ಮೈಸೂರು

ಜೆಎಸ್‌ಎಸ್‌ ಮೈಸೂರು ಅರ್ಬನ್‌ ಹಾತ್‌ನಲ್ಲಿ 9ನೇ ಬಾರಿಗೆ ಗುಜರಾತ್‌ ಕರಕುಶಲ ಉತ್ಸವ

ಮೈಸೂರು: ಜೆಎಸ್‌ಎಸ್‌ ಮೈಸೂರು ಅರ್ಬನ್‌ ಹಾತ್‌ನಲ್ಲಿ 9ನೇ ಬಾರಿಗೆ ಗುಜರಾತ್‌ ಕರಕುಶಲ ಉತ್ಸವವನ್ನು ಆಯೋಜನೆ ಮಾಡಲಾಗಿದೆ.

ಜೆಎಸ್‌ಎಸ್‌ ಮಹಾವಿದ್ಯಾಪೀಠದ ಜೆಎಸ್‌ಎಸ್‌ ಮೈಸೂರು ಅರ್ಬನ್‌ ಹಾತ್‌ನಲ್ಲಿ ಸತತವಾಗಿ 9ನೇ ಬಾರಿಗೆ ವಿಶೇಷವಾಗಿ ದೇಶದ ಪ್ರಾಂತೀಯ ಮೇಳವಾದ ಗುಜರಾತ್‌ ಹ್ಯಾಂಡಿಕ್ರಾಫ್ಟ್‌ ಉತ್ಸವ-2024ನ್ನು ಜುಲೈ.5ರಿಂದ 14ರವರೆಗೆ ಆಯೋಜಿಸಲಾಗಿದೆ.

ಮೇಳದ ವಿಶೇಷತೆಗಳೆಂದರೆ, ರಾಜ್ಯ ಹಾಗೂ ರಾಷ್ಟ್ರಮಟ್ಟದ ಪ್ರಶಸ್ತಿ ಪಡೆದಿರುವ ಕುಶಲಕರ್ಮಿಗಳು ಒಂದೇ ಸೂರಿನಡಿ ಕರಕುಶಲ ವಸ್ತುಗಳನ್ನು ಪ್ರದರ್ಶನ ಮತ್ತು ಮಾರಾಟ ಮಾಡುತ್ತಾರೆ.

ಗುಜರಾತ್‌ ರಾಜ್ಯದ ವಿವಿಧ ಭಾಗಗಳ ಪ್ರಸಿದ್ಧ ಹಾಗೂ ಕ್ರಿಯಾಶೀಲರಾಗಿರುವ ಸುಮಾರು 70ಕ್ಕೂ ಹೆಚ್ಚು ಕುಶಲಕರ್ಮಿಗಳು ಮೇಳದಲ್ಲಿ ಭಾಗಿಯಾಗಲಿದ್ದಾರೆ. ಕುಶಲಕರ್ಮಿಗಳು ತಯಾರಿಸಿದ ಪಟೋಲ ಸೀರೆಗಳು, ಬಾಂದಿನಿ ಸೀರೆಗಳು, ಕಸೂತಿ ಮಾಡಿದ ಬೆಡ್‌ಶೀಟ್‌ಗಳು, ಟವಲ್‌ಗಳು, ಕುಶನ್‌ ಕವರ್‌ಗಳು, ಪರಿಸರ ಸ್ನೇಹಿ ಆಭರಣಗಳು, ಡ್ರೆಸ್‌ ಮೆಟಿರೀಯಲ್‌ಗಳು, ಮಣ್ಣಿನಿಂದ ತಯಾರಿಸಿದ ವಸ್ತುಗಳು, ಮೆಟಲ್‌ ವರ್ಕ್‌, ಕುರ್ತಿಗಳು, ಚನಿಯಾ ಚೋಲಿ, ಬಾಂದಿನಿ ಹಾಗೂ ಇನ್ನಿತರ ಆಕರ್ಷಣೀಯ ಕರಕುಶಲ ಹಾಗೂ ಕೈಮಗ್ಗ ಉತ್ಪನ್ನಗಳನ್ನು ಪ್ರದರ್ಶಿಸಿ ಮಾರಾಟ ಮಾಡಲಿದ್ದಾರೆ.

ಜುಲೈ.5ರಂದು ಸಂಜೆ ಗುಜರಾತಿನ ಪ್ರಸಿದ್ಧ ಸಾಂಸ್ಕೃತಿಕ ಕಲಾ ತಂಡಗಳಿಂದ ಗರ್ಭಾ ನೃತ್ಯ ಪ್ರದರ್ಶನಗೊಳ್ಳಲಿದೆ. ಮೈಸೂರಿನ ಕಲಾ ರಸಿಕರು ಉಚಿತವಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಇದೊಂದು ಸುವರ್ಣ ಅವಕಾಶವಾಗಿದೆ.

ಇನ್ನೂ ಈ ಮೇಳದ ವಿಶೇಷವೆಂದರೆ, ಶಾಲಾ ಮಕ್ಕಳಿಗೆ, ಮಹಿಳೆಯರಿಗೆ ಹಾಗೂ ಕಾರ್ಪೋರೇಟ್‌ಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಆಸಕ್ತಿಯುಳ್ಳವರಿಗೆ ಗುಜರಾತಿನ ಪಾರಂಪರಿಕ ಕಲೆಯ ಬಗ್ಗೆ ತರಬೇತಿಯನ್ನು ಗುಜರಾತಿನ ಕುಶಲಕರ್ಮಿಗಳು ನೀಡಲಿದ್ದಾರೆ.

ಗುಜರಾತ್‌ ಹ್ಯಾಂಡಿಕ್ರಾಫ್ಟ್‌ ಉತ್ಸವದ ಉದ್ಘಾಟನೆಯನ್ನು ಜುಲೈ.5ರಂದು ಶುಕ್ರವಾರ ಸಂಜೆ 4 ಗಂಟೆಗೆ ಏರ್ಪಡಿಸಲಾಗಿದೆ. ಮೇಳದ ಉದ್ಘಾಟನೆಯನ್ನು ಶ್ರೀವಿದ್ಯಾ ಅವರು ನೆರವೇರಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ.ಸಿ.ಜಿ.ಬೆಟಸೂರಮಠ ಅವರು ವಹಿಸಲಿದ್ದಾರೆ. ಈ ಮೇಳಕ್ಕೆ ಪ್ರವೇಶ ಉಚಿತವಾಗಿರಲಿದ್ದು, ಮೈಸೂರು ನಗರ ಬಸ್‌ ನಿಲ್ದಾಣದಿಂದ ಪ್ರತಿ ದಿನ ಬಸ್ಸುಗಳು ಜೆಎಸ್‌ಎಸ್‌ ಮೈಸೂರು ಅರ್ಬನ್‌ ಹಾತ್‌ಗೆ ಸಂಚರಿಸಲಿವೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

6 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

6 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

6 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

6 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

7 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

7 hours ago