ನಂಜನಗೂಡು: ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಗುಡ್ಡ ಕುಸಿತ ಉಂಟಾಗಿದೆ. ಈ ಬೆನ್ನಲ್ಲೇ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯಕ್ಕೆ ಅಪಾರ ಪ್ರಮಾಣದ ಒಳಹರಿವು ಹರಿದು ಬರುತ್ತಿದ್ದು, ಹೊರಹರಿವನ್ನು ಕೂಡ ಹೆಚ್ಚಳ ಮಾಡಲಾಗಿದೆ.
ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ನೀರನ್ನು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಕಪಿಲಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ದಕ್ಷಿಣ ಕಾಶಿ ನಂಜನಗೂಡಿಗೆ ಜಲ ಕಂಟಕ ಎದುರಾಗಿದೆ.
ಮೈಸೂರು-ನಂಜನಗೂಡು ಹೆದ್ದಾರಿ ರಸ್ತೆ ಮುಳುಗಡೆಯಾಗಿರುವುದರಿಂದ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದ್ದು, ಬದಲಿ ರಸ್ತೆಗಳಲ್ಲಿ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಪರಿಣಾಮ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ. ಇನ್ನು ನಂಜನಗೂಡು ಪಟ್ಟಣದ ಹಲವು ತಗ್ಗು ಪ್ರದೇಶಗಳಿಗೂ ಕೂಡ ಕಪಿಲಾ ನದಿಯ ಪ್ರವಾಹದ ನೀರು ನುಗ್ಗಿದ್ದು, ಸಂತ್ರಸ್ತರನ್ನು ಕಾಳಜಿ ಕೇಂದ್ರಕ್ಕೆ ರವಾನೆ ಮಾಡಲಾಗಿದೆ.
ಕಪಿಲಾ ನದಿ ತೀರದಲ್ಲಿರುವ ಶ್ರೀ ಬಸವೇಶ್ವರ, ಲಿಂಗಭಟ್ಟರ ಗುಡಿ, ಕಾಶಿ ವಿಶ್ವನಾಥ ಸ್ವಾಮಿ ದೇವಾಲಯ, ಚಾಮುಂಡೇಶ್ವರಿ, ಅಯ್ಯಪ್ಪಸ್ವಾಮಿ, ದತ್ತಾತ್ರೇಯ ಸ್ವಾಮಿ ಹಾಗೂ ಪರಶುರಾಮ ದೇವಾಲಯಗಳು ಸಂಪೂರ್ಣ ಜಲಾವೃತವಾಗಿವೆ.
ಇದಲ್ಲದೇ ಐತಿಹಾಸಿಕ 16 ಕಾಲು ಮಂಟಪ ಮತ್ತು ಹಳೆಯ ವೆಲ್ಲೆಸ್ಲಿ ಸೇತುವೆ ಮುಳುಗಡೆಯಾಗಿದೆ. ಇನ್ನು ಕಪಿಲಾ ನದಿ ಪಾತ್ರದ ತಗ್ಗು ಪ್ರದೇಶಗಳು ಹಾಗೂ ಅನೇಕ ಜಮೀನುಗಳು ಜಲಾವೃತವಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…
ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…
ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…
ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ…
ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…
ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…