ನಂಜನಗೂಡು : ತಾಲ್ಲೂಕಿನ ಕಳಲೆ ಗ್ರಾಮದ ಲಕ್ಷ್ಮೀಕಾಂತಸ್ವಾಮಿ ರಥೋತ್ಸವ ಶನಿವಾರ ಅಪಾರ ಸಂಖ್ಯೆಯ ಭಕ್ತರ ಸಮ್ಮಖದಲ್ಲಿ ವಿಜೃಂಭಣೆಯಿಂದ ಜರುಗಿತು.
ಬೆಳಿಗ್ಗೆ ಲಕ್ಷ್ಮೀಕಾಂತಸ್ವಾಮಿಗೆ ದೇವಾಲಯದ ಪ್ರಧಾನ ಅರ್ಚಕ ಎಚ್.ಡಿ.ವಿನಯ್ ಆಚಾರ್ಯ ನೇತೃತ್ವದಲ್ಲಿ ಅವಭೃತ ತೀರ್ಥಸ್ನಾನದ ನಂತರ ಚೂರ್ಣಾಭಿಷೇಕ ಹಾಗೂ ವಿವಿಧ ಪೂಜಾ ವಿಧಿವಿಧಾನಗಳನ್ನು ನಡೆಸಲಾಯಿತು. ನಂತರ ಋತ್ವಿಕರು ಉತ್ಸವ ಮೂರ್ತಿಗೆ ಚಿನ್ನದ ಒಡವೆಗಳಿಂದ ಅಲಂಕರಿಸಿ ಪಲ್ಲಕ್ಕಿಯಲ್ಲಿ ಇರಿಸಿ ದೇವಾಲಯದ ಮುಂಭಾಗ ಹೊತ್ತು ತಂದರು.
ರಥವನ್ನು ವಿವಿಧ ಬಗೆಯ ಹೂವು, ತಳಿರು ತೋರಣ, ಬಣ್ಣ-ಬಣ್ಣದ ಒಟ್ಟೆಗಳಿಂದ ಅಲಂಕರಿಸಲಾಗಿತ್ತು. ಸ್ವಾಮಿಯ ಉತ್ಸವಮೂರ್ತಿಯನ್ನು ರಥದಲ್ಲಿ ಕೂರಿಸಲಾಯಿತು.
ನಂತರ ಭಕ್ತರು ‘ಶ್ರೀನಿವಾಸ’, ‘ಗೋವಿಂದ’ ಎಂಬ ನಾಮಸ್ಮರಣೆಯೊಂದಿಗೆ ರಥವನ್ನು ಎಳೆದರು. ದೇವರಿಗೆ ಹಣ್ಣು-ಧವನ ಅರ್ಪಿಸಿ ಭಕ್ತಿಭಾವ ಮೆರೆದರು.
ಗ್ರಾಮದ ಪ್ರಮುಖ ಬೀದಿಗಳಲ್ಲಿ ರಥೋತ್ಸವ ನಡೆಯಿತು. ಭಕ್ತರಿಗೆ ಭೋಜನದ ವ್ಯವಸ್ಥೆ ಕಲ್ಪಿಸಲಾಗಿತ್ತು.
ದೇವಾಲಯದ ಪಾರುಪತ್ತೇದಾರ ಎಚ್.ಎಸ್.ಜಯರಾಮ್, ಅರ್ಚಕ ರಂಗರಾಜನ್ ಉಸ್ತುವಾರಿಯಲ್ಲಿ ರಥೋತ್ಸವ ನಡೆಯಿತು.
ಮೈಸೂರು: ದೇಶ-ವಿದೇಶಗಳಲ್ಲಿ ಜನ ಸಮೂಹವನ್ನು ಹೊಂದಿರುವ ಅವಧೂತ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ನೂತನ ಶಾಖೆಯನ್ನು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ…
ಕುಲಪತಿ ಲೋಕನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಿಂಡಿಕೇಟ್ ಸಭೆಯಲ್ಲಿ ತೀರ್ಮಾನ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ೧೦೬ನೇ ಘಟಿಕೋತ್ಸವವನ್ನು ಜ.೫ರಂದುನಡೆಸಲು ತೀರ್ಮಾನಿಸಲಾಗಿದ್ದು, ಘಟಿಕೋತ್ಸವ…
ಲಕ್ಷ್ಮೀಕಾಂತ್ ಕೊಮಾರಪ್ಪ ಶೀತಗಾಳಿಯಿಂದ ಪಾರಾಗಲು ಬೆಚ್ಚನೆಯ ಬಟ್ಟೆ, ಹೊದಿಕೆ, ಬೆಂಕಿಯ ಮೊರೆ ಸೋಮವಾರಪೇಟೆ: ಶೀತಗಾಳಿಯಿಂದ ಚಳಿಯ ಪ್ರಮಾಣ ಹೆಚ್ಚಾಗಿದ್ದು, ಕಳೆದೆರಡು…
ಕೊಳ್ಳೇಗಾಲ: ಶಾಸಕರು ಮೊದಲಿದ್ದ ಡಾಂಬರು ರಸ್ತೆಯನ್ನು ಕಿತ್ತು ಕಾಂಕ್ರೀಟ್ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ಮುಂದಾದರೆ ಗುತ್ತಿಗೆದಾರ ನಡೆಸಿದ ಕಳಪೆಕಾಮಗಾರಿಯಿಂದ ಜಲ್ಲಿಕಲ್ಲುಗಳು ಮೇಲೆದ್ದು…
ಹನಗೋಡು ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಆತಂಕ; ಜಮೀನಿಗೆ ತೆರಳಲು ಹಿಂದೇಟು ವೀರನಹೊಸಹಳ್ಳಿ: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಹುಣಸೂರು ಬಫರ್…