ನಂಜನಗೂಡು : ತಾಲ್ಲೂಕಿನ ಕಳಲೆ ಗ್ರಾಮದ ಲಕ್ಷ್ಮೀಕಾಂತಸ್ವಾಮಿ ರಥೋತ್ಸವ ಶನಿವಾರ ಅಪಾರ ಸಂಖ್ಯೆಯ ಭಕ್ತರ ಸಮ್ಮಖದಲ್ಲಿ ವಿಜೃಂಭಣೆಯಿಂದ ಜರುಗಿತು.
ಬೆಳಿಗ್ಗೆ ಲಕ್ಷ್ಮೀಕಾಂತಸ್ವಾಮಿಗೆ ದೇವಾಲಯದ ಪ್ರಧಾನ ಅರ್ಚಕ ಎಚ್.ಡಿ.ವಿನಯ್ ಆಚಾರ್ಯ ನೇತೃತ್ವದಲ್ಲಿ ಅವಭೃತ ತೀರ್ಥಸ್ನಾನದ ನಂತರ ಚೂರ್ಣಾಭಿಷೇಕ ಹಾಗೂ ವಿವಿಧ ಪೂಜಾ ವಿಧಿವಿಧಾನಗಳನ್ನು ನಡೆಸಲಾಯಿತು. ನಂತರ ಋತ್ವಿಕರು ಉತ್ಸವ ಮೂರ್ತಿಗೆ ಚಿನ್ನದ ಒಡವೆಗಳಿಂದ ಅಲಂಕರಿಸಿ ಪಲ್ಲಕ್ಕಿಯಲ್ಲಿ ಇರಿಸಿ ದೇವಾಲಯದ ಮುಂಭಾಗ ಹೊತ್ತು ತಂದರು.
ರಥವನ್ನು ವಿವಿಧ ಬಗೆಯ ಹೂವು, ತಳಿರು ತೋರಣ, ಬಣ್ಣ-ಬಣ್ಣದ ಒಟ್ಟೆಗಳಿಂದ ಅಲಂಕರಿಸಲಾಗಿತ್ತು. ಸ್ವಾಮಿಯ ಉತ್ಸವಮೂರ್ತಿಯನ್ನು ರಥದಲ್ಲಿ ಕೂರಿಸಲಾಯಿತು.
ನಂತರ ಭಕ್ತರು ‘ಶ್ರೀನಿವಾಸ’, ‘ಗೋವಿಂದ’ ಎಂಬ ನಾಮಸ್ಮರಣೆಯೊಂದಿಗೆ ರಥವನ್ನು ಎಳೆದರು. ದೇವರಿಗೆ ಹಣ್ಣು-ಧವನ ಅರ್ಪಿಸಿ ಭಕ್ತಿಭಾವ ಮೆರೆದರು.
ಗ್ರಾಮದ ಪ್ರಮುಖ ಬೀದಿಗಳಲ್ಲಿ ರಥೋತ್ಸವ ನಡೆಯಿತು. ಭಕ್ತರಿಗೆ ಭೋಜನದ ವ್ಯವಸ್ಥೆ ಕಲ್ಪಿಸಲಾಗಿತ್ತು.
ದೇವಾಲಯದ ಪಾರುಪತ್ತೇದಾರ ಎಚ್.ಎಸ್.ಜಯರಾಮ್, ಅರ್ಚಕ ರಂಗರಾಜನ್ ಉಸ್ತುವಾರಿಯಲ್ಲಿ ರಥೋತ್ಸವ ನಡೆಯಿತು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…