ಮೈಸೂರು

ಹನಿಟ್ರ್ಯಾಪ್‌ ಕೇಸ್‌ನಲ್ಲಿ ಅಮಿತ್‌ ಶಾ ಅವರೇ ನಿಜವಾದ ಕಿಂಗ್‌ ಪಿನ್‌: ಕೆ.ಹರೀಶ್‌ ಗೌಡ

ಮೈಸೂರು: ಹನಿಟ್ರ್ಯಾಪ್‌ ಕೇಸ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರೇ ನಿಜವಾದ ಕಿಂಗ್‌ ಪಿನ್‌. ಇದರಲ್ಲಿ ನಮ್ಮ ಸರ್ಕಾರದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರದ್ದು ಯಾವುದೇ ಪಾತ್ರವಿಲ್ಲವೆಂದು ಕಾಂಗ್ರೆಸ್‌ ಶಾಸಕ ಕೆ.ಹರೀಶ್‌ ಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಮೈಸೂರಿನಲ್ಲಿ ಇಂದು(ಮಾರ್ಚ್‌.24) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಹನಿಟ್ರ್ಯಾಪ್‌ ವಿಚಾರಕ್ಕೆ ಸಂಬಂಧಿಸಿದಂತೆ ನಾನು ಸಹ ಆರು ತಿಂಗಳ ಹಿಂದೆ ದೂರು ದಾಖಲಿಸಿದ್ದೆ. ಈ ಭಾಗದ ಅನೇಕಇಗೆ ಹನಿಟ್ರ್ಯಾಪ್‌ ಆಗಿತ್ತು. ಈಗೀಗ ರಾಜಕಾರಣಿಗಳಿಗೆ ಮಾತ್ರವಲ್ಲ ಪ್ರೊಫೆಸರ್, ಕೈಗಾರಿಕೋದ್ಯಮಿ ಮತ್ತು ಸಾಮಾನ್ಯ ಜನರನ್ನು ಟಾರ್ಗೆಟ್‌ ಮಾಡಲಾಗುತ್ತಿದೆ ಎಂದರು.

ಹನಿಟ್ರ್ಯಾಪ್ ಹಿಂದೆ ಅಮಿತ್ ಶಾ ಪಾತ್ರವಿದೆ. ಅವರೇ ನಿಜವಾದ ಕಿಂಗ್ ಪಿನ್ ಆಗಿದ್ದಾರೆ. ಈ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್‌ ಅವರ ಯಾವುದೇ ಪಾತ್ರವಿಲ್ಲ. ಶಾಸಕ ಮುನಿರತ್ನ ಸುಮ್ಮನೆ ಅಪಾದನೆ ಮಾಡುತ್ತಾರೆ. ಈ ವಿಚಾರದ ಬಗ್ಗೆ ಹೇಳಲು ಅವನ್ಯಾರು? ಅವನೇ ದೊಡ್ಡ ಕೆಡಿ, ಅವರು ಮತ್ತೊಬ್ಬರ ಬಗ್ಗೆ ಆರೋಪ ಮಾಡುವುದು ಸರಿಯಲ್ಲ. ಆದರೆ ನಮಗೆ ಒಂದು ‌ಕಡೆ ಯಾವಾಗಲೂ ಭಯವಾಗುತ್ತದೆ. ಸದನದಲ್ಲಿ ಎಲ್ಲಿ ಎಚ್‌ಐವಿ ಇಂಜೆಕ್ಷನ್ ಮಾಡಿಬಿಡ್ತಾನೋ ಎಂಬ ಭಯ. ಅನೇಕರಿಗೆ ಅವನು ಎಚ್‌ಐವಿ ಇಂಜೆಕ್ಷನ್ ಮಾಡಲು ಹೋಗಿದ್ದವನು ಎಂದು ಕಿಡಿಕಾರಿದರು.

ಇನ್ನು ಮುನಿರತ್ನ ಅವರೇ ಹಲವರ ಸಿಡಿ ಮಾಡಿಸಿಟ್ಟುಕೊಂಡಿದ್ದು, ರಾಜಕಾರಣಿಗಳಿಗೆ ಉಳಿಗಾಲವಿಲ್ಲ. ಹಾಗಾಗಿ ರಾಜಕಾರಣ ಮುಂದೇ ಯಾವ ಸ್ಥಿತಿಗಾದರೂ ತಲುಪಬಹುದು. ಆರೋಗ್ಯಕರವಾದ ರಾಜಕಾರಣ ಅಸಹ್ಯ ಹುಟ್ಟಿಸಿದ್ದು, ನನಗೆ ರಾಜಕಾರಣ‌ ಸಾಕಾಗಿದೆ. ಈ ಬೆಳವಣಿಗೆ ಗಮನಿಸಿದರೆ ರಾಜಕಾರಣವೇ ಬೇಡ ಎನ್ನಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

15 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

15 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

17 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

20 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

20 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

1 day ago