್ರಜ್ಞಾನ ಎಲ್ಲವನ್ನು ಕಲಿಯುವ ಜೊತೆಗೆ ಹೊಣೆಗಾರಿಕೆಯನ್ನೂ ಅರಿತುಕೊಳ್ಳುವುದು ಅತ್ಯಂತ ಅಗತ್ಯವಾಗಿದೆ.

ಪತ್ರಿಕೋದ್ಯಮ ಹಿಂದೆ ಸೇವೆಯಾಗಿತ್ತು. ಇಂದು ಉದ್ಯಮವಾಗಿದೆ. ಹಿಂದೆ ವಸ್ತುನಿಷ್ಠತೆ ಪತ್ರಿಕೋದ್ಯಮದ ಜೀವ ಸೆಲೆ ಆಗಿತ್ತು. ಆದರೆ ಇಂದು ವ್ಯಕ್ತಿ ನಿಷ್ಠತೆ ಪಿಡುಗು ಆತಂಕಕಾರಿಯಾಗಿ ಬೆಳೆಯುತ್ತಿದೆ ಎಂದರು.

ಕಳೆದ ವಾರ ಕಲಬುರಗಿಯಲ್ಲಿ ಇದೇ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಲ್ಲಿಗಿಂತ ಮೈಸೂರಿನ ಮಾಧ್ಯಮ ಹಬ್ಬ ಹೆಚ್ಚು ಯಶಸ್ವಿಯಾಗಿದೆ. ಇದಕ್ಕೆ ವಿದ್ಯಾರ್ಥಿಗಳ ಪರಿಣಾಮಕಾರಿ ಪಾಲ್ಗೊಳ್ಳುವಿಕೆ ಪ್ರಮುಖ ಕಾರಣ ಎಂದರು.‌

ಆದ್ದರಿಂದ ಜನರಿಗೆ ಸರಿಯಾದ ಮಾಹಿತಿ ನೀಡುವ ನಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳುವಂತಿಲ್ಲ. ಇದನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು. ಮಾಧ್ಯಮ ರಂಗದಲ್ಲಿ ನಾವು ಅಪೇಕ್ಷಿಸುವ ಬದಲಾವಣೆ ನಿಮ್ಮಿಂದಲೇ ಪ್ರಾರಂಭವಾಗಲಿ.

ಸತ್ಯದ ಅನ್ವೇಷಣೆ ಹಾಗೂ ವಾಸ್ತವವನ್ನೇ ಜನರ ಮುಂದಿಡುವ ಸಂಕಲ್ಪವನ್ನು ನೀವು, ವಿದ್ಯಾರ್ಥಿಗಳು ಮಾಡಬೇಕು ಎಂದು ಕರೆ ನೀಡಿದರು.

ಎರಡು ದಿನಗಳ ಕಾರ್ಯಾಗಾರದಲ್ಲಿ ನಡೆದ ವಿವಿಧ ವಿಭಾಗಗಳ ಸ್ಫರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಕೆ.ವಿ.ಪ್ರಭಾಕರ್ ಅವರು ಪ್ರಶಸ್ತಿ ಮತ್ತು ಪ್ರಶಸ್ತಿಪತ್ರಗಳನ್ನು ವಿತರಿಸಿ ಶುಭ ಹಾರೈಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

42 mins ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

2 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

3 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

6 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

6 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

6 hours ago