ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆಯಾದ ಪರಿಣಾಮ ಸಂಪೂರ್ಣ ಭರ್ತಿಯಾಗಿರುವ ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಬಾಗಿನ ಸಮರ್ಪಿಸಿದರು.
ಇಂದು ಮೈಸೂರು ಜಿಲ್ಲಾ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು, ಮೊದಲಿಗೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯಕ್ಕೆ ಬಾಗಿನ ಸಮರ್ಪಿಸಿದರು. ಆ ಬಳಿಕ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಅವರು, ತುಂಬಿ ತುಳುಕುತ್ತಿರುವ ಕಬಿನಿ ಜಲಾಶಯಕ್ಕೆ ಬಾಗಿನ ಸಮರ್ಪಿಸಿದರು.
ಈ ವೇಳೆ ಸಿಎಂ ಸಿದ್ದರಾಮಯ್ಯ ಜೊತೆ ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಸಚಿವ ವೆಂಕಟೇಶ್, ಎಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು ಅವರು ಸಹ ಬಾಗಿನ ಸಮರ್ಪಿಸಿ, ರೈತರಿಗೆ ಒಳಿತಾಗುವಂತೆ ಪ್ರಾರ್ಥಿಸಿದರು.
ಕಬಿನಿಗೆ ಬಾಗಿನ ಸಮರ್ಪಣೆ ಕಾರ್ಯಕ್ರಮದ ನಿಮಿತ್ತ ಇಂದು ಜಲಾಶಯಕ್ಕೆ ತಳಿರು ತೋರಣಗಳಿಂದ ಅಲಂಕಾರ ಮಾಡಿ ಸಿಂಗರಿಸಲಾಗಿತ್ತು. ಬಾಗಿನ ಸಲ್ಲಿಸುವ ಸ್ಥಳದಲ್ಲಿ ಸುಣ್ಣ-ಬಣ್ಣ ಬಳಿದು ಜಲಾಶಯಕ್ಕೆ ಹೆಚ್ಚಿನ ಅಲಂಕಾರ ಮಾಡಲಾಗಿತ್ತು.
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…
೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…