ನಂಜನಗೂಡು: ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಗುಡ್ಡ ಕುಸಿತ ಉಂಟಾಗಿದೆ. ಈ ಬೆನ್ನಲ್ಲೇ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯಕ್ಕೆ ಅಪಾರ ಪ್ರಮಾಣದ ಒಳಹರಿವು ಹರಿದು ಬರುತ್ತಿದ್ದು, ಹೊರಹರಿವನ್ನು ಕೂಡ ಹೆಚ್ಚಳ ಮಾಡಲಾಗಿದೆ.
ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ನೀರನ್ನು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಕಪಿಲಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ದಕ್ಷಿಣ ಕಾಶಿ ನಂಜನಗೂಡಿಗೆ ಜಲ ಕಂಟಕ ಎದುರಾಗಿದೆ.
ಮೈಸೂರು-ನಂಜನಗೂಡು ಹೆದ್ದಾರಿ ರಸ್ತೆ ಮುಳುಗಡೆಯಾಗಿರುವುದರಿಂದ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದ್ದು, ಬದಲಿ ರಸ್ತೆಗಳಲ್ಲಿ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಪರಿಣಾಮ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ. ಇನ್ನು ನಂಜನಗೂಡು ಪಟ್ಟಣದ ಹಲವು ತಗ್ಗು ಪ್ರದೇಶಗಳಿಗೂ ಕೂಡ ಕಪಿಲಾ ನದಿಯ ಪ್ರವಾಹದ ನೀರು ನುಗ್ಗಿದ್ದು, ಸಂತ್ರಸ್ತರನ್ನು ಕಾಳಜಿ ಕೇಂದ್ರಕ್ಕೆ ರವಾನೆ ಮಾಡಲಾಗಿದೆ.
ಕಪಿಲಾ ನದಿ ತೀರದಲ್ಲಿರುವ ಶ್ರೀ ಬಸವೇಶ್ವರ, ಲಿಂಗಭಟ್ಟರ ಗುಡಿ, ಕಾಶಿ ವಿಶ್ವನಾಥ ಸ್ವಾಮಿ ದೇವಾಲಯ, ಚಾಮುಂಡೇಶ್ವರಿ, ಅಯ್ಯಪ್ಪಸ್ವಾಮಿ, ದತ್ತಾತ್ರೇಯ ಸ್ವಾಮಿ ಹಾಗೂ ಪರಶುರಾಮ ದೇವಾಲಯಗಳು ಸಂಪೂರ್ಣ ಜಲಾವೃತವಾಗಿವೆ.
ಇದಲ್ಲದೇ ಐತಿಹಾಸಿಕ 16 ಕಾಲು ಮಂಟಪ ಮತ್ತು ಹಳೆಯ ವೆಲ್ಲೆಸ್ಲಿ ಸೇತುವೆ ಮುಳುಗಡೆಯಾಗಿದೆ. ಇನ್ನು ಕಪಿಲಾ ನದಿ ಪಾತ್ರದ ತಗ್ಗು ಪ್ರದೇಶಗಳು ಹಾಗೂ ಅನೇಕ ಜಮೀನುಗಳು ಜಲಾವೃತವಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…
ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…
ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…
ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…
ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…