ಮೈಸೂರು

ಕೆ.ಆರ್.ನಗರ | ಗಾಂಜಾ ಮಾರಾಟ : ಇಬ್ಬರ ಬಂಧನ

ಕೆ.ಆರ್.ನಗರ : ಪಟ್ಟಣದಲ್ಲಿ ಇಬ್ಬರು ಯುವಕರು ಮಾರುತಿ ಕಾರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಬಂಧಿಸಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಕೊಡುಗು ಜಿಲ್ಲೆಯ ಮಕ್ಕಂದೂರಿನ ರಾಜರಾಜೇಶ್ವರಿ ನಗರ ಎಂ.ವಿ.ಮಹಮ್ಮದ್ ಮಿರ್ಶದ್ ಬಿನ್ ವಾಜಿದ್,(೨೩) ಹಾಗೂ ಕುಶಾಲನಗರ ತಾಲೂಕಿನ ಕಲಂದರ್ ಹಾರಂಗಿ ಯೋಜನೆ, ಯಡವನಾಡು ಅರಣ್ಯದ ಎಲ್ ಪದ್ಮನಾಭ ಬಿನ್ ಆರ್ ಲೋಕೇಶ್, (೨೩) ಬಂಧಿಸಿ ನ್ಯಾಯಾಲಕ್ಕೆ ಹಾಜರು ಪಡಿಸಿ, ಬಳಿಕ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ.

ಪಟ್ಟಣದ ಚೀರಹಳ್ಳಿ ಮುಖ್ಯ ರಸ್ತೆಯ ಸಾಯಿ ಕನ್ವೆನ್ಸನ್ ಹಾಲ್ ಬಳಿ ಅಬಕಾರಿ ಅಧಿಕಾರಿಗಳು ಗಸ್ತು ನಡೆಸುತ್ತಿದ್ದಾಗ ಕೆ.ಆರ್.ನಗರ-ಮೈಸೂರು ಮುಖ್ಯ ರಸ್ತೆಯಲ್ಲಿರುವ ತೋಪಮ್ಮ ದೇವಸ್ಥಾನದ ಬಳಿ ಇಬ್ಬರು ಆಸಾಮಿಗಳು ಬಿಳಿ ಬಣ್ಣದ ಮಾರುತಿ ೮೦೦ ಕಾರು ಸಂಖ್ಯೆ ಕೆಎ-೧೯ ಎಂ-೮೩೬೬ ರಲ್ಲಿ ಅಕ್ರಮವಾಗಿ ಒಣ ಗಾಂಜಾವನ್ನು ಇಟ್ಟುಕೊಂಡು ರಸ್ತೆಯ ಬದಿಯಲ್ಲಿ ವಾಹನವನ್ನು ನಿಲ್ಲಿಸಿ ಮಾರಾಟದ ಮಾಡಲಾಗುತ್ತದೆ ಎಂಬ ದೊರೆತ ಮಾಹಿತಿಯ ಮೇರೆಗೆ ದಾಳಿ ನಡೆಸಲಾಗಿ ೯೭೪ ಗ್ರಾಂ ತೂಕದ ಬೀಜ ಮಿಶ್ರಿತ ಒಣ ಗಾಂಜಾವನ್ನು ಅಕ್ರಮವಾಗಿ ಮಾರಾಟದ ಉದ್ದೇಶದಿಂದ ಸಾಗಾಣಿಕೆ ಮಾಡುತ್ತಿರುವುದು ಪತ್ತೆಯಾಗಿದ್ದು ದೊರೆತ ಗಾಂಜಾವನ್ನು ವಶಕ್ಕೆ ಪಡಿಸಿಕೊಂಡಿದ್ದೇವೆ ಎಂದು ಪಟ್ಟಣದ ಅಬಕಾರಿ ಇನ್ಸ್ ಪೆಕ್ಟರ್ ವೈ.ಎಸ್. ಲೋಕೇಶ್ ತಿಳಿಸಿದ್ದಾರೆ.

ಇದನ್ನೂ ಓದಿ:-ಮಿಷನ್ 40 ಫಾರ್ 90 ಡೇಸ್ : ಮಂಡ್ಯ ಜಿಲ್ಲೆಯಲ್ಲಿ SSLC ಫಲಿತಾಂಶ ಹೆಚ್ಚಳಕ್ಕೆ ವಿಶೇಷ ಅಭಿಯಾನ

ಮಾರುತಿ ಕಾರಿನಲ್ಲಿ ಗಾಂಜಾ ಸಾಗಾಣಿಕೆ ಮತ್ತು ಮಾರಾಟ ಮಾಡಲಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ವಿಭಾಗದ ಜಂಟಿ ಆಯುಕ್ತರಾದ ಬಸವರಾಜ ಹಡಪದ ಹಾಗೂ ಮೈಸೂರು ಜಿಲ್ಲೆ ಗ್ರಾಮಾಂತರ ಅಬಕಾರಿ ಉಪ ಆಯುಕ್ತರಾದ ಡಾ.ಮಹದೇವಿ ಬಾಯಿ, ಹುಣಸೂರಿನ ಅಬಕಾರಿ ಉಪಅಧಿಕ್ಷಕರಾದ ಎಂ.ಡಿ.ಮೋಹನ್ ಕುಮಾರ್ ಇವರುಗಳ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ಮಾಡಲಾಯಿತು.

ಕಾರ್ಯಾಚರಣೆಯ ದಾಳಿ ವೇಳೆಯಲ್ಲಿ ಅಬಕಾರಿ ಸಬ್ ಇನ್ಸ್ ಪೆಕ್ಟರ್ ಸಿ.ವಿ.ರಾಘವೇಂದ್ರ, ಮುಖ್ಯ ಪೇದೆ ಕೆ.ಪಿ..ಶಿವಕುಮಾರ್, ಅಬಕಾರಿ ಪೇದೆ ಶಿವಪ್ಪಮಾಳಪ್ಪ ಭಾನುಸಿ, ಮತ್ತು ವಾಹನ ಚಾಲಕರಾದ ಮಹದೇವ.ಕೆ – ಗೃಹರಕ್ಷದಳ ಸಿಬ್ಬಂದಿಯಾದ ರವೀಶ.ಆರ್ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಅಮೆರಿಕ-ಇರಾನ್‌ ಕದನ ವಿರಾಮ | ಶಾಂತಿ ಮಾತುಕತೆಗೆ ಪಾಕ್‌ಗೆ ಬಂದಿಳಿದ ಇರಾನ್‌ ನಿಯೋಗ

ಇಸ್ಲಾಮಾಬಾದ್ : ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧವನ್ನು ಕೊನೆಗೊಳಿಸುವ ಉದ್ದೇಶದಿಂದ ಇಸ್ಲಾಮಾಬಾದ್‌ನಲ್ಲಿ ಆಯೋಜಿಸಲಾಗಿರುವ ಐತಿಹಾಸಿಕ ಶಾಂತಿ ಮಾತುಕತೆಗೆ ಇರಾನ್…

1 hour ago

ಬೆಳಗಾವಿಯ ನಗರಾಭಿವೃದ್ಧಿ ಕೋಶದ ಎಇಇ ಮನೆಯಲ್ಲಿ 14 ಕೋಟಿ ಅಕ್ರಮ ಆಸ್ತಿ ಪತ್ತೆ

– 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 3 ಕೋಟಿ ಡೆಪಾಸಿಟ್ ಪತ್ತೆ ಬೆಳಗಾವಿ : ಇಲ್ಲಿನ ನಗರಾಭಿವೃದ್ಧಿ…

2 hours ago

ವಿರಾಜಪೇಟೆ ಐತಿಹಾಸಿಕ ಕೆರೆಗಳ ಒತ್ತುವರಿ ಆರೋಪ

ಕಾಂಗೀರ ಬೋಪಣ್ಣ ವಿರಾಜಪೇಟೆ : ಪುರಸಭೆ ವ್ಯಾಪ್ತಿಗೆ ಒಳಪಡುವ ೨ ಐತಿಹಾಸಿಕ ಕೆರೆಗಳು ಒತ್ತುವರಿಯಾಗಿರುವ ಆರೋಪ ಕೇಳಿ ಬಂದಿದ್ದು, ಈ…

3 hours ago

ಪಿಯುಸಿ : ಗುಂಡ್ಲುಪೇಟೆಯಲ್ಲಿ ಬಾಲಕಿಯರೇ ಮೇಲುಗೈ

ರೈತರು, ಕೂಲಿ ಕಾರ್ಮಿಕರ ಮಕ್ಕಳೇ ಟಾಪರ್ಸ್‌ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಹೊರಬಿದ್ದಿದ್ದು ತಾಲ್ಲೂಕಿನ…

4 hours ago

ಮೈಸೂರು ಜಿಲ್ಲೆಯ 147 ಗ್ರಾಪಂಗಳೀಗ ಕ್ಷಯ ಮುಕ್ತ!

ಡಿಎಚ್‌ಒ ಡಾ.ಪಿ.ಸಿ.ಕುಮಾರಸ್ವಾಮಿ ನೇತೃತ್ವದಲ್ಲಿ ಕ್ಷಯರೋಗ ಮುಕ್ತ ಗ್ರಾಪಂ ಅಭಿಯಾನ ಮೈಸೂರು : ಜಿಲ್ಲೆಯಲ್ಲಿ ಕ್ಷಯ ರೋಗ ಮತ್ತು ಸಾವಿನ ಪ್ರಮಾಣ…

4 hours ago

ಓದುಗರ ಪತ್ರ | ಜನಗಣತಿ ಪಾರದರ್ಶಕ,ನಿಖರವಾಗಿರಲಿ. . .

ಭಾರತದ ಜನಗಣತಿ ಕಾಯ್ದೆ ೧೯೪೮ರ ಪ್ರಕಾರ ಈ ಬಾರಿಯ ಜನಗಣತಿ ೨೦೨೭ರ ಕಾರ್ಯವು ಎರಡು ಹಂತಗಳಲ್ಲಿ ನಡೆಯುತ್ತಿದ್ದು, ಈ ಜನಗಣತಿಯು…

4 hours ago