ಮೈಸೂರು

ನಾಡು ಕಂಡ ಅಪೂರ್ವ ಸಂತ ಕೈವಾರ ತಾತಯ್ಯ : ಎಚ್ ಎ ವೆಂಕಟೇಶ್ ಅಭಿಪ್ರಾಯ

ಮೈಸೂರು : ಕೈವಾರ ತಾತಯ್ಯ ಈ ನಾಡು ಕಂಡ ಒಬ್ಬ ಅಪೂರ್ವ ಸಂತರು, ಸಮಾಜ ಸುಧಾರಕರು, ಮಹಾನ್ ಜ್ಞಾನಿಗಳು, ಸದಾ ಭಕ್ತಿ, ಭಜನೆ, ಧ್ಯಾನ ಮುಂತಾದ ದೈವಿಕ ಕ್ರಿಯೆಗಳಲ್ಲಿ ನಿರತರಾಗಿದ್ದರು. ಶಾಂತ ಚಿತ್ತ, ಪ್ರೀತಿ ಸರಳ ಬದುಕನ್ನು ಸಾರಿದ ಮಹಾ ಚೇತನ ಎಂದು ಶ್ರೀ ಯೋಗಿ ನಾರಾಯಣ ಯತೀಂದ್ರ ಪ್ರಚಾರ ಸಭಾ ಪ್ರಧಾನ ಸಂಚಾಲಕ ಹಾಗೂ ಮೈಲಾಕ್ ಮಾಜಿ ಅಧ್ಯಕ್ಷರಾದ ಎಚ್ ಎ ವೆಂಕಟೇಶ್ ಅಭಿಪ್ರಾಯಪಟ್ಟರು.

ನಗರದ ಸರಸ್ವತಿ ಪುರಂನಲ್ಲಿರುವ ಬಣಜಿಗ ಬಲಿಜ ವಿದ್ಯಾರ್ಥಿನಿಲಯದಲ್ಲಿ ಯೋಗಿ ನಾರಾಯಣ ಯತೀಂದ್ರ ಜಯಂತೋತ್ಸವ ಕಾರ್ಯಕ್ರಮದಲ್ಲಿ ಪುಷ್ಪಾರ್ಚನೆ ಮಾಡಿ ಅವರು ಮಾತನಾಡಿದ ಅವರು, ಭಾರತ ದೇಶದ ಭವಿಷ್ಯದ ಸ್ಥಿತಿಯನ್ನು ಕುರಿತು ಹೇಳಿರುವ ಕಾಲಜ್ಞಾನವು ಒಬ್ಬ ಪ್ರವಾದಿಯ ಪವಾಡವಾಗಿದೆ. ಪ್ರಪಂಚದಲ್ಲಿ ಯಾವುದೇ ಒಂದು ಭಾಗದಲ್ಲಿ ಮುಂದೊಂದು ದಿನ ನಡೆಯಬಹುದಾದ ಘಟನೆಗಳನ್ನು ಇದ್ದ ಸ್ಥಳದಲ್ಲಿಯೇ ಕುಳಿತು ನಿರ್ದಿಷ್ಟವಾಗಿ ಹೇಳುವ ಶಕ್ತಿಯೇ ಕಾಲಜ್ಞಾನವಾಗಿದೆ. ಇಂತಹ ಕಾಲಜ್ಞಾನವನ್ನು ಶ್ರೀ ಯೋಗಿ ನಾರಾಯಣ ಯತೀಂದ್ರರು ಅನೇಕ ಬಾರಿ ಪ್ರಸ್ತಾಪಿಸಿದ್ದಾರೆ ಎಂದರು.

ಪ್ರಗತಿಯ ಉತ್ತುಂಗಕ್ಕೆ ಏರುವ ಬರದಲ್ಲಿ ಜ್ಞಾನ ಮತ್ತು ತಂತ್ರಜ್ಞಾನದ ಹಿಂದೆ ಬಿದ್ದಿರುವ ಮಾನವ ಜನಾಂಗ ತನ್ನ ಉಳಿವಿಗೆ ಕಾರಣವಾದ ಪ್ರಕೃತಿಯ ಒಡನಾಟವನ್ನೇ ಮರೆತಿದ್ದಾನೆ. ಇದರ ಪರಿಣಾಮವನ್ನು ಮತ್ತು ಮುಂದಿನ ಹಾಗೂ ಹೋಗುಗಳನ್ನು ಜಗತ್ತಿನಲ್ಲಿ ಅನೇಕರು ಭವಿಷ್ಯ ವಾಣಿ ರೂಪದಲ್ಲಿ ಈಗಾಗಲೇ ಮಂಡಿಸಿದ್ದಾರೆ.

ಯುರೋಪ್ ,ಅಮೆರಿಕ, ಜಪಾನ್ ರಾಷ್ಟ್ರಗಳಲ್ಲಿ ಜನ ಇಂತಹ ಮಹನೀಯರನ್ನು ಮತ್ತೆ ಮತ್ತೆ ನೆನೆಯುತ್ತಾರೆ ಮತ್ತು ಪೂಜಿಸುತ್ತಾರೆ. ಆದರೆ ಭರತ ಖಂಡದಲ್ಲಿ ಅವೆಲ್ಲಕ್ಕಿಂತ ಹೆಚ್ಚಿನ ಭವಿಷ್ಯ ವಾಣಿಗಳಿವೆ. ಅನಾದಿ ಕಾಲದಿಂದಲೂ ಕಾಲಕಾಲಕ್ಕೆ ಈ ದೇಶದಲ್ಲಿ ಹಲವಾರು ಮಹಾತ್ಮರು ಮನುಜ ಕುಲದ ಹಾಗೂ ಹೋಗುಗಳ ಬಗ್ಗೆ ಮುನ್ಸೂಚನೆ ನೀಡಿದ್ದಾರೆ. ಇವರುಗಳಲ್ಲಿ ಕರ್ನಾಟಕದ ಶ್ರೀ ಯೋಗಿ ನಾರಾಯಣ ಯತೀಂದ್ರರು ಬಹಳ ಪ್ರಮುಖರು ಎಂದು ತಿಳಿಸಿದರು.

ಸಂಘದ ಅಧ್ಯಕ್ಷ ಎಂ ನಾರಾಯಣ್ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಎಂ ಆರ್ ಗೋಪಾಲಕೃಷ್ಣ , ಖಜಾಂಚಿ ಪಾಂಡುವಪುರ ಕೆ ಚಂದ್ರಶೇಖರ್, ನಿರ್ದೇಶಕರಾದ ಬಿ.ಕೆ. ಸುರೇಶ್, ಹೇಮಂತ ಕುಮಾರ್ ,ಚನ್ನಕೇಶವ , ಪಾರ್ಥ ಸಾರಥಿ, ಎಚ್.ಆರ್ .ವೆಂಕಟೇಶ್, ನಿಲಯ ಪಾಲಕ ರಘು ಶೆಟ್ಟಿ ಮುಂತಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

 

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

7 mins ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

2 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

8 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

14 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

14 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

14 hours ago