ಮೈಸೂರು

ಕೆ. ವೈ.ರಾಮಕೃಷ್ಣ ಅವರ ಸೇವೆ ಮತ್ತು ಹೋರಾಟ ಇಂದಿಗೂ ಸ್ಮರಣೀಯ : ಸಚಿವ ಮುನಿಯಪ್ಪ

ಮೈಸೂರು : ಕೆ.ವೈ. ರಾಮಕೃಷ್ಣ ಅವರು ಅನೇಕ ಕ್ಷೇತ್ರಗಳಲ್ಲಿ ತಮ್ಮದೇ ಆದಂತಹ ಛಾಪನ್ನು ಮೂಡಿಸಿದ್ದು, ಅವರ ಸೇವೆ ಮತ್ತು ಹೋರಾಟ ಇಂದಿಗೂ ಸಹ ಸ್ಮರಣೀಯವಾಗಿದೆ ಎಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ. ಹೆಚ್. ಮುನಿಯಪ್ಪ ಹೇಳಿದರು.

ಡಾ. ಬಾಬೂ ಜಗಜೀವನರಾಮ್ ಅಧ್ಯಯನ, ಸಂಶೋಧನ ಮತ್ತು ವಿಸ್ತೀರ್ಣ ಕೇಂದ್ರ, ಮಾನಸಗಂಗೋತ್ರಿ ಮೈಸೂರು ಇವರ ವತಿಯಿಂದ ಶುಕ್ರವಾರ ರಾಣಿ ಬಹಾದ್ದೂರ್ ಸಭಾಂಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ವೈ. ರಾಮಕೃಷ್ಣ ಅವರ ಸಾಧನೆ ( ಬದುಕು, ಸಂಘಟನೆ ಮತ್ತು ರಾಜಕಾರಣ) ಎಂಬ ವಿಷಯ ಕುರಿತು ಒಂದು ದಿನದ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಅವರು ಮಾತನಾಡಿದರು.

ರಾಮಕೃಷ್ಣ ಅವರು ವಿಧಾನ ಸಭೆಯಲ್ಲಿ ಮಾತನಾಡುವಂತಹ ಶೈಲಿಯೇ ಆಕರ್ಷಣೆಯಾಗಿತ್ತು. ರಾಜಕೀಯ ಪಕ್ಷಗಳು ಇವರನ್ನು ನಾಯಕನಾಗಿ ಮಾಡಿಕೊಳ್ಳಬೇಕೆಂದು ಪ್ರೋತ್ಸಾಹ ನೀಡುತ್ತಿದ್ದರು. ಇವರ ನಡವಳಿಕೆ, ಭಾಷಣಗಳು, ಕಮಿಟ್ ಮೆಂಟ್ ಗಳು ಇವರನ್ನು ಇಲ್ಲಿಯವರೆಗೂ ಕರೆತಂದಿತು. ಇವರು ಯಾರ ಜೊತೆ ಇದ್ದರೂ ರಾಯಲ್ ಆಗಿ ಸಿನ್ಸಿಯರ್ ಆಗಿ ಇರುತ್ತಿದ್ದರು ಎಂದು ಹೇಳಿದರು.

ಕರ್ನಾಟಕದ ಜನಪ್ರಿಯ ರಾಜಕಾರಣಿಯಾಗಿದ್ದರು. ಸಾಮಾಜಿಕ ಸುಧಾರಣೆಗಾಗಿ , ಬದ್ಧತೆಗಾಗಿ, ಸಮಾಜದಲ್ಲಿ ಸುಧಾರಣೆ ತರಬೇಕೆಂದು ಹೋರಾಡಿದವರು ಹಾಗೂ ಸಾರ್ವಜನಿಕರ ಹಿತಾಸಕ್ತಿಗಾಗಿ ಶ್ರಮಿಸಿದವರು ವೈ. ರಾಮಕೃಷ್ಣ ಅವರು ಎಂದು ತಿಳಿಸಿದರು.

ಮಾಜಿ ಕೇಂದ್ರ ಸಚಿವರಾದ ಸಿ. ಎಂ. ಇಬ್ರಾಹಿಂ ಮಾತನಾಡಿ, ಒಳಮೀಸಲಾತಿಗಾಗಿ ಹೆಚ್ಚು ಹೋರಾಟಮಾಡಿದವರು ವೈ.ರಾಮಕೃಷ್ಣ ಅವರು ಒಳಮೀಸಲಾತಿಗಾಗಿ ಉತ್ತಮವಾದಂತಹ ಕೊಡುಗೆ ನೀಡಿದ್ದಾರೆ ಇಂತಹ ಲೀಡರ್ ಕರ್ನಾಟಕದಲ್ಲಿ ಹುಟ್ಟಿರುವುದು ನಮ್ಮ ಹೆಮ್ಮೆ ಎಂದು ಹೇಳಿದರು.

ನಾವೆಲ್ಲರೂ ಜಾತಿ ಜಾತಿ ಎಂದು ಬೇಧ ಭಾವ ಮಾಡದೆ ಎಲ್ಲರೂ ಒಗ್ಗಟ್ಟಾಗಿ ಸಮಬಾಳ್ವೆಯಿಂದ ಬದುಕಬೇಕು. ಜೊತೆಗೆ ಇಂತಹ ಮಹಾನ್ ವ್ಯಕ್ತಿಗಳ ಹೆಸರು ಸವಿನೆನಪಾಗಿ ಉಳಿಯುವಂತೆ ಮಾಡಬೇಕು ಎಂದರು.

ವಿಧಾನ ಸೌಧದಲ್ಲಿ ನಿಂತು ಮಾತನಾಡುತ್ತಿದ್ದರೆ ವೈ ರಾಮಕೃಷ್ಣ ಎಂದು ಕಾಣುತ್ತಿರಲಿಲ್ಲ ವೈ ರಾಮಕೃಷ್ಣ ರಾವ್ ಎಂದು ಕಾಣುತ್ತಿದ್ದರು. ಇವರು ವಿಧಾನ ಸೌಧದಲ್ಲಿ ಮಾಡಿದಂತಹ ಹೆಸರು ಬೇರೆ ಯಾರು ಸಹ ಮಾಡಿಲ್ಲ. ಈ ಸಮಾಜದಲ್ಲಿ ಪ್ರಾಮಾಣಿಕ ರಾಜಕಾರಣಿ ಇದ್ದರು ಎಂದರೆ ಅವರೇ ವೈ. ರಾಮಕೃಷ್ಣ ಅವರು ಎಂದು ತಿಳಿಸಿದರು.

ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎನ್. ಕೆ ಲೋಕನಾಥ್ ಮಾತನಾಡಿ, ವೈ.ರಾಮಕೃಷ್ಣ ಅವರು ಸಮಾಜದಲ್ಲಿ ಏನೆಲ್ಲ ಸುಧಾರಣೆ ಮಾಡಿದ್ದರೆ ಎಂಬುದನೆಲ್ಲ ನಾವು ಸ್ಮರಿಸಬೇಕು. ಅವರು ಮಾಡಿರುವಂತಹ ಕೆಲಸದ ಮೇಲೆ ಗೌರವವನ್ನು ಇಡಬೇಕು. ಅವರು ನಡೆದುಬಂದಂತಹ ಹಾದಿಯಲ್ಲಿ ನಾವು ನಡೆಯಬೇಕು ಅವರು ಹೇಳಿರುವಂತಹ ವಿಚಾರಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಅವರಂತೆ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವ ಸೋಮಶೇಖರ್, ಎಂ.ಶಿವಣ್ಣ, ವಿಶ್ವನಾಥ್, ಕೆ. ಪಿ.ಸಿ.ಸಿ..ಎಸ್. ಸಿ. ರಾಜ್ಯ ಘಟಕದ ಅಧ್ಯಕ್ಷರಾದ ಆರ್.ಧರ್ಮಸೇನಾ, ಮತಂಗ ಫೌಂಡೇಶನ್ ನ ಅಧ್ಯಕ್ಷರಾದ ಆರ್.ಲೋಕೇಶ್, ಡಾ. ಬಾಬು ಜಗಜೀವನ್ ರಾಮ್ ಅಧ್ಯಯನ ಕೇಂದ್ರದ ನಿರ್ದೇಶಕರಾದ ಪ್ರೊ. ಕೆ.ಸದಾಶಿವ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ದಿಲ್ಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ 2026 : ಕೃಷಿ ಮತ್ತು ತಂತ್ರಜ್ಞಾನದ ಸಮಾಗಮ

ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…

2 hours ago

ಮ.ಬೆಟ್ಟ | ಪಾದಯಾತ್ರಿ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ ; ನಿಟ್ಟುಸಿರು ಬಿಟ್ಟ ಯಾತ್ರಾರ್ಥಿಗಳು

ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

3 hours ago

ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌ : 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಒಪ್ಪಿಗೆ!

ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…

4 hours ago

ಇವಿ ವಾಹನ ಸವಾರರಿಗೆ ಸಿಹಿ ಸುದ್ದಿ : ಮಂಡ್ಯದಲ್ಲಿ ಮೊದಲ ಇವಿ ಫಾಸ್ಟ್‌ ಚಾರ್ಜಿಂಗ್‌ ಕೇಂದ್ರ ಆರಂಭ

ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…

5 hours ago

ಜಾ.ದಳ ಓಡಿಸಲು ಚಲುವರಾಯಸ್ವಾಮಿಗೆ ಸಾಧ್ಯವೇ? : ಜೆಡಿಎಸ್‌ ನಾಯಕ ಸುರೇಶ್‌ ಗೌಡ ಪ್ರಶ್ನೆ

ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…

5 hours ago

ಜಮೀನು ಕಬಳಿಕೆ ಪ್ರಕರಣ | ಸಚಿವ ಚಲುವರಾಯಸ್ವಾಮಿಯೇ ನೇರ ಹೊಣೆ : ಸುರೇಶ್‌ಗೌಡ ಆರೋಪ

ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…

5 hours ago