ಮೈಸೂರು

ಕೆ. ವೈ.ರಾಮಕೃಷ್ಣ ಅವರ ಸೇವೆ ಮತ್ತು ಹೋರಾಟ ಇಂದಿಗೂ ಸ್ಮರಣೀಯ : ಸಚಿವ ಮುನಿಯಪ್ಪ

ಮೈಸೂರು : ಕೆ.ವೈ. ರಾಮಕೃಷ್ಣ ಅವರು ಅನೇಕ ಕ್ಷೇತ್ರಗಳಲ್ಲಿ ತಮ್ಮದೇ ಆದಂತಹ ಛಾಪನ್ನು ಮೂಡಿಸಿದ್ದು, ಅವರ ಸೇವೆ ಮತ್ತು ಹೋರಾಟ ಇಂದಿಗೂ ಸಹ ಸ್ಮರಣೀಯವಾಗಿದೆ ಎಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ. ಹೆಚ್. ಮುನಿಯಪ್ಪ ಹೇಳಿದರು.

ಡಾ. ಬಾಬೂ ಜಗಜೀವನರಾಮ್ ಅಧ್ಯಯನ, ಸಂಶೋಧನ ಮತ್ತು ವಿಸ್ತೀರ್ಣ ಕೇಂದ್ರ, ಮಾನಸಗಂಗೋತ್ರಿ ಮೈಸೂರು ಇವರ ವತಿಯಿಂದ ಶುಕ್ರವಾರ ರಾಣಿ ಬಹಾದ್ದೂರ್ ಸಭಾಂಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ವೈ. ರಾಮಕೃಷ್ಣ ಅವರ ಸಾಧನೆ ( ಬದುಕು, ಸಂಘಟನೆ ಮತ್ತು ರಾಜಕಾರಣ) ಎಂಬ ವಿಷಯ ಕುರಿತು ಒಂದು ದಿನದ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಅವರು ಮಾತನಾಡಿದರು.

ರಾಮಕೃಷ್ಣ ಅವರು ವಿಧಾನ ಸಭೆಯಲ್ಲಿ ಮಾತನಾಡುವಂತಹ ಶೈಲಿಯೇ ಆಕರ್ಷಣೆಯಾಗಿತ್ತು. ರಾಜಕೀಯ ಪಕ್ಷಗಳು ಇವರನ್ನು ನಾಯಕನಾಗಿ ಮಾಡಿಕೊಳ್ಳಬೇಕೆಂದು ಪ್ರೋತ್ಸಾಹ ನೀಡುತ್ತಿದ್ದರು. ಇವರ ನಡವಳಿಕೆ, ಭಾಷಣಗಳು, ಕಮಿಟ್ ಮೆಂಟ್ ಗಳು ಇವರನ್ನು ಇಲ್ಲಿಯವರೆಗೂ ಕರೆತಂದಿತು. ಇವರು ಯಾರ ಜೊತೆ ಇದ್ದರೂ ರಾಯಲ್ ಆಗಿ ಸಿನ್ಸಿಯರ್ ಆಗಿ ಇರುತ್ತಿದ್ದರು ಎಂದು ಹೇಳಿದರು.

ಕರ್ನಾಟಕದ ಜನಪ್ರಿಯ ರಾಜಕಾರಣಿಯಾಗಿದ್ದರು. ಸಾಮಾಜಿಕ ಸುಧಾರಣೆಗಾಗಿ , ಬದ್ಧತೆಗಾಗಿ, ಸಮಾಜದಲ್ಲಿ ಸುಧಾರಣೆ ತರಬೇಕೆಂದು ಹೋರಾಡಿದವರು ಹಾಗೂ ಸಾರ್ವಜನಿಕರ ಹಿತಾಸಕ್ತಿಗಾಗಿ ಶ್ರಮಿಸಿದವರು ವೈ. ರಾಮಕೃಷ್ಣ ಅವರು ಎಂದು ತಿಳಿಸಿದರು.

ಮಾಜಿ ಕೇಂದ್ರ ಸಚಿವರಾದ ಸಿ. ಎಂ. ಇಬ್ರಾಹಿಂ ಮಾತನಾಡಿ, ಒಳಮೀಸಲಾತಿಗಾಗಿ ಹೆಚ್ಚು ಹೋರಾಟಮಾಡಿದವರು ವೈ.ರಾಮಕೃಷ್ಣ ಅವರು ಒಳಮೀಸಲಾತಿಗಾಗಿ ಉತ್ತಮವಾದಂತಹ ಕೊಡುಗೆ ನೀಡಿದ್ದಾರೆ ಇಂತಹ ಲೀಡರ್ ಕರ್ನಾಟಕದಲ್ಲಿ ಹುಟ್ಟಿರುವುದು ನಮ್ಮ ಹೆಮ್ಮೆ ಎಂದು ಹೇಳಿದರು.

ನಾವೆಲ್ಲರೂ ಜಾತಿ ಜಾತಿ ಎಂದು ಬೇಧ ಭಾವ ಮಾಡದೆ ಎಲ್ಲರೂ ಒಗ್ಗಟ್ಟಾಗಿ ಸಮಬಾಳ್ವೆಯಿಂದ ಬದುಕಬೇಕು. ಜೊತೆಗೆ ಇಂತಹ ಮಹಾನ್ ವ್ಯಕ್ತಿಗಳ ಹೆಸರು ಸವಿನೆನಪಾಗಿ ಉಳಿಯುವಂತೆ ಮಾಡಬೇಕು ಎಂದರು.

ವಿಧಾನ ಸೌಧದಲ್ಲಿ ನಿಂತು ಮಾತನಾಡುತ್ತಿದ್ದರೆ ವೈ ರಾಮಕೃಷ್ಣ ಎಂದು ಕಾಣುತ್ತಿರಲಿಲ್ಲ ವೈ ರಾಮಕೃಷ್ಣ ರಾವ್ ಎಂದು ಕಾಣುತ್ತಿದ್ದರು. ಇವರು ವಿಧಾನ ಸೌಧದಲ್ಲಿ ಮಾಡಿದಂತಹ ಹೆಸರು ಬೇರೆ ಯಾರು ಸಹ ಮಾಡಿಲ್ಲ. ಈ ಸಮಾಜದಲ್ಲಿ ಪ್ರಾಮಾಣಿಕ ರಾಜಕಾರಣಿ ಇದ್ದರು ಎಂದರೆ ಅವರೇ ವೈ. ರಾಮಕೃಷ್ಣ ಅವರು ಎಂದು ತಿಳಿಸಿದರು.

ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎನ್. ಕೆ ಲೋಕನಾಥ್ ಮಾತನಾಡಿ, ವೈ.ರಾಮಕೃಷ್ಣ ಅವರು ಸಮಾಜದಲ್ಲಿ ಏನೆಲ್ಲ ಸುಧಾರಣೆ ಮಾಡಿದ್ದರೆ ಎಂಬುದನೆಲ್ಲ ನಾವು ಸ್ಮರಿಸಬೇಕು. ಅವರು ಮಾಡಿರುವಂತಹ ಕೆಲಸದ ಮೇಲೆ ಗೌರವವನ್ನು ಇಡಬೇಕು. ಅವರು ನಡೆದುಬಂದಂತಹ ಹಾದಿಯಲ್ಲಿ ನಾವು ನಡೆಯಬೇಕು ಅವರು ಹೇಳಿರುವಂತಹ ವಿಚಾರಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಅವರಂತೆ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವ ಸೋಮಶೇಖರ್, ಎಂ.ಶಿವಣ್ಣ, ವಿಶ್ವನಾಥ್, ಕೆ. ಪಿ.ಸಿ.ಸಿ..ಎಸ್. ಸಿ. ರಾಜ್ಯ ಘಟಕದ ಅಧ್ಯಕ್ಷರಾದ ಆರ್.ಧರ್ಮಸೇನಾ, ಮತಂಗ ಫೌಂಡೇಶನ್ ನ ಅಧ್ಯಕ್ಷರಾದ ಆರ್.ಲೋಕೇಶ್, ಡಾ. ಬಾಬು ಜಗಜೀವನ್ ರಾಮ್ ಅಧ್ಯಯನ ಕೇಂದ್ರದ ನಿರ್ದೇಶಕರಾದ ಪ್ರೊ. ಕೆ.ಸದಾಶಿವ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

4 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

4 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

4 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

7 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

7 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

7 hours ago