ಎಚ್ಡಿ ಕೋಟೆ: ಕೇರಳದ ವಯನಾಡು ಭಾಗದಲ್ಲಿ ಮಳೆ ಕಡಿಮೆಯಾದ ಪರಿಣಾಮ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಇಳಿಕೆ ಕಂಡು ಬಂದಿದೆ.
ಜಲಾಶಯದ ಇಂದಿನ ಒಳಹರಿವು 15,000 ಕ್ಯೂಸೆಕ್ಸ್ಗಳಾಗಿದ್ದು, ಜಲಾಶಯದ ಹೊರಹರಿವನ್ನು 9000 ಕ್ಯೂಸೆಕ್ಸ್ಗಳಿಗೆ ಇಳಿಕೆ ಮಾಡಲಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 84 ಅಡಿಗಳಾಗಿದ್ದು, ಜಲಾಶಯದ ಇಂದಿನ ನೀರಿನ ಮಟ್ಟ 82 ಅಡಿಗಳಾಗಿದೆ.
ಜಲಾಶಯದಿಂದ ಹೊರಹರಿವನ್ನು ಭಾರೀ ಪ್ರಮಾಣದಲ್ಲಿ ಕಡಿಮೆ ಮಾಡಲಾಗಿದ್ದು, ಕಪಿಲಾ ನದಿ ಪಾತ್ರದ ಜನರು ಕೊಂಚ ನಿರಾಳರಾಗಿದ್ದಾರೆ. ಇನ್ನು ಕಪಿಲಾ ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನತೆ ಪ್ರವಾಹ ಪರಿಸ್ಥಿತಿಯಿಂದ ಹೊರಬರಲು ಇನ್ನೂ ಎರಡು ದಿನ ಬೇಕಾಗಿದ್ದು, ಜನಜೀವನ ಕೊಂಚ ಸಹಜಸ್ಥಿತಿಯತ್ತ ಮರಳುತ್ತಿದೆ.
ಕಪಿಲಾ ನದಿ ಆರ್ಭಟಕ್ಕೆ ತತ್ತರಿಸಿ ಹೋಗಿದ್ದ ಜನತೆ ಈಗ ಮಳೆಯ ಪ್ರಮಾಣ ಕಡಿಮೆಯಾದ್ದರಿಂದ ಕೊಂಚ ನಿರಾಳರಾಗಿದ್ದು, ಕೃಷಿ ಚಟುವಟಿಕೆಗಳತ್ತ ಮುಖ ಮಾಡಿದ್ದಾರೆ.
ಬೆಂಗಳೂರು: ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ಅವರು ನೀಡಿರುವ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ…
ಹಾಸನ: ಕಾಡಾನೆ ದಾಳಿಗೆ ಮತ್ತೋರ್ವ ರೈತ ಬಲಿಯಾಗಿರುವ ಧಾರುಣ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕಣಗುಪ್ಪೆ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಏಪ್ರಿಲ್.15ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮುಂಬೈ: ಭಾರತೀಯ ಚಿತ್ರರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ವಿಧಿವಶರಾಗಿದ್ದಾರೆ. ಹಿರಿಯ ಗಾಯಕಿ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ ಕಂಬನಿ…
ಬೈರುತ್: ಅಮೇರಿಕಾ-ಇರಾನ್ ಮಾತುಕತೆ ವಿಫಲವಾದ ಕೆಲವೇ ಗಂಟೆಗಳ ನಂತರ ಹೆಬ್ಜುಲ್ಲಾ ಭದ್ರಕೋಟೆಯನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದಾಳಿಯಲ್ಲಿ 11 ಮಂದಿ…
ಬೆಂಗಳೂರು : ಶಕ್ತಿ ಯೋಜನೆಯ ಮಹಿಳಾ ಟಿಕೆಟ್ಗಳನ್ನು ಪುರುಷ ಪ್ರಯಾಣಿಕರಿಗೂ ನೀಡಿ ಹಣ ಸಂಗ್ರಹಿಸಿ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ…