ಮೈಸೂರು

ಕೆ.ಆರ್.ನಗರ | ಗಾಂಜಾ ಮಾರಾಟ : ಇಬ್ಬರ ಬಂಧನ

ಕೆ.ಆರ್.ನಗರ : ಪಟ್ಟಣದಲ್ಲಿ ಇಬ್ಬರು ಯುವಕರು ಮಾರುತಿ ಕಾರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಬಂಧಿಸಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಕೊಡುಗು ಜಿಲ್ಲೆಯ ಮಕ್ಕಂದೂರಿನ ರಾಜರಾಜೇಶ್ವರಿ ನಗರ ಎಂ.ವಿ.ಮಹಮ್ಮದ್ ಮಿರ್ಶದ್ ಬಿನ್ ವಾಜಿದ್,(೨೩) ಹಾಗೂ ಕುಶಾಲನಗರ ತಾಲೂಕಿನ ಕಲಂದರ್ ಹಾರಂಗಿ ಯೋಜನೆ, ಯಡವನಾಡು ಅರಣ್ಯದ ಎಲ್ ಪದ್ಮನಾಭ ಬಿನ್ ಆರ್ ಲೋಕೇಶ್, (೨೩) ಬಂಧಿಸಿ ನ್ಯಾಯಾಲಕ್ಕೆ ಹಾಜರು ಪಡಿಸಿ, ಬಳಿಕ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ.

ಪಟ್ಟಣದ ಚೀರಹಳ್ಳಿ ಮುಖ್ಯ ರಸ್ತೆಯ ಸಾಯಿ ಕನ್ವೆನ್ಸನ್ ಹಾಲ್ ಬಳಿ ಅಬಕಾರಿ ಅಧಿಕಾರಿಗಳು ಗಸ್ತು ನಡೆಸುತ್ತಿದ್ದಾಗ ಕೆ.ಆರ್.ನಗರ-ಮೈಸೂರು ಮುಖ್ಯ ರಸ್ತೆಯಲ್ಲಿರುವ ತೋಪಮ್ಮ ದೇವಸ್ಥಾನದ ಬಳಿ ಇಬ್ಬರು ಆಸಾಮಿಗಳು ಬಿಳಿ ಬಣ್ಣದ ಮಾರುತಿ ೮೦೦ ಕಾರು ಸಂಖ್ಯೆ ಕೆಎ-೧೯ ಎಂ-೮೩೬೬ ರಲ್ಲಿ ಅಕ್ರಮವಾಗಿ ಒಣ ಗಾಂಜಾವನ್ನು ಇಟ್ಟುಕೊಂಡು ರಸ್ತೆಯ ಬದಿಯಲ್ಲಿ ವಾಹನವನ್ನು ನಿಲ್ಲಿಸಿ ಮಾರಾಟದ ಮಾಡಲಾಗುತ್ತದೆ ಎಂಬ ದೊರೆತ ಮಾಹಿತಿಯ ಮೇರೆಗೆ ದಾಳಿ ನಡೆಸಲಾಗಿ ೯೭೪ ಗ್ರಾಂ ತೂಕದ ಬೀಜ ಮಿಶ್ರಿತ ಒಣ ಗಾಂಜಾವನ್ನು ಅಕ್ರಮವಾಗಿ ಮಾರಾಟದ ಉದ್ದೇಶದಿಂದ ಸಾಗಾಣಿಕೆ ಮಾಡುತ್ತಿರುವುದು ಪತ್ತೆಯಾಗಿದ್ದು ದೊರೆತ ಗಾಂಜಾವನ್ನು ವಶಕ್ಕೆ ಪಡಿಸಿಕೊಂಡಿದ್ದೇವೆ ಎಂದು ಪಟ್ಟಣದ ಅಬಕಾರಿ ಇನ್ಸ್ ಪೆಕ್ಟರ್ ವೈ.ಎಸ್. ಲೋಕೇಶ್ ತಿಳಿಸಿದ್ದಾರೆ.

ಇದನ್ನೂ ಓದಿ:-ಮಿಷನ್ 40 ಫಾರ್ 90 ಡೇಸ್ : ಮಂಡ್ಯ ಜಿಲ್ಲೆಯಲ್ಲಿ SSLC ಫಲಿತಾಂಶ ಹೆಚ್ಚಳಕ್ಕೆ ವಿಶೇಷ ಅಭಿಯಾನ

ಮಾರುತಿ ಕಾರಿನಲ್ಲಿ ಗಾಂಜಾ ಸಾಗಾಣಿಕೆ ಮತ್ತು ಮಾರಾಟ ಮಾಡಲಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ವಿಭಾಗದ ಜಂಟಿ ಆಯುಕ್ತರಾದ ಬಸವರಾಜ ಹಡಪದ ಹಾಗೂ ಮೈಸೂರು ಜಿಲ್ಲೆ ಗ್ರಾಮಾಂತರ ಅಬಕಾರಿ ಉಪ ಆಯುಕ್ತರಾದ ಡಾ.ಮಹದೇವಿ ಬಾಯಿ, ಹುಣಸೂರಿನ ಅಬಕಾರಿ ಉಪಅಧಿಕ್ಷಕರಾದ ಎಂ.ಡಿ.ಮೋಹನ್ ಕುಮಾರ್ ಇವರುಗಳ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ಮಾಡಲಾಯಿತು.

ಕಾರ್ಯಾಚರಣೆಯ ದಾಳಿ ವೇಳೆಯಲ್ಲಿ ಅಬಕಾರಿ ಸಬ್ ಇನ್ಸ್ ಪೆಕ್ಟರ್ ಸಿ.ವಿ.ರಾಘವೇಂದ್ರ, ಮುಖ್ಯ ಪೇದೆ ಕೆ.ಪಿ..ಶಿವಕುಮಾರ್, ಅಬಕಾರಿ ಪೇದೆ ಶಿವಪ್ಪಮಾಳಪ್ಪ ಭಾನುಸಿ, ಮತ್ತು ವಾಹನ ಚಾಲಕರಾದ ಮಹದೇವ.ಕೆ – ಗೃಹರಕ್ಷದಳ ಸಿಬ್ಬಂದಿಯಾದ ರವೀಶ.ಆರ್ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

48 mins ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

56 mins ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

6 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

6 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

7 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

7 hours ago