ಮೈಸೂರು: ಕಾಡಾನೆಗಳ ನಡುವೆ ಸಂಭವಿಸಿದ ಕಾಳಗದಲ್ಲಿ ಉದ್ದನೆಯ ದಂತವುಳ್ಳ ಜೂನಿಯರ್ ಬೋಗೇಶ್ವರ್ ಎಂದು ಕರೆಸಿಕೊಳ್ಳುತ್ತಿದ್ದ 24 ವರ್ಷದ ಆನೆಯೊಂದು ಮೃತಪಟ್ಟಿದ್ದು, ವನ್ಯಜೀವಿ ಪ್ರೇಮಿಗಳು ಸಂತಾಪ ವ್ಯಕ್ತಪಡಿಸುತ್ತಿದ್ದಾರೆ.
ಕಬಿನಿ ಹಿನ್ನೀರು, ಡಿ.ಬಿ.ಕುಪ್ಪೆ, ಅಂತರಸಂತೆ ವಲಯದಲ್ಲಿದ್ದ ಉದ್ದನೆಯ ದಂತವುಳ್ಳ ಬೋಗೇಶ್ವರ ಆನೆಯನ್ನೇ (2022ರಲ್ಲಿ ಮೃತಪಟ್ಟಿರುವ) ಹೋಲುವಂತೆ ಉದ್ದನೆಯ ದಂತವುಳ್ಳ ಆನೆಯೊಂದು ಸಫಾರಿ ವಲಯದಲ್ಲಿ ಕಾಣಿಸಿಕೊಳ್ಳುತ್ತಿತ್ತು. ಅದಕ್ಕೆ ಕೆಲ ವನ್ಯಜೀವಿ ಛಾಯಾಗ್ರಾಹಕರು ಜ್ಯೂನಿಯರ್ ಭೋಗೇಶ್ವರ ಎಂದು ಕರೆಯುತ್ತಿದ್ದರು.
ವಾರದಿಂದೆ ಜ್ಯೂನಿಯರ್ ಭೋಗೇಶ್ವರ ಆನೆಯೂ ಮೃತಪಟ್ಟಿದ್ದು, ಸಫಾರಿಗರು ಹಾಗೂ ಅರಣ್ಯ ಸಿಬ್ಬಂದಿಗೆ ನೋವುಂಟಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಜ್ಯೂನಿಯರ್ ಭೋಗೇಶ್ವರ ಆನೆಯ ಸಾವಿನ ಸುದ್ದಿ ಚಿತ್ರದೊಂದಿಗೆ ವೈರಲ್ ಆಗಿದೆ.
ಡಿ.ಬಿ.ಕುಪ್ಪೆ ವನ್ಯಜೀವಿ ವಲಯದ ಕಬಿನಿ ಹಿನ್ನಿರಿನ ಪ್ರದೇಶ ಟವರ್ಕೊಲ್ಲಿ ಎಂಬಲ್ಲಿ ಮಾ.23ರಂದು ಗಂಡಾನೆಯೊಂದು ನಿತ್ರಾಣ ಸ್ಥಿತಿಯಲ್ಲಿ ಬಿದ್ದಿರುವುದನ್ನು ಗಸ್ತಿನಲ್ಲಿದ್ದ ಸಿಬ್ಬಂದಿ ಗಮನಿಸಿದ್ದರು. ಸಮೀಪಕ್ಕೆ ಹೋಗಿ ಪರಿಶೀಲಿಸಿದಾಗ ಕಾಡಾನೆಯೊಂದಿಗಿನ ಕಾಳಗದಿಂದ ಗಾಯಗೊಂಡಿರುವುದು ಪತ್ತೆಯಾಗಿತ್ತು. ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಗಂಡಾನೆಗೆ ಚಿಕಿತ್ಸೆ ಆರಂಭಿಸಲಾಗಿತ್ತು. ಆದರೆ, ಅದು ಕೊನೆಯುಸಿರು ಎಳೆದಿದೆ.
ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್ ಹಾಕಿದ ಮುಂಬೈ ಇಂಡಿಯನ್ಸ್ ಕೊನೆಗೂ ಐಪಿಎಲ್ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…
ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…
ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್ಪಿಜಿ (ದ್ರವೀಕೃತ…
ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…
ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…
ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ ಎಲ್.ಪಿ.ಜಿಗೆ ಯಾವುದೇ…