ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ(ಕೆಎಸ್ಒಯು) ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೆ-ಸೆಟ್ ಮತ್ತು ಯುಜಿಸಿ ನೆಟ್ ಪರೀಕ್ಷೆಗೆ ಉಚಿತ ತರಬೇತಿ ನಡೆಸುವ 45 ದಿನಗಳ ಶಿಬಿರದ ಉದ್ಘಾಟನೆಯು ಆಗಸ್ಟ್ 31(ಶನಿವಾರ) ರಂದು ನಡೆಯಲಿದೆ.
ಅಂದು ಬೆಳಿಗ್ಗೆ 11 ಗಂಟೆಗೆ ಕೆಎಸ್ಒಯು ಆವರಣದ ಕಾವೇರಿ ಸಭಾಂಗಣದಲ್ಲಿ ತರಬೇತಿ ಶಿಬಿರದ ಉದ್ಘಾಟನೆಯಾಗಲಿದೆ. ರಾಣಿ ಚನ್ನಮ್ಮ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಸಿ.ಎಂ ತ್ಯಾಗರಾಜು, ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್, ಕಲಬುರಗಿ ಕೇಂದ್ರೀಯ ವಿಶ್ವವಿದ್ಯಾನಿಲಯದ ಪ್ರೊ.ಜಿ.ಆರ್ ಅಂಗಡಿ ಅವರು ಭಾಗವಹಿಸಿ, ತರಬೇತಿ ಅಭ್ಯರ್ಥಿಗಳಿಗೆ ಶುಭಹಾರೈಸಿ ಪರೀಕ್ಷೆ ಎದುರಿಸುವ ಕುರಿತು ಭಾಷಣ ಮಾಡಲಿದ್ದಾರೆ.
ಕೆಎಸ್ಒಯು ಕುಲಪತಿ ಪ್ರೊ.ಶರಣಪ್ಪ ವಿ.ಹಲಸೆ ತರಬೇತಿ ಶಿಬಿರ ಉದ್ಘಾಟನೆಯ ಅಧ್ಯಕ್ಷತೆ ವಹಿಸಲಿದ್ದು, ಕಲಸಚಿವ ಪ್ರೊ.ಕೆ.ಬಿ ಪ್ರವೀಣ ಉಪಸ್ಥಿತರಿರುವವರು. ಆಸಕ್ತರು ಅಭ್ಯರ್ಥಿಗಳು ಈಗಲೂ ತರಬೇತಿಗೆ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ಕೇಂದ್ರದ ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ 0821-2515944/9964760090 ನ್ನು ಸಂಪರ್ಕಿಸಬಹುದಾಗಿದೆ.
ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…
ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…
ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…
ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…
ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…