ಮೈಸೂರು

ಜೆಎಸ್‌ಎಸ್‌ ಮೈಸೂರು ಅರ್ಬನ್‌ ಹಾತ್‌ನಲ್ಲಿ 9ನೇ ಬಾರಿಗೆ ಗುಜರಾತ್‌ ಕರಕುಶಲ ಉತ್ಸವ

ಮೈಸೂರು: ಜೆಎಸ್‌ಎಸ್‌ ಮೈಸೂರು ಅರ್ಬನ್‌ ಹಾತ್‌ನಲ್ಲಿ 9ನೇ ಬಾರಿಗೆ ಗುಜರಾತ್‌ ಕರಕುಶಲ ಉತ್ಸವವನ್ನು ಆಯೋಜನೆ ಮಾಡಲಾಗಿದೆ.

ಜೆಎಸ್‌ಎಸ್‌ ಮಹಾವಿದ್ಯಾಪೀಠದ ಜೆಎಸ್‌ಎಸ್‌ ಮೈಸೂರು ಅರ್ಬನ್‌ ಹಾತ್‌ನಲ್ಲಿ ಸತತವಾಗಿ 9ನೇ ಬಾರಿಗೆ ವಿಶೇಷವಾಗಿ ದೇಶದ ಪ್ರಾಂತೀಯ ಮೇಳವಾದ ಗುಜರಾತ್‌ ಹ್ಯಾಂಡಿಕ್ರಾಫ್ಟ್‌ ಉತ್ಸವ-2024ನ್ನು ಜುಲೈ.5ರಿಂದ 14ರವರೆಗೆ ಆಯೋಜಿಸಲಾಗಿದೆ.

ಮೇಳದ ವಿಶೇಷತೆಗಳೆಂದರೆ, ರಾಜ್ಯ ಹಾಗೂ ರಾಷ್ಟ್ರಮಟ್ಟದ ಪ್ರಶಸ್ತಿ ಪಡೆದಿರುವ ಕುಶಲಕರ್ಮಿಗಳು ಒಂದೇ ಸೂರಿನಡಿ ಕರಕುಶಲ ವಸ್ತುಗಳನ್ನು ಪ್ರದರ್ಶನ ಮತ್ತು ಮಾರಾಟ ಮಾಡುತ್ತಾರೆ.

ಗುಜರಾತ್‌ ರಾಜ್ಯದ ವಿವಿಧ ಭಾಗಗಳ ಪ್ರಸಿದ್ಧ ಹಾಗೂ ಕ್ರಿಯಾಶೀಲರಾಗಿರುವ ಸುಮಾರು 70ಕ್ಕೂ ಹೆಚ್ಚು ಕುಶಲಕರ್ಮಿಗಳು ಮೇಳದಲ್ಲಿ ಭಾಗಿಯಾಗಲಿದ್ದಾರೆ. ಕುಶಲಕರ್ಮಿಗಳು ತಯಾರಿಸಿದ ಪಟೋಲ ಸೀರೆಗಳು, ಬಾಂದಿನಿ ಸೀರೆಗಳು, ಕಸೂತಿ ಮಾಡಿದ ಬೆಡ್‌ಶೀಟ್‌ಗಳು, ಟವಲ್‌ಗಳು, ಕುಶನ್‌ ಕವರ್‌ಗಳು, ಪರಿಸರ ಸ್ನೇಹಿ ಆಭರಣಗಳು, ಡ್ರೆಸ್‌ ಮೆಟಿರೀಯಲ್‌ಗಳು, ಮಣ್ಣಿನಿಂದ ತಯಾರಿಸಿದ ವಸ್ತುಗಳು, ಮೆಟಲ್‌ ವರ್ಕ್‌, ಕುರ್ತಿಗಳು, ಚನಿಯಾ ಚೋಲಿ, ಬಾಂದಿನಿ ಹಾಗೂ ಇನ್ನಿತರ ಆಕರ್ಷಣೀಯ ಕರಕುಶಲ ಹಾಗೂ ಕೈಮಗ್ಗ ಉತ್ಪನ್ನಗಳನ್ನು ಪ್ರದರ್ಶಿಸಿ ಮಾರಾಟ ಮಾಡಲಿದ್ದಾರೆ.

ಜುಲೈ.5ರಂದು ಸಂಜೆ ಗುಜರಾತಿನ ಪ್ರಸಿದ್ಧ ಸಾಂಸ್ಕೃತಿಕ ಕಲಾ ತಂಡಗಳಿಂದ ಗರ್ಭಾ ನೃತ್ಯ ಪ್ರದರ್ಶನಗೊಳ್ಳಲಿದೆ. ಮೈಸೂರಿನ ಕಲಾ ರಸಿಕರು ಉಚಿತವಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಇದೊಂದು ಸುವರ್ಣ ಅವಕಾಶವಾಗಿದೆ.

ಇನ್ನೂ ಈ ಮೇಳದ ವಿಶೇಷವೆಂದರೆ, ಶಾಲಾ ಮಕ್ಕಳಿಗೆ, ಮಹಿಳೆಯರಿಗೆ ಹಾಗೂ ಕಾರ್ಪೋರೇಟ್‌ಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಆಸಕ್ತಿಯುಳ್ಳವರಿಗೆ ಗುಜರಾತಿನ ಪಾರಂಪರಿಕ ಕಲೆಯ ಬಗ್ಗೆ ತರಬೇತಿಯನ್ನು ಗುಜರಾತಿನ ಕುಶಲಕರ್ಮಿಗಳು ನೀಡಲಿದ್ದಾರೆ.

ಗುಜರಾತ್‌ ಹ್ಯಾಂಡಿಕ್ರಾಫ್ಟ್‌ ಉತ್ಸವದ ಉದ್ಘಾಟನೆಯನ್ನು ಜುಲೈ.5ರಂದು ಶುಕ್ರವಾರ ಸಂಜೆ 4 ಗಂಟೆಗೆ ಏರ್ಪಡಿಸಲಾಗಿದೆ. ಮೇಳದ ಉದ್ಘಾಟನೆಯನ್ನು ಶ್ರೀವಿದ್ಯಾ ಅವರು ನೆರವೇರಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ.ಸಿ.ಜಿ.ಬೆಟಸೂರಮಠ ಅವರು ವಹಿಸಲಿದ್ದಾರೆ. ಈ ಮೇಳಕ್ಕೆ ಪ್ರವೇಶ ಉಚಿತವಾಗಿರಲಿದ್ದು, ಮೈಸೂರು ನಗರ ಬಸ್‌ ನಿಲ್ದಾಣದಿಂದ ಪ್ರತಿ ದಿನ ಬಸ್ಸುಗಳು ಜೆಎಸ್‌ಎಸ್‌ ಮೈಸೂರು ಅರ್ಬನ್‌ ಹಾತ್‌ಗೆ ಸಂಚರಿಸಲಿವೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮೈಸೂರು: ಬೀದಿನಾಯಿ ಹೊತ್ತೊಯ್ದ ಚಿರತೆ

ಮೈಸೂರು: ಚಿರತೆಯೊಂದು ರಾತ್ರೋರಾತ್ರಿ ಬೀದಿ ನಾಯಿಯನ್ನು ಹೊತ್ತೊಯ್ದಿರುವ ಘಟನೆ ಮೈಸೂರಿನ ಹೊರವಲಯದ ಬೆಳಗಾವಿ ಗ್ರಾಮದಲ್ಲಿ ನಡೆದಿದೆ. ಮೈಸೂರು ಜಿಲ್ಲೆಯಲ್ಲಿ ಕಾಡು…

4 mins ago

ಸಾರ್ವಕಾಲಿಕ ದಾಖಲೆ ಸೃಷ್ಟಿಸಿದ ಚಿನ್ನ, ಬೆಳ್ಳಿ ಬೆಲೆ

ಬೆಂಗಳೂರು,- ನಿರಂತರ ಏರಿಕೆಯಿಂದಾಗಿ ಚಿನ್ನ, ಬೆಳ್ಳಿ ಬೆಲೆಯು ಸಾರ್ವಕಾಲಿಕ ದಾಖಲೆ ಸೃಷ್ಟಿಸಿದೆ. ಇಂದು ಪ್ರತೀ ಗ್ರಾಂ ಚಿನ್ನಕ್ಕೆ (24 ಕ್ಯಾರೆಟ್)…

13 mins ago

ಟೆಕ್ಸಾಸ್‌ ಕರಾವಳಿ ಬಳಿ ಮೆಕ್ಸಿಕನ್‌ ನೌಕಾಪಡೆ ವಿಮಾನ ಪತನ: 5 ಮಂದಿ ಸಾವು

ಅಮೇರಿಕಾ: ಯುವ ರೋಗಿಯನ್ನು ಹಾಗೂ ಇತರ ಏಳು ಜನರನ್ನು ಸಾಗಿಸುತ್ತಿದ್ದ ಮೆಕ್ಸಿಕ್ನ ನೌಕಾಪಡೆಯ ಸಣ್ಣ ವಿಮಾನವು ಗಾಲ್ವೆಸ್ಟನ್‌ ಬಳಿ ಪತನಗೊಂಡು…

52 mins ago

ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ರಾಯಭಾರಿಯಾಗಿ ಪ್ರಕಾಶ್‌ ರಾಜ್‌ ಆಯ್ಕೆ

ಬೆಂಗಳೂರು: 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ನಟ ಪ್ರಕಾಶ್‌ ರಾಜ್‌ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.…

1 hour ago

ನಾಯಕತ್ವ ಬದಲಾವಣೆ ವಿಚಾರ: ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಿಷ್ಟು.!

ಬೆಂಗಳೂರು: ನಾಯಕತ್ವದ ಬದಲಾವಣೆಯ ವಿಚಾರವಾಗಿ ಹೈಕಮಾಂಡ್ ನಾಯಕರು ಹೇಳಿದಂತೆ ನಡೆದುಕೊಳ್ಳುತ್ತೇವೆ. ಸ್ಥಳೀಯ ನಾಯಕರೇ ಗೊಂದಲಗಳನ್ನು ಬಗೆಹರಿಸಿಕೊಳ್ಳಬೇಕು ಎಂದು ಎಐಸಿಸಿ ಅಧ್ಯಕ್ಷ…

1 hour ago

ರೈತರಿಗೆ, ಜನರಿಗೆ ರಕ್ಷಣೆ ಕೊಡುವುದು ನಮ್ಮ ಕರ್ತವ್ಯ: ಸಚಿವ ಕೆ.ವೆಂಕಟೇಶ್‌

ಚಾಮರಾಜನಗರ: ಒಟ್ಟಿಗೆ ಐದು ಹುಲಿಗಳು ಕಾಣಿಸಿಕೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಕೆ.ವೆಂಕಟೇಶ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ…

2 hours ago