ಮೈಸೂರು

ಕೆ.ಆರ್.ನಗರ | ಗಾಂಜಾ ಮಾರಾಟ : ಇಬ್ಬರ ಬಂಧನ

ಕೆ.ಆರ್.ನಗರ : ಪಟ್ಟಣದಲ್ಲಿ ಇಬ್ಬರು ಯುವಕರು ಮಾರುತಿ ಕಾರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಬಂಧಿಸಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಕೊಡುಗು ಜಿಲ್ಲೆಯ ಮಕ್ಕಂದೂರಿನ ರಾಜರಾಜೇಶ್ವರಿ ನಗರ ಎಂ.ವಿ.ಮಹಮ್ಮದ್ ಮಿರ್ಶದ್ ಬಿನ್ ವಾಜಿದ್,(೨೩) ಹಾಗೂ ಕುಶಾಲನಗರ ತಾಲೂಕಿನ ಕಲಂದರ್ ಹಾರಂಗಿ ಯೋಜನೆ, ಯಡವನಾಡು ಅರಣ್ಯದ ಎಲ್ ಪದ್ಮನಾಭ ಬಿನ್ ಆರ್ ಲೋಕೇಶ್, (೨೩) ಬಂಧಿಸಿ ನ್ಯಾಯಾಲಕ್ಕೆ ಹಾಜರು ಪಡಿಸಿ, ಬಳಿಕ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ.

ಪಟ್ಟಣದ ಚೀರಹಳ್ಳಿ ಮುಖ್ಯ ರಸ್ತೆಯ ಸಾಯಿ ಕನ್ವೆನ್ಸನ್ ಹಾಲ್ ಬಳಿ ಅಬಕಾರಿ ಅಧಿಕಾರಿಗಳು ಗಸ್ತು ನಡೆಸುತ್ತಿದ್ದಾಗ ಕೆ.ಆರ್.ನಗರ-ಮೈಸೂರು ಮುಖ್ಯ ರಸ್ತೆಯಲ್ಲಿರುವ ತೋಪಮ್ಮ ದೇವಸ್ಥಾನದ ಬಳಿ ಇಬ್ಬರು ಆಸಾಮಿಗಳು ಬಿಳಿ ಬಣ್ಣದ ಮಾರುತಿ ೮೦೦ ಕಾರು ಸಂಖ್ಯೆ ಕೆಎ-೧೯ ಎಂ-೮೩೬೬ ರಲ್ಲಿ ಅಕ್ರಮವಾಗಿ ಒಣ ಗಾಂಜಾವನ್ನು ಇಟ್ಟುಕೊಂಡು ರಸ್ತೆಯ ಬದಿಯಲ್ಲಿ ವಾಹನವನ್ನು ನಿಲ್ಲಿಸಿ ಮಾರಾಟದ ಮಾಡಲಾಗುತ್ತದೆ ಎಂಬ ದೊರೆತ ಮಾಹಿತಿಯ ಮೇರೆಗೆ ದಾಳಿ ನಡೆಸಲಾಗಿ ೯೭೪ ಗ್ರಾಂ ತೂಕದ ಬೀಜ ಮಿಶ್ರಿತ ಒಣ ಗಾಂಜಾವನ್ನು ಅಕ್ರಮವಾಗಿ ಮಾರಾಟದ ಉದ್ದೇಶದಿಂದ ಸಾಗಾಣಿಕೆ ಮಾಡುತ್ತಿರುವುದು ಪತ್ತೆಯಾಗಿದ್ದು ದೊರೆತ ಗಾಂಜಾವನ್ನು ವಶಕ್ಕೆ ಪಡಿಸಿಕೊಂಡಿದ್ದೇವೆ ಎಂದು ಪಟ್ಟಣದ ಅಬಕಾರಿ ಇನ್ಸ್ ಪೆಕ್ಟರ್ ವೈ.ಎಸ್. ಲೋಕೇಶ್ ತಿಳಿಸಿದ್ದಾರೆ.

ಇದನ್ನೂ ಓದಿ:-ಮಿಷನ್ 40 ಫಾರ್ 90 ಡೇಸ್ : ಮಂಡ್ಯ ಜಿಲ್ಲೆಯಲ್ಲಿ SSLC ಫಲಿತಾಂಶ ಹೆಚ್ಚಳಕ್ಕೆ ವಿಶೇಷ ಅಭಿಯಾನ

ಮಾರುತಿ ಕಾರಿನಲ್ಲಿ ಗಾಂಜಾ ಸಾಗಾಣಿಕೆ ಮತ್ತು ಮಾರಾಟ ಮಾಡಲಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ವಿಭಾಗದ ಜಂಟಿ ಆಯುಕ್ತರಾದ ಬಸವರಾಜ ಹಡಪದ ಹಾಗೂ ಮೈಸೂರು ಜಿಲ್ಲೆ ಗ್ರಾಮಾಂತರ ಅಬಕಾರಿ ಉಪ ಆಯುಕ್ತರಾದ ಡಾ.ಮಹದೇವಿ ಬಾಯಿ, ಹುಣಸೂರಿನ ಅಬಕಾರಿ ಉಪಅಧಿಕ್ಷಕರಾದ ಎಂ.ಡಿ.ಮೋಹನ್ ಕುಮಾರ್ ಇವರುಗಳ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ಮಾಡಲಾಯಿತು.

ಕಾರ್ಯಾಚರಣೆಯ ದಾಳಿ ವೇಳೆಯಲ್ಲಿ ಅಬಕಾರಿ ಸಬ್ ಇನ್ಸ್ ಪೆಕ್ಟರ್ ಸಿ.ವಿ.ರಾಘವೇಂದ್ರ, ಮುಖ್ಯ ಪೇದೆ ಕೆ.ಪಿ..ಶಿವಕುಮಾರ್, ಅಬಕಾರಿ ಪೇದೆ ಶಿವಪ್ಪಮಾಳಪ್ಪ ಭಾನುಸಿ, ಮತ್ತು ವಾಹನ ಚಾಲಕರಾದ ಮಹದೇವ.ಕೆ – ಗೃಹರಕ್ಷದಳ ಸಿಬ್ಬಂದಿಯಾದ ರವೀಶ.ಆರ್ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ : ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…

3 mins ago

ಹೈಕಮಾಂಡ್‌ ಸೂಚನೆಯಂತೆ ರಾಜೀನಾಮೆ : ಸಿದ್ದರಾಮಯ್ಯ ಸುದ್ದಿಗೋಷ್ಠಿಯ ಹೈಲೆಟ್ಸ್‌

ಬೆಂಗಳೂರು : ಹೈಕಮಾಂಡ್‌ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…

50 mins ago

ಯಾರೇ ಸಿಎಂ ಆದರೂ ಕರ್ನಾಟಕ ಅಭಿವೃದ್ಧಿಯಾಗಲ್ಲ: ವಿಜಯೇಂದ್ರ

ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…

3 hours ago

ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್‌ ನಿರ್ಧಾರ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…

3 hours ago

ಮುಂದೆಯೂ ಇದೇ ರೀತಿ ಸಹಕಾರ ನೀಡಿ: ಮಂತ್ರಿಗಳಿಗೆ ಡಿಸಿಎಂ ಡಿಕೆಶಿ ಮನವಿ

ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…

5 hours ago

ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ: ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ನನಗೆ ಯಾವುದೇ ನೋವಿಲ್ಲ. ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂತ್ರಿಗಳ ಜೊತೆಗಿನ ಉಪಹಾರ ಸಭೆಯಲ್ಲಿ…

5 hours ago