ಮೈಸೂರು

ಕೆ.ಆರ್.ನಗರ | ಗಾಂಜಾ ಮಾರಾಟ : ಇಬ್ಬರ ಬಂಧನ

ಕೆ.ಆರ್.ನಗರ : ಪಟ್ಟಣದಲ್ಲಿ ಇಬ್ಬರು ಯುವಕರು ಮಾರುತಿ ಕಾರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಬಂಧಿಸಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಕೊಡುಗು ಜಿಲ್ಲೆಯ ಮಕ್ಕಂದೂರಿನ ರಾಜರಾಜೇಶ್ವರಿ ನಗರ ಎಂ.ವಿ.ಮಹಮ್ಮದ್ ಮಿರ್ಶದ್ ಬಿನ್ ವಾಜಿದ್,(೨೩) ಹಾಗೂ ಕುಶಾಲನಗರ ತಾಲೂಕಿನ ಕಲಂದರ್ ಹಾರಂಗಿ ಯೋಜನೆ, ಯಡವನಾಡು ಅರಣ್ಯದ ಎಲ್ ಪದ್ಮನಾಭ ಬಿನ್ ಆರ್ ಲೋಕೇಶ್, (೨೩) ಬಂಧಿಸಿ ನ್ಯಾಯಾಲಕ್ಕೆ ಹಾಜರು ಪಡಿಸಿ, ಬಳಿಕ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ.

ಪಟ್ಟಣದ ಚೀರಹಳ್ಳಿ ಮುಖ್ಯ ರಸ್ತೆಯ ಸಾಯಿ ಕನ್ವೆನ್ಸನ್ ಹಾಲ್ ಬಳಿ ಅಬಕಾರಿ ಅಧಿಕಾರಿಗಳು ಗಸ್ತು ನಡೆಸುತ್ತಿದ್ದಾಗ ಕೆ.ಆರ್.ನಗರ-ಮೈಸೂರು ಮುಖ್ಯ ರಸ್ತೆಯಲ್ಲಿರುವ ತೋಪಮ್ಮ ದೇವಸ್ಥಾನದ ಬಳಿ ಇಬ್ಬರು ಆಸಾಮಿಗಳು ಬಿಳಿ ಬಣ್ಣದ ಮಾರುತಿ ೮೦೦ ಕಾರು ಸಂಖ್ಯೆ ಕೆಎ-೧೯ ಎಂ-೮೩೬೬ ರಲ್ಲಿ ಅಕ್ರಮವಾಗಿ ಒಣ ಗಾಂಜಾವನ್ನು ಇಟ್ಟುಕೊಂಡು ರಸ್ತೆಯ ಬದಿಯಲ್ಲಿ ವಾಹನವನ್ನು ನಿಲ್ಲಿಸಿ ಮಾರಾಟದ ಮಾಡಲಾಗುತ್ತದೆ ಎಂಬ ದೊರೆತ ಮಾಹಿತಿಯ ಮೇರೆಗೆ ದಾಳಿ ನಡೆಸಲಾಗಿ ೯೭೪ ಗ್ರಾಂ ತೂಕದ ಬೀಜ ಮಿಶ್ರಿತ ಒಣ ಗಾಂಜಾವನ್ನು ಅಕ್ರಮವಾಗಿ ಮಾರಾಟದ ಉದ್ದೇಶದಿಂದ ಸಾಗಾಣಿಕೆ ಮಾಡುತ್ತಿರುವುದು ಪತ್ತೆಯಾಗಿದ್ದು ದೊರೆತ ಗಾಂಜಾವನ್ನು ವಶಕ್ಕೆ ಪಡಿಸಿಕೊಂಡಿದ್ದೇವೆ ಎಂದು ಪಟ್ಟಣದ ಅಬಕಾರಿ ಇನ್ಸ್ ಪೆಕ್ಟರ್ ವೈ.ಎಸ್. ಲೋಕೇಶ್ ತಿಳಿಸಿದ್ದಾರೆ.

ಇದನ್ನೂ ಓದಿ:-ಮಿಷನ್ 40 ಫಾರ್ 90 ಡೇಸ್ : ಮಂಡ್ಯ ಜಿಲ್ಲೆಯಲ್ಲಿ SSLC ಫಲಿತಾಂಶ ಹೆಚ್ಚಳಕ್ಕೆ ವಿಶೇಷ ಅಭಿಯಾನ

ಮಾರುತಿ ಕಾರಿನಲ್ಲಿ ಗಾಂಜಾ ಸಾಗಾಣಿಕೆ ಮತ್ತು ಮಾರಾಟ ಮಾಡಲಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ವಿಭಾಗದ ಜಂಟಿ ಆಯುಕ್ತರಾದ ಬಸವರಾಜ ಹಡಪದ ಹಾಗೂ ಮೈಸೂರು ಜಿಲ್ಲೆ ಗ್ರಾಮಾಂತರ ಅಬಕಾರಿ ಉಪ ಆಯುಕ್ತರಾದ ಡಾ.ಮಹದೇವಿ ಬಾಯಿ, ಹುಣಸೂರಿನ ಅಬಕಾರಿ ಉಪಅಧಿಕ್ಷಕರಾದ ಎಂ.ಡಿ.ಮೋಹನ್ ಕುಮಾರ್ ಇವರುಗಳ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ಮಾಡಲಾಯಿತು.

ಕಾರ್ಯಾಚರಣೆಯ ದಾಳಿ ವೇಳೆಯಲ್ಲಿ ಅಬಕಾರಿ ಸಬ್ ಇನ್ಸ್ ಪೆಕ್ಟರ್ ಸಿ.ವಿ.ರಾಘವೇಂದ್ರ, ಮುಖ್ಯ ಪೇದೆ ಕೆ.ಪಿ..ಶಿವಕುಮಾರ್, ಅಬಕಾರಿ ಪೇದೆ ಶಿವಪ್ಪಮಾಳಪ್ಪ ಭಾನುಸಿ, ಮತ್ತು ವಾಹನ ಚಾಲಕರಾದ ಮಹದೇವ.ಕೆ – ಗೃಹರಕ್ಷದಳ ಸಿಬ್ಬಂದಿಯಾದ ರವೀಶ.ಆರ್ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಪಂಚ ಗ್ಯಾರಂಟಿಯಿಂದ ಅಭಿವೃದ್ಧಿ ಆಗಿದೆಯೇ?: ತಜ್ಞರಿಂದ ಸಮೀಕ್ಷೆಗೆ ವಿಶ್ವನಾಥ್‌ ಒತ್ತಾಯ

ಮೈಸೂರು: ಪಂಚ ಗ್ಯಾರಂಟಿಗಳನ್ನು ನೀಡಿದ ನಂತರ ರಾಜ್ಯದಲ್ಲಿ ಅಭಿವೃದ್ಧಿ ಆಗಿದೆಯೋ ಇಲ್ಲವೋ ಎಂಬ ಬಗ್ಗೆ ಸಮೀಕ್ಷೆ ನಡೆಸಲು ತಜ್ಞರ ಸಮಿತಿ…

13 mins ago

3.40 ಕೋಟಿ ಹಣ ಎಟಿಎಂಗೆ ಹಾಕದೇ ವಂಚನೆ: ಸಿಎಂಎಸ್‌ ಕಂಪನಿಯ ಇಬ್ಬರ ವಿರುದ್ಧ ಎಫ್‌ಐಆರ್‌

ಹಾಸನ: ಎಟಿಎಂಗೆ ಹಣ ಹಾಕದೇ ವಂಚನೆ ಮಾಡಿದ್ದ ಸಿಎಂಎಸ್‌ ಕಂಪನಿಯ ಇಬ್ಬರು ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಬಡಾವಣೆ ಪೊಲೀಸ್‌…

30 mins ago

ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಸಿಎಂ ಹಾಗೂ ದೊಡ್ಡ ಕೈವಾಡ: ಪ್ರಹ್ಲಾದ್‌ ಜೋಶಿ ಆರೋಪ

ಕಲಬುರ್ಗಿ: ಸಿಸಿಬಿಯಿಂದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಸಿಎಂ ದೊಡ್ಡ ಕೈವಾಡವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌…

51 mins ago

ಕೋರ್ಟ್‌ ಆದೇಶದ ಬೆನ್ನಲ್ಲೇ ಎಲ್ಲಾ ದೇಶಗಳಿಗೆ ಶೇ.10ರಷ್ಟು ಸುಂಕ ಆದೇಶಕ್ಕೆ ಟ್ರಂಪ್‌ ಸಹಿ

ವಾಷಿಂಗ್ಟನ್:‌ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಎಲ್ಲಾ ದೇಶಗಳ ಆಮದುಗಳ ಮೇಲೆ ತಾತ್ಕಾಲಿಕವಾಗಿ 10% ಸುಂಕವನ್ನು ಘೋಷಿಸಿದ್ದಾರೆ. ಸುಪ್ರೀಂಕೋರ್ಟ್‌ ರದ್ದುಗೊಳಿಸಿದ…

1 hour ago

ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಳ: ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೇ ಏರಿಕೆಯಾಗುತ್ತಿದ್ದು, ಬಿಸಿಲಿನ ಅಲೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

1 hour ago

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಒಣಹವೆ ಮುಂದುವರಿದಿದ್ದು, ಕೆಲವು ಭಾಗದಲ್ಲಿ ಇಂದು ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ…

2 hours ago