Mysore
31
thunderstorm

Social Media

ಶುಕ್ರವಾರ, 01 ಮೇ 2026
Light
Dark

ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆಯಾದ ಪರಿಣಾಮ ಸಂಪೂರ್ಣ ಭರ್ತಿಯಾಗಿರುವ ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಬಾಗಿನ ಸಮರ್ಪಿಸಿದರು.

ಇಂದು ಮೈಸೂರು ಜಿಲ್ಲಾ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು, ಮೊದಲಿಗೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯಕ್ಕೆ ಬಾಗಿನ ಸಮರ್ಪಿಸಿದರು. ಆ ಬಳಿಕ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಅವರು, ತುಂಬಿ ತುಳುಕುತ್ತಿರುವ ಕಬಿನಿ ಜಲಾಶಯಕ್ಕೆ ಬಾಗಿನ ಸಮರ್ಪಿಸಿದರು.

ಈ ವೇಳೆ ಸಿಎಂ ಸಿದ್ದರಾಮಯ್ಯ ಜೊತೆ ಡಿಸಿಎಂ ಡಿ.ಕೆ.ಶಿವಕುಮಾರ್‌, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಸಚಿವ ವೆಂಕಟೇಶ್‌, ಎಚ್.ಡಿ.ಕೋಟೆ ಶಾಸಕ ಅನಿಲ್‌ ಚಿಕ್ಕಮಾದು ಅವರು ಸಹ ಬಾಗಿನ ಸಮರ್ಪಿಸಿ, ರೈತರಿಗೆ ಒಳಿತಾಗುವಂತೆ ಪ್ರಾರ್ಥಿಸಿದರು.

ಕಬಿನಿಗೆ ಬಾಗಿನ ಸಮರ್ಪಣೆ ಕಾರ್ಯಕ್ರಮದ ನಿಮಿತ್ತ ಇಂದು ಜಲಾಶಯಕ್ಕೆ ತಳಿರು ತೋರಣಗಳಿಂದ ಅಲಂಕಾರ ಮಾಡಿ ಸಿಂಗರಿಸಲಾಗಿತ್ತು. ಬಾಗಿನ ಸಲ್ಲಿಸುವ ಸ್ಥಳದಲ್ಲಿ ಸುಣ್ಣ-ಬಣ್ಣ ಬಳಿದು ಜಲಾಶಯಕ್ಕೆ ಹೆಚ್ಚಿನ ಅಲಂಕಾರ ಮಾಡಲಾಗಿತ್ತು.

Tags:
error: Content is protected !!