ಮೈಸೂರು

ಕೆ.ಆರ್.ನಗರ | ವಿದ್ಯುತ್‌ ಸ್ಪರ್ಶದಿಂದ ಇಬ್ಬರು ದುರ್ಮರಣ

ಕೆ.ಆರ್.ನಗರ : ಪ್ರತ್ಯೇಕ ಪ್ರಕರಣಗಳಲ್ಲಿ  ವಿದ್ಯುತ್ ಸ್ಪರ್ಶಕ್ಕೀಡಾಗಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ಒಂದು ಪ್ರಕರಣದಲ್ಲಿ ಹೊಸ ಅಗ್ರಹಾರ ಹೋಬಳಿಯ ಅಡಗೂರು ಮಾರಗೌಡನಹಳ್ಳಿ ಮಹದೇವ್ (೫೮) ಜಮೀನಿನಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿಯನ್ನು ಆಕಸ್ಮಿಕವಾಗಿ ತುಳಿದು ಮೃತಪಟ್ಟಿದ್ದಾರೆ. ಇವರಿಗೆ ಪತ್ನಿ ಲಕ್ಷ್ಮಮ್ಮ ಹಾಗೂ ಮೂವರು ಪುತ್ರಿಯರು ಇದ್ದಾರೆ.
ಮತ್ತೊಂದು ಪ್ರಕರಣದಲ್ಲಿ ಕೆಸ್ತೂರು ಕೊಪ್ಪಲು ಗ್ರಾಮದ ರಮೇಶ್ ಅವರ ಪುತ್ರ ಪುನೀತ್(೨೨) ಸಾವಿಗೀಡಾಗಿದ್ದಾರೆ. ತಮ್ಮ ಹಳೆಯ ಮನೆಯನ್ನು ದುರಸ್ಥಿ ಮಾಡಿಸುತ್ತಿದ್ದ ಇವರು, ನೀರಿನ ತೊಟ್ಟಿಯಿಂದ ನೀರು ಮೇಲೆತ್ತುವ ಮೋಟಾರ್ ಕೆಟ್ಟುಹೋಗಿದ್ದರಿಂದ ಅದನ್ನು ಸರಿಪಡಿಸಲು ನೀರಿನ ತೊಟ್ಟಿಗೆ ಇಳಿದಾಗ ವಿದ್ಯುತ್ ಶಾಕ್ ನಿಂದ ಮೃತಪಟ್ಟಿದ್ದಾರೆ. ಮೃತ ಪುನೀತ್ ಕಳೆದ ತಿಂಗಳಷ್ಟೆ ಮದುವೆಯಾಗಿದ್ದು, ಪತಿ ಕಳೆದು ಕೊಂಡ ಪತ್ನಿ ಬೇಬಿ ಆಕ್ರಂದನ ಮುಗಿಲು‌ ಮುಟ್ಟಿತ್ತು.
ಸುದ್ದಿ ತಿಳಿಯುತ್ತಿದಂತೆ ಶಾಸಕ ಡಿ.ರವಿಶಂಕರ್ ಮಾರಗೌಡನಹಳ್ಳಿ ಗ್ರಾಮಕ್ಕೆ ತೆರಳಿ ಅವಘಡದ ಬಗ್ಗೆ ಪೂರ್ಣ ಮಾಹಿತಿ ಪಡೆದು ಸರ್ಕಾರದಿಂದ ಪರಿಹಾರ ಧನವನ್ನು ಕೊಡಿಸುವ ಭರವಸೆ ನೀಡಿದರು.
ಆಂದೋಲನ ಡೆಸ್ಕ್

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

56 mins ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

59 mins ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

1 hour ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

1 hour ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

13 hours ago