ಮೈಸೂರು

ಮೈಸೂರಿನಲ್ಲಿ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ : ಜಿಲ್ಲಾಧಿಕಾರಿ ಮೆಚ್ಚುಗೆ

ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್‌ ಜಿ. ರೆಡ್ಡಿ ಮೆಚ್ಚುಗೆ ವ್ಯಕ್ತಪಡಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ನೂತನವಾಗಿ ಹೊರ ತಂದಿರುವ ಕ್ಯಾಲೆಂಡರ್‌ ಮತ್ತು ಡೈರಿ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಮೈಸೂರಿನ ಪತ್ರಕರ್ತರು ಜಿಲ್ಲಾಡಳಿತದ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದು, ಅಗತ್ಯ ಸಲಹೆ ಸೂಚನೆಗಳನ್ನು ನೀಡುವ ಮೂಲಕ ಆಡಳಿತಾತ್ಮಕವಾಗಿ ಸಹಕಾರಿಯಾಗಿದ್ದಾರೆ ಎಂದು ನುಡಿದರು.

ತಪ್ಪುಗಳು ನಡೆದಾಗ ತಪ್ಪೆಂದು ಹೇಳುವ ಪತ್ರಕರ್ತರು, ತಪ್ಪುಗಳು ನಡೆಯದಂತೆ ಎಚ್ಚರ ವಹಿಸಲು ಸಹಕಾರಿಯಾಗಿದ್ದಾರೆ. ಬೇರೆ ಜಿಲ್ಲೆಗಳಲ್ಲಿ ಜಿಲ್ಲಾಡಳಿತದ ವಿರುದ್ಧ ನಕಾರಾತ್ಮಕ ಧೋರಣೆ ಹೊಂದಿರುವುದು ಹೆಚ್ಚು ಕಂಡು ಬಂದರೆ, ಮೈಸೂರಿನಲ್ಲಿ ಸಕಾರಾತ್ಮಕ ಧೋರಣೆಯನ್ನು ಕಾಣಬಹುದು. ಇದು ಜನರ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಒಳ್ಳೆಯ ಬೆಳವಣಿಗೆ ಎಂದು ಹೇಳಿದರು.

ಡೈರಿ ಬಿಡುಗಡೆಗೊಳಿಸಿ ಮಾತನಾಡಿದ ಸಿದ್ಧಾರ್ಥ ಗ್ರೂಪ್ಸ್‌ ನ ಮೂಖ್ಯಸ್ಥರಾದ ಪಿ.ವಿ. ಗಿರಿ, ಕಳೆದ 27 ವರ್ಷಗಳಿಂದ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದೊಂದಿಗಿನ ಒಡನಾಟವನ್ನು ಸ್ಮರಿಸಿದರಲ್ಲದೆ, ಪತ್ರಕರ್ತರ ಸಂಖ್ಯೆ ಹೆಚ್ಚಾದಂತೆ ಸಂಘದ ಚಟುವಟಿಕೆಯೂ ಹೆಚ್ಚಾಗಿದೆ. ಸದ್ಯ ಹಳೆ ಪತ್ರಕರ್ತರ ಭವನದಲ್ಲಿ ವಾಹನ ಸಂಚಾರಕ್ಕೆ ಮತ್ತು ಪಾರ್ಕಿಂಗ್‌ ಸಮಸ್ಯೆ ಇದ್ದು, ಶೀಘ್ರ ಹೊಸ ಭವನ ನಿರ್ಮಾಣ ಮಾಡಬೇಕೆಂದು ಸಲಹೆ ನೀಡಿದರು.

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ‌ ಎಸ್.ಯುಕೇಶ್‌ ಕುಮಾರ್ ಮಾತನಾಡಿ, ಪತ್ರಕರ್ತರ ಸಹಕಾರದಿಂದ ಮಾತ್ರ ಜನರ ಜನರನ್ನು ತಲುಪಲು ಸಾಧ್ಯ. ಈ ನಿಟ್ಟಿನಲ್ಲಿ ನನ್ನ ಸೇವಾವಧಿಯಲ್ಲಿ ಅನೇಕ ಪತ್ರಕರ್ತರು ನಮಗೆ ಸಹಕಾರಿಯಾಗಿ ನಿಂತಿದ್ದಾರೆ. ಸಮಾಜ ಏಳಿಗೆಯಲ್ಲಿ ಪತ್ರಕರ್ತರ ಪಾತ್ರವೂ ಮುಖ್ಯ ಎಂದು ತಿಳಿಸಿದರು.

ಸಂಘದ ಅಧ್ಯಕ್ಷ ಕೆ.ದೀಪಕ್ ಮಾತನಾಡಿ, ಮೈಸೂರು ಪತ್ರಕರ್ತರು ವೃತ್ತಿಪರತೆ, ಬದ್ಧತೆಗೆ ಹೆಸರುವಾಸಿ. ಇಲ್ಲಿ ಸುಮಾರು 8೦ಕ್ಕೂ ಹೆಚ್ಚು ಅಧಿಕೃತ ಮಾಧ್ಯಮ ಸಂಸ್ಥಗಳಿವೆ. ಆದರೆ, ಯೂಟ್ಯೂಬ್ ಚಾನೆಲ್‌ಗಳ ಸಂಖ್ಯೆ ೧೭೫ನ್ನು ಮೀರುತ್ತಿದ್ದು, ನೈಜ ಪತ್ರಿಕೋದ್ಯಮ ಮತ್ತು ನೈಜ ಪತ್ರಕರ್ತರಿಗೆ ತಮ್ಮ ಅಸ್ಮಿತೆಯನ್ನು ಉಳಿಸಿಕೊಳ್ಳುವುದು ದೊಡ್ಡ ಸವಾಲಾಗಿದೆ ಎಂದು ತಿಳಿಸಿದರು.

ವೇದಿಕೆಯಲ್ಲಿ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕಿ ನಿರ್ಮಾಲ, ಸಂಘದ ಪ್ರಧಾನ ಕಾರ್ಯದರ್ಶಿ ಧರ್ಮಾಪುರ ನಾರಾಯ ಣ್‌, ಉಪಾಧ್ಯಕ್ಷ ರವಿ ಪಾಂಡವಪುರ, ಕಾರ್ಯದರ್ಶಿ ಕೃಷ್ಣೋಜಿ ರಾವ್‌, ಖಜಾಂಚಿ ಎನ್.‌ ಸುರೇಶ್‌, ಗ್ರಾ. ಕಾರ್ಯದರ್ಶಿ ದಾರಾ ಮಹೇಶ್‌, ಉಪಾಧ್ಯಕ್ಷ ವೆಂಕಟಪ್ಪ ಹಾಜರಿದ್ದರು. ಇದೇ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಪತ್ರಕರ್ತರ ಅಭ್ಯುದಯ ಸಹಕಾರ ಸಂಘದ ನೂತನ ಕ್ಯಾಲೆಂಡರನ್ನು ಬಿಡುಗಡೆಗೊಳಿಸಲಾಯಿತು. ಸಂಘದ ಉಪಾಧ್ಯಕ್ಷ ಹನಗೋಡು ನಟರಾಜ್‌ ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಾರ್ಚ್.‌3ರಂದು ರಕ್ತಚಂದ್ರಗ್ರಹಣ: ರಾಜ್ಯದಲ್ಲಿ 25 ನಿಮಿಷ ಗ್ರಹಣ ಗೋಚರ

ಬೆಂಗಳೂರು: ಮಾರ್ಚ್.‌3ರಂದು ಕೇತುಗ್ರಸ್ತ ಚಂದ್ರಗ್ರಹಣ ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ ಮಾಸದ ಹುಣ್ಣಿಮೆಯ…

15 mins ago

ಮಡಿಕೇರಿ| ಯುವಕರ ಮೇಲೆ ಹಲ್ಲೆ ಪ್ರಕರಣ: ಎಲ್ಲಾ ಆರೋಪಿಗಳ ಬಂಧನ

ಮಡಿಕೇರಿ: ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ ನಡೆಯಲಿರುವ ಹಿಂದೂ ಸಂಗಮ ಕಾರ್ಯಕ್ರಮದ ಕುರಿತು ನಿನ್ನೆ ವಾಹನದಲ್ಲಿ ಪ್ರಚಾರ ಮಾಡುತ್ತಿದ್ದ ಗೌತಮ್‌ ಎಂಬಾತನ…

25 mins ago

ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ: ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿ

ಮೈಸೂರು: ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಮಾರ್ಚ್.‌17ರವರೆಗೂ ನಡೆಯಲಿದೆ. ಮೈಸೂರು ಜಿಲ್ಲೆಯಲ್ಲಿ 35,835 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು,…

1 hour ago

ಮಾ.23ರಿಂದ ವಿಜೃಂಭಣೆಯ ವೈರಮುಡಿ ಬ್ರಹ್ಮೋತ್ಸವ

ಮೇಲುಕೋಟೆ: ಮಾ.೨೩ರಿಂದ ಏ.೩ರವರೆಗೆ ನಡೆಯುವ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿಯ ಪ್ರಖ್ಯಾತ ವೈರಮುಡಿ ಬ್ರಹ್ಮೋತ್ಸವವನ್ನು ವಿಜೃಂಭಣೆಯಿಂದ ನೆರವೇರಿಸಲು ಸಿದ್ಧತೆ ಮಾಡಲಾಗುತ್ತಿದೆ ಎಂದು…

5 hours ago

ಓದುಗರ ಪತ್ರ: ಮೊಬೈಲ್ ಸ್ಟೇಟಸ್ !

ಮೊಬೈಲ್ ಸ್ಟೇಟಸ್ ! ಶಾಲೆಗಳಲ್ಲಿ ಮೊಬೈಲ್ ನಿಷೇಧ..? ಸರ್ಕಾರದ ಮೆಸೇಜ್‌ಗೆ ಲೈಕ್ ನೀಡಬಹುದು ಪೋಷಕರು ! ಆದರೆ, ಸ್ಟೂಡೆಂಟ್‌ಗಳು ?…

5 hours ago

ಓದುಗರ ಪತ್ರ: ಕಿಡಿಗೇಡಿಗಳಿಂದ ವಿದ್ಯಾರ್ಥಿಗಳು ವಿಚಲಿತರಾಗದಿರಿ

ಫೆ.೨೮ರ ಶನಿವಾರದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ. ಎಲ್ಲಾ ಕಾಲೇಜುಗಳಲ್ಲಿ ವ್ಯವಸ್ಥಿತವಾಗಿ ಪಾಠವನ್ನು ಮುಗಿಸಿ ಮಾದರಿ ಪ್ರಶ್ನೆ ಪತ್ರಿಕೆ…

5 hours ago