ನಂಜನಗೂಡು : ತಾಲ್ಲೂಕಿನ ಕಳಲೆ ಗ್ರಾಮದ ಲಕ್ಷ್ಮೀಕಾಂತಸ್ವಾಮಿ ರಥೋತ್ಸವ ಶನಿವಾರ ಅಪಾರ ಸಂಖ್ಯೆಯ ಭಕ್ತರ ಸಮ್ಮಖದಲ್ಲಿ ವಿಜೃಂಭಣೆಯಿಂದ ಜರುಗಿತು.
ಬೆಳಿಗ್ಗೆ ಲಕ್ಷ್ಮೀಕಾಂತಸ್ವಾಮಿಗೆ ದೇವಾಲಯದ ಪ್ರಧಾನ ಅರ್ಚಕ ಎಚ್.ಡಿ.ವಿನಯ್ ಆಚಾರ್ಯ ನೇತೃತ್ವದಲ್ಲಿ ಅವಭೃತ ತೀರ್ಥಸ್ನಾನದ ನಂತರ ಚೂರ್ಣಾಭಿಷೇಕ ಹಾಗೂ ವಿವಿಧ ಪೂಜಾ ವಿಧಿವಿಧಾನಗಳನ್ನು ನಡೆಸಲಾಯಿತು. ನಂತರ ಋತ್ವಿಕರು ಉತ್ಸವ ಮೂರ್ತಿಗೆ ಚಿನ್ನದ ಒಡವೆಗಳಿಂದ ಅಲಂಕರಿಸಿ ಪಲ್ಲಕ್ಕಿಯಲ್ಲಿ ಇರಿಸಿ ದೇವಾಲಯದ ಮುಂಭಾಗ ಹೊತ್ತು ತಂದರು.
ರಥವನ್ನು ವಿವಿಧ ಬಗೆಯ ಹೂವು, ತಳಿರು ತೋರಣ, ಬಣ್ಣ-ಬಣ್ಣದ ಒಟ್ಟೆಗಳಿಂದ ಅಲಂಕರಿಸಲಾಗಿತ್ತು. ಸ್ವಾಮಿಯ ಉತ್ಸವಮೂರ್ತಿಯನ್ನು ರಥದಲ್ಲಿ ಕೂರಿಸಲಾಯಿತು.
ನಂತರ ಭಕ್ತರು ‘ಶ್ರೀನಿವಾಸ’, ‘ಗೋವಿಂದ’ ಎಂಬ ನಾಮಸ್ಮರಣೆಯೊಂದಿಗೆ ರಥವನ್ನು ಎಳೆದರು. ದೇವರಿಗೆ ಹಣ್ಣು-ಧವನ ಅರ್ಪಿಸಿ ಭಕ್ತಿಭಾವ ಮೆರೆದರು.
ಗ್ರಾಮದ ಪ್ರಮುಖ ಬೀದಿಗಳಲ್ಲಿ ರಥೋತ್ಸವ ನಡೆಯಿತು. ಭಕ್ತರಿಗೆ ಭೋಜನದ ವ್ಯವಸ್ಥೆ ಕಲ್ಪಿಸಲಾಗಿತ್ತು.
ದೇವಾಲಯದ ಪಾರುಪತ್ತೇದಾರ ಎಚ್.ಎಸ್.ಜಯರಾಮ್, ಅರ್ಚಕ ರಂಗರಾಜನ್ ಉಸ್ತುವಾರಿಯಲ್ಲಿ ರಥೋತ್ಸವ ನಡೆಯಿತು.
ವಾಷಿಂಗ್ಟನ್ : ಹೊರ್ಮುಜ್ ಜಲಸಂಧಿಯನ್ನು ಸಂಚಾರಕ್ಕೆ ಮುಕ್ತಗೊಳಿಸದಿದ್ದರೆ ಇರಾನ್ನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳ ಮೇಲೆ ದಾಳಿ ನಡೆಸುವುದಾಗಿ ಅಮೆರಿಕದ…
ಬೆಂಗಳೂರು : ಕೊಡಗು ಜಿಲ್ಲೆಯ ತಡಿಯಾಂಡಮೋಳ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಏಪ್ರಿಲ್ 2 ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ…
ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ…
ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…
ದಾವಣಗೆರೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ…