ಮೈಸೂರು

ಕೆ.ಆರ್.ನಗರ | ಗಾಂಜಾ ಮಾರಾಟ : ಇಬ್ಬರ ಬಂಧನ

ಕೆ.ಆರ್.ನಗರ : ಪಟ್ಟಣದಲ್ಲಿ ಇಬ್ಬರು ಯುವಕರು ಮಾರುತಿ ಕಾರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಬಂಧಿಸಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಕೊಡುಗು ಜಿಲ್ಲೆಯ ಮಕ್ಕಂದೂರಿನ ರಾಜರಾಜೇಶ್ವರಿ ನಗರ ಎಂ.ವಿ.ಮಹಮ್ಮದ್ ಮಿರ್ಶದ್ ಬಿನ್ ವಾಜಿದ್,(೨೩) ಹಾಗೂ ಕುಶಾಲನಗರ ತಾಲೂಕಿನ ಕಲಂದರ್ ಹಾರಂಗಿ ಯೋಜನೆ, ಯಡವನಾಡು ಅರಣ್ಯದ ಎಲ್ ಪದ್ಮನಾಭ ಬಿನ್ ಆರ್ ಲೋಕೇಶ್, (೨೩) ಬಂಧಿಸಿ ನ್ಯಾಯಾಲಕ್ಕೆ ಹಾಜರು ಪಡಿಸಿ, ಬಳಿಕ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ.

ಪಟ್ಟಣದ ಚೀರಹಳ್ಳಿ ಮುಖ್ಯ ರಸ್ತೆಯ ಸಾಯಿ ಕನ್ವೆನ್ಸನ್ ಹಾಲ್ ಬಳಿ ಅಬಕಾರಿ ಅಧಿಕಾರಿಗಳು ಗಸ್ತು ನಡೆಸುತ್ತಿದ್ದಾಗ ಕೆ.ಆರ್.ನಗರ-ಮೈಸೂರು ಮುಖ್ಯ ರಸ್ತೆಯಲ್ಲಿರುವ ತೋಪಮ್ಮ ದೇವಸ್ಥಾನದ ಬಳಿ ಇಬ್ಬರು ಆಸಾಮಿಗಳು ಬಿಳಿ ಬಣ್ಣದ ಮಾರುತಿ ೮೦೦ ಕಾರು ಸಂಖ್ಯೆ ಕೆಎ-೧೯ ಎಂ-೮೩೬೬ ರಲ್ಲಿ ಅಕ್ರಮವಾಗಿ ಒಣ ಗಾಂಜಾವನ್ನು ಇಟ್ಟುಕೊಂಡು ರಸ್ತೆಯ ಬದಿಯಲ್ಲಿ ವಾಹನವನ್ನು ನಿಲ್ಲಿಸಿ ಮಾರಾಟದ ಮಾಡಲಾಗುತ್ತದೆ ಎಂಬ ದೊರೆತ ಮಾಹಿತಿಯ ಮೇರೆಗೆ ದಾಳಿ ನಡೆಸಲಾಗಿ ೯೭೪ ಗ್ರಾಂ ತೂಕದ ಬೀಜ ಮಿಶ್ರಿತ ಒಣ ಗಾಂಜಾವನ್ನು ಅಕ್ರಮವಾಗಿ ಮಾರಾಟದ ಉದ್ದೇಶದಿಂದ ಸಾಗಾಣಿಕೆ ಮಾಡುತ್ತಿರುವುದು ಪತ್ತೆಯಾಗಿದ್ದು ದೊರೆತ ಗಾಂಜಾವನ್ನು ವಶಕ್ಕೆ ಪಡಿಸಿಕೊಂಡಿದ್ದೇವೆ ಎಂದು ಪಟ್ಟಣದ ಅಬಕಾರಿ ಇನ್ಸ್ ಪೆಕ್ಟರ್ ವೈ.ಎಸ್. ಲೋಕೇಶ್ ತಿಳಿಸಿದ್ದಾರೆ.

ಇದನ್ನೂ ಓದಿ:-ಮಿಷನ್ 40 ಫಾರ್ 90 ಡೇಸ್ : ಮಂಡ್ಯ ಜಿಲ್ಲೆಯಲ್ಲಿ SSLC ಫಲಿತಾಂಶ ಹೆಚ್ಚಳಕ್ಕೆ ವಿಶೇಷ ಅಭಿಯಾನ

ಮಾರುತಿ ಕಾರಿನಲ್ಲಿ ಗಾಂಜಾ ಸಾಗಾಣಿಕೆ ಮತ್ತು ಮಾರಾಟ ಮಾಡಲಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ವಿಭಾಗದ ಜಂಟಿ ಆಯುಕ್ತರಾದ ಬಸವರಾಜ ಹಡಪದ ಹಾಗೂ ಮೈಸೂರು ಜಿಲ್ಲೆ ಗ್ರಾಮಾಂತರ ಅಬಕಾರಿ ಉಪ ಆಯುಕ್ತರಾದ ಡಾ.ಮಹದೇವಿ ಬಾಯಿ, ಹುಣಸೂರಿನ ಅಬಕಾರಿ ಉಪಅಧಿಕ್ಷಕರಾದ ಎಂ.ಡಿ.ಮೋಹನ್ ಕುಮಾರ್ ಇವರುಗಳ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ಮಾಡಲಾಯಿತು.

ಕಾರ್ಯಾಚರಣೆಯ ದಾಳಿ ವೇಳೆಯಲ್ಲಿ ಅಬಕಾರಿ ಸಬ್ ಇನ್ಸ್ ಪೆಕ್ಟರ್ ಸಿ.ವಿ.ರಾಘವೇಂದ್ರ, ಮುಖ್ಯ ಪೇದೆ ಕೆ.ಪಿ..ಶಿವಕುಮಾರ್, ಅಬಕಾರಿ ಪೇದೆ ಶಿವಪ್ಪಮಾಳಪ್ಪ ಭಾನುಸಿ, ಮತ್ತು ವಾಹನ ಚಾಲಕರಾದ ಮಹದೇವ.ಕೆ – ಗೃಹರಕ್ಷದಳ ಸಿಬ್ಬಂದಿಯಾದ ರವೀಶ.ಆರ್ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

10 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

19 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

19 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

19 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

22 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

22 hours ago