ಮೈಸೂರು: ಕಾಡಾನೆಗಳ ನಡುವೆ ಸಂಭವಿಸಿದ ಕಾಳಗದಲ್ಲಿ ಉದ್ದನೆಯ ದಂತವುಳ್ಳ ಜೂನಿಯರ್ ಬೋಗೇಶ್ವರ್ ಎಂದು ಕರೆಸಿಕೊಳ್ಳುತ್ತಿದ್ದ 24 ವರ್ಷದ ಆನೆಯೊಂದು ಮೃತಪಟ್ಟಿದ್ದು, ವನ್ಯಜೀವಿ ಪ್ರೇಮಿಗಳು ಸಂತಾಪ ವ್ಯಕ್ತಪಡಿಸುತ್ತಿದ್ದಾರೆ.
ಕಬಿನಿ ಹಿನ್ನೀರು, ಡಿ.ಬಿ.ಕುಪ್ಪೆ, ಅಂತರಸಂತೆ ವಲಯದಲ್ಲಿದ್ದ ಉದ್ದನೆಯ ದಂತವುಳ್ಳ ಬೋಗೇಶ್ವರ ಆನೆಯನ್ನೇ (2022ರಲ್ಲಿ ಮೃತಪಟ್ಟಿರುವ) ಹೋಲುವಂತೆ ಉದ್ದನೆಯ ದಂತವುಳ್ಳ ಆನೆಯೊಂದು ಸಫಾರಿ ವಲಯದಲ್ಲಿ ಕಾಣಿಸಿಕೊಳ್ಳುತ್ತಿತ್ತು. ಅದಕ್ಕೆ ಕೆಲ ವನ್ಯಜೀವಿ ಛಾಯಾಗ್ರಾಹಕರು ಜ್ಯೂನಿಯರ್ ಭೋಗೇಶ್ವರ ಎಂದು ಕರೆಯುತ್ತಿದ್ದರು.
ವಾರದಿಂದೆ ಜ್ಯೂನಿಯರ್ ಭೋಗೇಶ್ವರ ಆನೆಯೂ ಮೃತಪಟ್ಟಿದ್ದು, ಸಫಾರಿಗರು ಹಾಗೂ ಅರಣ್ಯ ಸಿಬ್ಬಂದಿಗೆ ನೋವುಂಟಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಜ್ಯೂನಿಯರ್ ಭೋಗೇಶ್ವರ ಆನೆಯ ಸಾವಿನ ಸುದ್ದಿ ಚಿತ್ರದೊಂದಿಗೆ ವೈರಲ್ ಆಗಿದೆ.
ಡಿ.ಬಿ.ಕುಪ್ಪೆ ವನ್ಯಜೀವಿ ವಲಯದ ಕಬಿನಿ ಹಿನ್ನಿರಿನ ಪ್ರದೇಶ ಟವರ್ಕೊಲ್ಲಿ ಎಂಬಲ್ಲಿ ಮಾ.23ರಂದು ಗಂಡಾನೆಯೊಂದು ನಿತ್ರಾಣ ಸ್ಥಿತಿಯಲ್ಲಿ ಬಿದ್ದಿರುವುದನ್ನು ಗಸ್ತಿನಲ್ಲಿದ್ದ ಸಿಬ್ಬಂದಿ ಗಮನಿಸಿದ್ದರು. ಸಮೀಪಕ್ಕೆ ಹೋಗಿ ಪರಿಶೀಲಿಸಿದಾಗ ಕಾಡಾನೆಯೊಂದಿಗಿನ ಕಾಳಗದಿಂದ ಗಾಯಗೊಂಡಿರುವುದು ಪತ್ತೆಯಾಗಿತ್ತು. ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಗಂಡಾನೆಗೆ ಚಿಕಿತ್ಸೆ ಆರಂಭಿಸಲಾಗಿತ್ತು. ಆದರೆ, ಅದು ಕೊನೆಯುಸಿರು ಎಳೆದಿದೆ.
ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…
ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…
ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…
ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…
ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…
ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…