ಮೈಸೂರು: ಹನಿಟ್ರ್ಯಾಪ್ ಕೇಸ್ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ನಿಜವಾದ ಕಿಂಗ್ ಪಿನ್. ಇದರಲ್ಲಿ ನಮ್ಮ ಸರ್ಕಾರದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರದ್ದು ಯಾವುದೇ ಪಾತ್ರವಿಲ್ಲವೆಂದು ಕಾಂಗ್ರೆಸ್ ಶಾಸಕ ಕೆ.ಹರೀಶ್ ಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಮೈಸೂರಿನಲ್ಲಿ ಇಂದು(ಮಾರ್ಚ್.24) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಹನಿಟ್ರ್ಯಾಪ್ ವಿಚಾರಕ್ಕೆ ಸಂಬಂಧಿಸಿದಂತೆ ನಾನು ಸಹ ಆರು ತಿಂಗಳ ಹಿಂದೆ ದೂರು ದಾಖಲಿಸಿದ್ದೆ. ಈ ಭಾಗದ ಅನೇಕಇಗೆ ಹನಿಟ್ರ್ಯಾಪ್ ಆಗಿತ್ತು. ಈಗೀಗ ರಾಜಕಾರಣಿಗಳಿಗೆ ಮಾತ್ರವಲ್ಲ ಪ್ರೊಫೆಸರ್, ಕೈಗಾರಿಕೋದ್ಯಮಿ ಮತ್ತು ಸಾಮಾನ್ಯ ಜನರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದರು.
ಹನಿಟ್ರ್ಯಾಪ್ ಹಿಂದೆ ಅಮಿತ್ ಶಾ ಪಾತ್ರವಿದೆ. ಅವರೇ ನಿಜವಾದ ಕಿಂಗ್ ಪಿನ್ ಆಗಿದ್ದಾರೆ. ಈ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ ಅವರ ಯಾವುದೇ ಪಾತ್ರವಿಲ್ಲ. ಶಾಸಕ ಮುನಿರತ್ನ ಸುಮ್ಮನೆ ಅಪಾದನೆ ಮಾಡುತ್ತಾರೆ. ಈ ವಿಚಾರದ ಬಗ್ಗೆ ಹೇಳಲು ಅವನ್ಯಾರು? ಅವನೇ ದೊಡ್ಡ ಕೆಡಿ, ಅವರು ಮತ್ತೊಬ್ಬರ ಬಗ್ಗೆ ಆರೋಪ ಮಾಡುವುದು ಸರಿಯಲ್ಲ. ಆದರೆ ನಮಗೆ ಒಂದು ಕಡೆ ಯಾವಾಗಲೂ ಭಯವಾಗುತ್ತದೆ. ಸದನದಲ್ಲಿ ಎಲ್ಲಿ ಎಚ್ಐವಿ ಇಂಜೆಕ್ಷನ್ ಮಾಡಿಬಿಡ್ತಾನೋ ಎಂಬ ಭಯ. ಅನೇಕರಿಗೆ ಅವನು ಎಚ್ಐವಿ ಇಂಜೆಕ್ಷನ್ ಮಾಡಲು ಹೋಗಿದ್ದವನು ಎಂದು ಕಿಡಿಕಾರಿದರು.
ಇನ್ನು ಮುನಿರತ್ನ ಅವರೇ ಹಲವರ ಸಿಡಿ ಮಾಡಿಸಿಟ್ಟುಕೊಂಡಿದ್ದು, ರಾಜಕಾರಣಿಗಳಿಗೆ ಉಳಿಗಾಲವಿಲ್ಲ. ಹಾಗಾಗಿ ರಾಜಕಾರಣ ಮುಂದೇ ಯಾವ ಸ್ಥಿತಿಗಾದರೂ ತಲುಪಬಹುದು. ಆರೋಗ್ಯಕರವಾದ ರಾಜಕಾರಣ ಅಸಹ್ಯ ಹುಟ್ಟಿಸಿದ್ದು, ನನಗೆ ರಾಜಕಾರಣ ಸಾಕಾಗಿದೆ. ಈ ಬೆಳವಣಿಗೆ ಗಮನಿಸಿದರೆ ರಾಜಕಾರಣವೇ ಬೇಡ ಎನ್ನಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…