ಮೈಸೂರು: ಕಾಡಾನೆಗಳ ನಡುವೆ ಸಂಭವಿಸಿದ ಕಾಳಗದಲ್ಲಿ ಉದ್ದನೆಯ ದಂತವುಳ್ಳ ಜೂನಿಯರ್ ಬೋಗೇಶ್ವರ್ ಎಂದು ಕರೆಸಿಕೊಳ್ಳುತ್ತಿದ್ದ 24 ವರ್ಷದ ಆನೆಯೊಂದು ಮೃತಪಟ್ಟಿದ್ದು, ವನ್ಯಜೀವಿ ಪ್ರೇಮಿಗಳು ಸಂತಾಪ ವ್ಯಕ್ತಪಡಿಸುತ್ತಿದ್ದಾರೆ.
ಕಬಿನಿ ಹಿನ್ನೀರು, ಡಿ.ಬಿ.ಕುಪ್ಪೆ, ಅಂತರಸಂತೆ ವಲಯದಲ್ಲಿದ್ದ ಉದ್ದನೆಯ ದಂತವುಳ್ಳ ಬೋಗೇಶ್ವರ ಆನೆಯನ್ನೇ (2022ರಲ್ಲಿ ಮೃತಪಟ್ಟಿರುವ) ಹೋಲುವಂತೆ ಉದ್ದನೆಯ ದಂತವುಳ್ಳ ಆನೆಯೊಂದು ಸಫಾರಿ ವಲಯದಲ್ಲಿ ಕಾಣಿಸಿಕೊಳ್ಳುತ್ತಿತ್ತು. ಅದಕ್ಕೆ ಕೆಲ ವನ್ಯಜೀವಿ ಛಾಯಾಗ್ರಾಹಕರು ಜ್ಯೂನಿಯರ್ ಭೋಗೇಶ್ವರ ಎಂದು ಕರೆಯುತ್ತಿದ್ದರು.
ವಾರದಿಂದೆ ಜ್ಯೂನಿಯರ್ ಭೋಗೇಶ್ವರ ಆನೆಯೂ ಮೃತಪಟ್ಟಿದ್ದು, ಸಫಾರಿಗರು ಹಾಗೂ ಅರಣ್ಯ ಸಿಬ್ಬಂದಿಗೆ ನೋವುಂಟಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಜ್ಯೂನಿಯರ್ ಭೋಗೇಶ್ವರ ಆನೆಯ ಸಾವಿನ ಸುದ್ದಿ ಚಿತ್ರದೊಂದಿಗೆ ವೈರಲ್ ಆಗಿದೆ.
ಡಿ.ಬಿ.ಕುಪ್ಪೆ ವನ್ಯಜೀವಿ ವಲಯದ ಕಬಿನಿ ಹಿನ್ನಿರಿನ ಪ್ರದೇಶ ಟವರ್ಕೊಲ್ಲಿ ಎಂಬಲ್ಲಿ ಮಾ.23ರಂದು ಗಂಡಾನೆಯೊಂದು ನಿತ್ರಾಣ ಸ್ಥಿತಿಯಲ್ಲಿ ಬಿದ್ದಿರುವುದನ್ನು ಗಸ್ತಿನಲ್ಲಿದ್ದ ಸಿಬ್ಬಂದಿ ಗಮನಿಸಿದ್ದರು. ಸಮೀಪಕ್ಕೆ ಹೋಗಿ ಪರಿಶೀಲಿಸಿದಾಗ ಕಾಡಾನೆಯೊಂದಿಗಿನ ಕಾಳಗದಿಂದ ಗಾಯಗೊಂಡಿರುವುದು ಪತ್ತೆಯಾಗಿತ್ತು. ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಗಂಡಾನೆಗೆ ಚಿಕಿತ್ಸೆ ಆರಂಭಿಸಲಾಗಿತ್ತು. ಆದರೆ, ಅದು ಕೊನೆಯುಸಿರು ಎಳೆದಿದೆ.
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…