ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯ ಸಂಪೂರ್ಣ ಭರ್ತಿಯಾಗಿದೆ.
ಕಬಿನಿ ಜಲಾಶಯ ಸಂಪೂರ್ಣ ಭರ್ತಿಯಾಗಿರುವ ಪರಿಣಾಮ ಕಬಿನಿ ಹಿನ್ನೀರಿನಲ್ಲಿ ಭಾರೀ ಅಲೆಗಳೇ ಸೃಷ್ಟಿಯಾಗಿವೆ. ಇದನ್ನು ನೋಡಲು ವೀಕೆಂಡ್ನಲ್ಲಿ ನೂರಾರು ಪ್ರವಾಸಿಗರು ಹಿನ್ನೀರು ಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾರೆ.
ಪುಟ್ಟ ಪುಟ್ಟ ಮಕ್ಕಳ ಜೊತೆಗೂ ಕಬಿನಿ ಹಿನ್ನೀರು ಪ್ರದೇಶಕ್ಕೆ ಭೇಟಿ ನೀಡುತ್ತಿರುವ ಪ್ರವಾಸಿಗರು, ದಿನಪೂರ್ತಿ ಅಲ್ಲೆ ಮೋಜು ಮಸ್ತಿಗಳೊಂದಿಗೆ ಕಾಲ ಕಳೆದು ಖುಷಿಪಡುತ್ತಿದ್ದಾರೆ. ಕಬಿನಿ ಹಿನ್ನೀರು ಪ್ರದೇಶವಾದ ಭೀಮನಕೊಲ್ಲಿ ಮಹದೇಶ್ವರ ಸ್ವಾಮಿ ದೇವಸ್ಥಾನಕ್ಕೆ ನಿತ್ಯ ನೂರಾರು ಸಾರ್ವಜನಿಕರು ಹಿನ್ನೀರು ನೋಡಲೆಂದೇ ಭೇಟಿ ನೀಡುತ್ತಿದ್ದಾರೆ.
ಇನ್ನು ಕಬಿನಿ ಜಲಾಶಯ ಸಂಪೂರ್ಣ ಭರ್ತಿಯಾಗಿರುವ ಪರಿಣಾಮ ಜಲಾಶಯಕ್ಕೂ ವೀಕೆಂಡ್ನಲ್ಲಿ ಸಾವಿರಾರು ಪ್ರವಾಸಿಗರು ಭೇಟಿ ನೀಡಿ, ನೀರಿನ ಮನಮೋಹಕ ದೃಶ್ಯವನ್ನು ಕಣ್ತುಂಬಿಕೊಂಡಿದ್ದಾರೆ.
ವೀಕೆಂಡ್ನಲ್ಲಿ ಕಬಿನಿ ಜಲಾಶಯಕ್ಕೆ ಮತ್ತಷ್ಟು ಪ್ರವಾಸಿಗರ ಸಂಖ್ಯೆ ಹೆಚ್ಚಾಗಲಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಜಲಾಶಯ ಹಾಗೂ ಕಬಿನಿ ಹಿನ್ನೀರು ಪ್ರದೇಶಗಳಲ್ಲಿ ಪೊಲೀಸರನ್ನು ಕೂಡ ನಿಯೋಜನೆ ಮಾಡಲಾಗಿದೆ.
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…
ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…