ಮೈಸೂರು

ಕೆ. ವೈ.ರಾಮಕೃಷ್ಣ ಅವರ ಸೇವೆ ಮತ್ತು ಹೋರಾಟ ಇಂದಿಗೂ ಸ್ಮರಣೀಯ : ಸಚಿವ ಮುನಿಯಪ್ಪ

ಮೈಸೂರು : ಕೆ.ವೈ. ರಾಮಕೃಷ್ಣ ಅವರು ಅನೇಕ ಕ್ಷೇತ್ರಗಳಲ್ಲಿ ತಮ್ಮದೇ ಆದಂತಹ ಛಾಪನ್ನು ಮೂಡಿಸಿದ್ದು, ಅವರ ಸೇವೆ ಮತ್ತು ಹೋರಾಟ ಇಂದಿಗೂ ಸಹ ಸ್ಮರಣೀಯವಾಗಿದೆ ಎಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ. ಹೆಚ್. ಮುನಿಯಪ್ಪ ಹೇಳಿದರು.

ಡಾ. ಬಾಬೂ ಜಗಜೀವನರಾಮ್ ಅಧ್ಯಯನ, ಸಂಶೋಧನ ಮತ್ತು ವಿಸ್ತೀರ್ಣ ಕೇಂದ್ರ, ಮಾನಸಗಂಗೋತ್ರಿ ಮೈಸೂರು ಇವರ ವತಿಯಿಂದ ಶುಕ್ರವಾರ ರಾಣಿ ಬಹಾದ್ದೂರ್ ಸಭಾಂಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ವೈ. ರಾಮಕೃಷ್ಣ ಅವರ ಸಾಧನೆ ( ಬದುಕು, ಸಂಘಟನೆ ಮತ್ತು ರಾಜಕಾರಣ) ಎಂಬ ವಿಷಯ ಕುರಿತು ಒಂದು ದಿನದ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಅವರು ಮಾತನಾಡಿದರು.

ರಾಮಕೃಷ್ಣ ಅವರು ವಿಧಾನ ಸಭೆಯಲ್ಲಿ ಮಾತನಾಡುವಂತಹ ಶೈಲಿಯೇ ಆಕರ್ಷಣೆಯಾಗಿತ್ತು. ರಾಜಕೀಯ ಪಕ್ಷಗಳು ಇವರನ್ನು ನಾಯಕನಾಗಿ ಮಾಡಿಕೊಳ್ಳಬೇಕೆಂದು ಪ್ರೋತ್ಸಾಹ ನೀಡುತ್ತಿದ್ದರು. ಇವರ ನಡವಳಿಕೆ, ಭಾಷಣಗಳು, ಕಮಿಟ್ ಮೆಂಟ್ ಗಳು ಇವರನ್ನು ಇಲ್ಲಿಯವರೆಗೂ ಕರೆತಂದಿತು. ಇವರು ಯಾರ ಜೊತೆ ಇದ್ದರೂ ರಾಯಲ್ ಆಗಿ ಸಿನ್ಸಿಯರ್ ಆಗಿ ಇರುತ್ತಿದ್ದರು ಎಂದು ಹೇಳಿದರು.

ಕರ್ನಾಟಕದ ಜನಪ್ರಿಯ ರಾಜಕಾರಣಿಯಾಗಿದ್ದರು. ಸಾಮಾಜಿಕ ಸುಧಾರಣೆಗಾಗಿ , ಬದ್ಧತೆಗಾಗಿ, ಸಮಾಜದಲ್ಲಿ ಸುಧಾರಣೆ ತರಬೇಕೆಂದು ಹೋರಾಡಿದವರು ಹಾಗೂ ಸಾರ್ವಜನಿಕರ ಹಿತಾಸಕ್ತಿಗಾಗಿ ಶ್ರಮಿಸಿದವರು ವೈ. ರಾಮಕೃಷ್ಣ ಅವರು ಎಂದು ತಿಳಿಸಿದರು.

ಮಾಜಿ ಕೇಂದ್ರ ಸಚಿವರಾದ ಸಿ. ಎಂ. ಇಬ್ರಾಹಿಂ ಮಾತನಾಡಿ, ಒಳಮೀಸಲಾತಿಗಾಗಿ ಹೆಚ್ಚು ಹೋರಾಟಮಾಡಿದವರು ವೈ.ರಾಮಕೃಷ್ಣ ಅವರು ಒಳಮೀಸಲಾತಿಗಾಗಿ ಉತ್ತಮವಾದಂತಹ ಕೊಡುಗೆ ನೀಡಿದ್ದಾರೆ ಇಂತಹ ಲೀಡರ್ ಕರ್ನಾಟಕದಲ್ಲಿ ಹುಟ್ಟಿರುವುದು ನಮ್ಮ ಹೆಮ್ಮೆ ಎಂದು ಹೇಳಿದರು.

ನಾವೆಲ್ಲರೂ ಜಾತಿ ಜಾತಿ ಎಂದು ಬೇಧ ಭಾವ ಮಾಡದೆ ಎಲ್ಲರೂ ಒಗ್ಗಟ್ಟಾಗಿ ಸಮಬಾಳ್ವೆಯಿಂದ ಬದುಕಬೇಕು. ಜೊತೆಗೆ ಇಂತಹ ಮಹಾನ್ ವ್ಯಕ್ತಿಗಳ ಹೆಸರು ಸವಿನೆನಪಾಗಿ ಉಳಿಯುವಂತೆ ಮಾಡಬೇಕು ಎಂದರು.

ವಿಧಾನ ಸೌಧದಲ್ಲಿ ನಿಂತು ಮಾತನಾಡುತ್ತಿದ್ದರೆ ವೈ ರಾಮಕೃಷ್ಣ ಎಂದು ಕಾಣುತ್ತಿರಲಿಲ್ಲ ವೈ ರಾಮಕೃಷ್ಣ ರಾವ್ ಎಂದು ಕಾಣುತ್ತಿದ್ದರು. ಇವರು ವಿಧಾನ ಸೌಧದಲ್ಲಿ ಮಾಡಿದಂತಹ ಹೆಸರು ಬೇರೆ ಯಾರು ಸಹ ಮಾಡಿಲ್ಲ. ಈ ಸಮಾಜದಲ್ಲಿ ಪ್ರಾಮಾಣಿಕ ರಾಜಕಾರಣಿ ಇದ್ದರು ಎಂದರೆ ಅವರೇ ವೈ. ರಾಮಕೃಷ್ಣ ಅವರು ಎಂದು ತಿಳಿಸಿದರು.

ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎನ್. ಕೆ ಲೋಕನಾಥ್ ಮಾತನಾಡಿ, ವೈ.ರಾಮಕೃಷ್ಣ ಅವರು ಸಮಾಜದಲ್ಲಿ ಏನೆಲ್ಲ ಸುಧಾರಣೆ ಮಾಡಿದ್ದರೆ ಎಂಬುದನೆಲ್ಲ ನಾವು ಸ್ಮರಿಸಬೇಕು. ಅವರು ಮಾಡಿರುವಂತಹ ಕೆಲಸದ ಮೇಲೆ ಗೌರವವನ್ನು ಇಡಬೇಕು. ಅವರು ನಡೆದುಬಂದಂತಹ ಹಾದಿಯಲ್ಲಿ ನಾವು ನಡೆಯಬೇಕು ಅವರು ಹೇಳಿರುವಂತಹ ವಿಚಾರಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಅವರಂತೆ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವ ಸೋಮಶೇಖರ್, ಎಂ.ಶಿವಣ್ಣ, ವಿಶ್ವನಾಥ್, ಕೆ. ಪಿ.ಸಿ.ಸಿ..ಎಸ್. ಸಿ. ರಾಜ್ಯ ಘಟಕದ ಅಧ್ಯಕ್ಷರಾದ ಆರ್.ಧರ್ಮಸೇನಾ, ಮತಂಗ ಫೌಂಡೇಶನ್ ನ ಅಧ್ಯಕ್ಷರಾದ ಆರ್.ಲೋಕೇಶ್, ಡಾ. ಬಾಬು ಜಗಜೀವನ್ ರಾಮ್ ಅಧ್ಯಯನ ಕೇಂದ್ರದ ನಿರ್ದೇಶಕರಾದ ಪ್ರೊ. ಕೆ.ಸದಾಶಿವ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ನಾಳೆ ರಾಜ್ಯಪಾಲರ ಭೇಟಿಗೆ ಸಮಯ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ನಾಳೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರ ಭೇಟಿಗೆ ಸಮಯ ಕೋರಿದ್ದಾರೆ ಎಂದು ಸಿಎಂ…

3 mins ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣ ನೆಗೆಟಿವ್:‌ ದಿನೇಶ್‌ ಗುಂಡೂರಾವ್‌ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ಲ್ಯಾಬ್‌ ರಿಪೋರ್ಟ್‌ನಲ್ಲಿ ನೆಗೆಟಿವ್‌ ಎಂದು ವರದಿ ಬಂದಿದೆ ಎಂದು ಸಚಿವ ದಿನೇಶ್‌…

12 mins ago

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ?

ಬೆಂಗಳೂರು: ಉಗಾಂಡಾದಿಂದ ಬಂದಿದ್ದ ಮಹಿಳೆಯಲ್ಲಿ ಎಬೋಲಾ ಸೋಂಕಿನ ಲಕ್ಷಣಗಳು ಪತ್ತೆಯಾಗಿದ್ದು, ಆಕೆಯನ್ನು ಪ್ರತ್ಯೇಕ ವಾರ್ಡ್‌ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ದೃಢೀಕರಣಕ್ಕಾಗಿ…

1 hour ago

ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್‌ ಮನೆ ಮೇಲೆ ಇ.ಡಿ ದಾಳಿ

ತಿರುವನಂತಪುರ: ಸಿಎಂಆರ್‌ಎಲ್‌ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಕೇರಳದ ಮಾಜಿ ಸಿಎಂ…

3 hours ago

ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ

ಬೆಂಗಳೂರು: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳು ದಟ್ಟವಾಗಿವೆ. ಮೇ.29ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆಯುವ…

4 hours ago

ಕಪಿಲಾ ತೀರದಲ್ಲಿ ಮುಂದುವರಿದ ಬಿಸಿ ನೀರಿನ ಸುಲಿಗೆ

ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್‌ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…

7 hours ago