ಮೈಸೂರು

ಕಳಲೆ ಲಕ್ಷ್ಮೀಕಾಂತಸ್ವಾಮಿ ಜಾತ್ರೆ ಸಂಭ್ರಮ

ನಂಜನಗೂಡು : ತಾಲ್ಲೂಕಿನ ಕಳಲೆ ಗ್ರಾಮದ ಲಕ್ಷ್ಮೀಕಾಂತಸ್ವಾಮಿ ರಥೋತ್ಸವ ಶನಿವಾರ ಅಪಾರ ಸಂಖ್ಯೆಯ ಭಕ್ತರ ಸಮ್ಮಖದಲ್ಲಿ ವಿಜೃಂಭಣೆಯಿಂದ ಜರುಗಿತು.
ಬೆಳಿಗ್ಗೆ ಲಕ್ಷ್ಮೀಕಾಂತಸ್ವಾಮಿಗೆ ದೇವಾಲಯದ ಪ್ರಧಾನ ಅರ್ಚಕ ಎಚ್.ಡಿ.ವಿನಯ್‌ ಆಚಾರ್ಯ ನೇತೃತ್ವದಲ್ಲಿ ಅವಭೃತ ತೀರ್ಥಸ್ನಾನದ ನಂತರ ಚೂರ್ಣಾಭಿಷೇಕ ಹಾಗೂ ವಿವಿಧ ಪೂಜಾ ವಿಧಿವಿಧಾನಗಳನ್ನು ನಡೆಸಲಾಯಿತು. ನಂತರ ಋತ್ವಿಕರು ಉತ್ಸವ ಮೂರ್ತಿಗೆ ಚಿನ್ನದ ಒಡವೆಗಳಿಂದ ಅಲಂಕರಿಸಿ ಪಲ್ಲಕ್ಕಿಯಲ್ಲಿ ಇರಿಸಿ ದೇವಾಲಯದ ಮುಂಭಾಗ ಹೊತ್ತು ತಂದರು.

ರಥವನ್ನು ವಿವಿಧ ಬಗೆಯ ಹೂವು, ತಳಿರು ತೋರಣ, ಬಣ್ಣ-ಬಣ್ಣದ ಒಟ್ಟೆಗಳಿಂದ ಅಲಂಕರಿಸಲಾಗಿತ್ತು. ಸ್ವಾಮಿಯ ಉತ್ಸವಮೂರ್ತಿಯನ್ನು ರಥದಲ್ಲಿ ಕೂರಿಸಲಾಯಿತು.
ನಂತರ ಭಕ್ತರು ‘ಶ್ರೀನಿವಾಸ’, ‘ಗೋವಿಂದ’ ಎಂಬ ನಾಮಸ್ಮರಣೆಯೊಂದಿಗೆ ರಥವನ್ನು ಎಳೆದರು. ದೇವರಿಗೆ ಹಣ್ಣು-ಧವನ ಅರ್ಪಿಸಿ ಭಕ್ತಿಭಾವ ಮೆರೆದರು.

ಗ್ರಾಮದ ಪ್ರಮುಖ ಬೀದಿಗಳಲ್ಲಿ ರಥೋತ್ಸವ ನಡೆಯಿತು. ಭಕ್ತರಿಗೆ ಭೋಜನದ ವ್ಯವಸ್ಥೆ ಕಲ್ಪಿಸಲಾಗಿತ್ತು.

ದೇವಾಲಯದ ಪಾರುಪತ್ತೇದಾರ ಎಚ್.ಎಸ್.ಜಯರಾಮ್‌, ಅರ್ಚಕ ರಂಗರಾಜನ್‌ ಉಸ್ತುವಾರಿಯಲ್ಲಿ ರಥೋತ್ಸವ ನಡೆಯಿತು.

lokesh

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

2 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

2 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

2 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ಉಡುಪು ಯಾಕೆ ಬದಲಾಯಿತು?

  ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…

2 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಸಜ್ಜನನಾದ ಆಂಗ್ಲನಾಗುವ ಪ್ರಯತ್ನ

ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್‌ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…

2 hours ago

ಎರಡನೇ ಆಷಾಢ ಶುಕ್ರವಾರದ ಸಂಭ್ರಮ: ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ತಾಯಿ ಚಾಮುಂಡೇಶ್ವರಿ

ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.…

23 hours ago