ಮೈಸೂರು

ನಾಡು ಕಂಡ ಅಪೂರ್ವ ಸಂತ ಕೈವಾರ ತಾತಯ್ಯ : ಎಚ್ ಎ ವೆಂಕಟೇಶ್ ಅಭಿಪ್ರಾಯ

ಮೈಸೂರು : ಕೈವಾರ ತಾತಯ್ಯ ಈ ನಾಡು ಕಂಡ ಒಬ್ಬ ಅಪೂರ್ವ ಸಂತರು, ಸಮಾಜ ಸುಧಾರಕರು, ಮಹಾನ್ ಜ್ಞಾನಿಗಳು, ಸದಾ ಭಕ್ತಿ, ಭಜನೆ, ಧ್ಯಾನ ಮುಂತಾದ ದೈವಿಕ ಕ್ರಿಯೆಗಳಲ್ಲಿ ನಿರತರಾಗಿದ್ದರು. ಶಾಂತ ಚಿತ್ತ, ಪ್ರೀತಿ ಸರಳ ಬದುಕನ್ನು ಸಾರಿದ ಮಹಾ ಚೇತನ ಎಂದು ಶ್ರೀ ಯೋಗಿ ನಾರಾಯಣ ಯತೀಂದ್ರ ಪ್ರಚಾರ ಸಭಾ ಪ್ರಧಾನ ಸಂಚಾಲಕ ಹಾಗೂ ಮೈಲಾಕ್ ಮಾಜಿ ಅಧ್ಯಕ್ಷರಾದ ಎಚ್ ಎ ವೆಂಕಟೇಶ್ ಅಭಿಪ್ರಾಯಪಟ್ಟರು.

ನಗರದ ಸರಸ್ವತಿ ಪುರಂನಲ್ಲಿರುವ ಬಣಜಿಗ ಬಲಿಜ ವಿದ್ಯಾರ್ಥಿನಿಲಯದಲ್ಲಿ ಯೋಗಿ ನಾರಾಯಣ ಯತೀಂದ್ರ ಜಯಂತೋತ್ಸವ ಕಾರ್ಯಕ್ರಮದಲ್ಲಿ ಪುಷ್ಪಾರ್ಚನೆ ಮಾಡಿ ಅವರು ಮಾತನಾಡಿದ ಅವರು, ಭಾರತ ದೇಶದ ಭವಿಷ್ಯದ ಸ್ಥಿತಿಯನ್ನು ಕುರಿತು ಹೇಳಿರುವ ಕಾಲಜ್ಞಾನವು ಒಬ್ಬ ಪ್ರವಾದಿಯ ಪವಾಡವಾಗಿದೆ. ಪ್ರಪಂಚದಲ್ಲಿ ಯಾವುದೇ ಒಂದು ಭಾಗದಲ್ಲಿ ಮುಂದೊಂದು ದಿನ ನಡೆಯಬಹುದಾದ ಘಟನೆಗಳನ್ನು ಇದ್ದ ಸ್ಥಳದಲ್ಲಿಯೇ ಕುಳಿತು ನಿರ್ದಿಷ್ಟವಾಗಿ ಹೇಳುವ ಶಕ್ತಿಯೇ ಕಾಲಜ್ಞಾನವಾಗಿದೆ. ಇಂತಹ ಕಾಲಜ್ಞಾನವನ್ನು ಶ್ರೀ ಯೋಗಿ ನಾರಾಯಣ ಯತೀಂದ್ರರು ಅನೇಕ ಬಾರಿ ಪ್ರಸ್ತಾಪಿಸಿದ್ದಾರೆ ಎಂದರು.

ಪ್ರಗತಿಯ ಉತ್ತುಂಗಕ್ಕೆ ಏರುವ ಬರದಲ್ಲಿ ಜ್ಞಾನ ಮತ್ತು ತಂತ್ರಜ್ಞಾನದ ಹಿಂದೆ ಬಿದ್ದಿರುವ ಮಾನವ ಜನಾಂಗ ತನ್ನ ಉಳಿವಿಗೆ ಕಾರಣವಾದ ಪ್ರಕೃತಿಯ ಒಡನಾಟವನ್ನೇ ಮರೆತಿದ್ದಾನೆ. ಇದರ ಪರಿಣಾಮವನ್ನು ಮತ್ತು ಮುಂದಿನ ಹಾಗೂ ಹೋಗುಗಳನ್ನು ಜಗತ್ತಿನಲ್ಲಿ ಅನೇಕರು ಭವಿಷ್ಯ ವಾಣಿ ರೂಪದಲ್ಲಿ ಈಗಾಗಲೇ ಮಂಡಿಸಿದ್ದಾರೆ.

ಯುರೋಪ್ ,ಅಮೆರಿಕ, ಜಪಾನ್ ರಾಷ್ಟ್ರಗಳಲ್ಲಿ ಜನ ಇಂತಹ ಮಹನೀಯರನ್ನು ಮತ್ತೆ ಮತ್ತೆ ನೆನೆಯುತ್ತಾರೆ ಮತ್ತು ಪೂಜಿಸುತ್ತಾರೆ. ಆದರೆ ಭರತ ಖಂಡದಲ್ಲಿ ಅವೆಲ್ಲಕ್ಕಿಂತ ಹೆಚ್ಚಿನ ಭವಿಷ್ಯ ವಾಣಿಗಳಿವೆ. ಅನಾದಿ ಕಾಲದಿಂದಲೂ ಕಾಲಕಾಲಕ್ಕೆ ಈ ದೇಶದಲ್ಲಿ ಹಲವಾರು ಮಹಾತ್ಮರು ಮನುಜ ಕುಲದ ಹಾಗೂ ಹೋಗುಗಳ ಬಗ್ಗೆ ಮುನ್ಸೂಚನೆ ನೀಡಿದ್ದಾರೆ. ಇವರುಗಳಲ್ಲಿ ಕರ್ನಾಟಕದ ಶ್ರೀ ಯೋಗಿ ನಾರಾಯಣ ಯತೀಂದ್ರರು ಬಹಳ ಪ್ರಮುಖರು ಎಂದು ತಿಳಿಸಿದರು.

ಸಂಘದ ಅಧ್ಯಕ್ಷ ಎಂ ನಾರಾಯಣ್ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಎಂ ಆರ್ ಗೋಪಾಲಕೃಷ್ಣ , ಖಜಾಂಚಿ ಪಾಂಡುವಪುರ ಕೆ ಚಂದ್ರಶೇಖರ್, ನಿರ್ದೇಶಕರಾದ ಬಿ.ಕೆ. ಸುರೇಶ್, ಹೇಮಂತ ಕುಮಾರ್ ,ಚನ್ನಕೇಶವ , ಪಾರ್ಥ ಸಾರಥಿ, ಎಚ್.ಆರ್ .ವೆಂಕಟೇಶ್, ನಿಲಯ ಪಾಲಕ ರಘು ಶೆಟ್ಟಿ ಮುಂತಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

 

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮಂತ್ರಾಲಯಕ್ಕೆ ಭೇಟಿ ನೀಡಿದ ನಟ ರಿಷಬ್‌ ಶೆಟ್ಟಿ ಕುಟುಂಬ

ರಾಯಚೂರು: ನಟ ಹಾಗೂ ನಿರ್ದೇಶಕ ರಿಷಬ್‌ ಶೆಟ್ಟಿ ಅವರಿಂದು ಕುಟುಂಬ ಸಮೇತರಾಗಿ ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದರು.…

3 mins ago

ಬಿಪಿಎಲ್‌ ಕಾರ್ಡ್‌ದಾರರಿಗೆ ಜನವರಿಯಿಂದ ಇಂದಿರಾ ಕಿಟ್:‌ ಸಚಿವ ಮುನಿಯಪ್ಪ

ಬೆಂಗಳೂರು: ಬಿಪಿಎಲ್‌ ಕಾರ್ಡುದಾರರಿಗೆ ಜನವರಿ ಅಥವಾ ಫೆಬ್ರವರಿಯಲ್ಲಿ ಇಂದಿರಾ ಕಿಟ್ ವಿತರಣೆ ಮಾಡಲಾಗುತ್ತದೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.…

18 mins ago

ಅಶ್ಲೀಲ ಮೆಸೇಜ್:‌ ಪೊಲೀಸ್‌ ಕಮಿಷನರ್‌ಗೆ ದೂರು ನೀಡಿದ ದರ್ಶನ್‌ ಪತ್ನಿ ವಿಜಯಲಕ್ಷ್ಮೀ

ಬೆಂಗಳೂರು: ನಟ ದರ್ಶನ್‌ ಹಾಗೂ ನಟ ಕಿಚ್ಚ ಸುದೀಪ್‌ ಫ್ಯಾನ್ಸ್‌ ವಾರ್‌ ತಾರಕಕ್ಕೇರಿರುವ ಮಧ್ಯೆ ಸೋಷಿಯಲ್‌ ಮೀಡಿಯಾದಲ್ಲಿ ಅಶ್ಲೀಲ ಮೆಸೇಜ್‌…

42 mins ago

ಸರ್ಫರಾಜ್‌ ಮನೆ ಮೇಲೆ ಲೋಕಾಯುಕ್ತ ದಾಳಿ ವಿಚಾರ: ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಪ್ರತಿಕ್ರಿಯೆ

ಮೈಸೂರು:  ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಸಹಾಯಕ ಸರ್ಫರಾಜ್ ಅವರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿರುವ…

54 mins ago

ಮುಂದಿನ ಚುನಾವಣೆಯಲ್ಲಿ ಜನತೆ ಕಾಂಗ್ರೆಸ್‌ ಪಕ್ಷವನ್ನು ಹೊರಗೆ ಕಳಿಸೋದು ಗ್ಯಾರಂಟಿ: ಆರ್.‌ಅಶೋಕ್‌

ಬೆಂಗಳೂರು: ತನ್ನ ಆಂತರಿಕ ಕಚ್ಚಾಟದಿಂದ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಹೊರ ಬರದಿದ್ದರೆ, ಮುಂದಿನ ವಿಧಾನಸಭೆ ಚುನಾಣೆಯಲ್ಲಿ ರಾಜ್ಯದ ಜನತೆ ಇವರನ್ನು…

1 hour ago

ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಡಾ. ಶಾಮನೂರು ಶಿವಶಂಕಪ್ಪಗೆ ನುಡಿ ನಮನ

ಬೆಂಗಳೂರು: ಬೆಂಗಳೂರಿನಲ್ಲಿ 1000 ವಿದ್ಯಾರ್ಥಿನಿಯರಿಗೆ ಹಾಸ್ಟೆಲ್ ನಿರ್ಮಿಸಬೇಕು ಎಂಬುದು ಡಾ. ಶಾಮನೂರು ಶಿವಶಂಕರಪ್ಪ ಆಶಯವಾಗಿತ್ತು, ಈ ಕನಸು ನನಸು ಮಾಡಲು…

1 hour ago