ಮೈಸೂರು: ಭಾರತೀಯ ಸಂಸ್ಕೃತಿ ಮತ್ತು ಕಲೆಯಲ್ಲಿ ಜೀವಮಾನ ಸಾಧನೆಗಾಗಿ ಮಧ್ಯಪ್ರದೇಶ ಸರ್ಕಾರದಿಂದ ಪ್ರತಿ ವರ್ಷ ಕೊಡಮಾಡುವ ʼಕಾಳಿದಾಸ ಸಮ್ಮಾನ್ʼ ಪ್ರಶಸ್ತಿಗೆ ಈ ಬಾರಿ ಮೈಸೂರಿನ ಗಂಜೀಫಾ ರಘುಪತಿ ಭಟ್ಟ ಅವರು ಭಾಜನರಾಗಿದ್ದಾರೆ.
ಈ ಪ್ರಶಸ್ತಿ ಪ್ರಧಾನ ಸಮಾರಂಭವೂ ನವೆಂಬರ್ 12 ರಂದು ಉಜ್ಜಯಿನಿಯಲ್ಲಿ ನಡೆಯಲಿದೆ. ಪ್ರಶಸ್ತಿಯು ಐದು ಲಕ್ಷ ರೂ. ನಗದು ಬಹುಮಾನ, ಶಾಲು ಹಾಗೂ ಶ್ರೀಫಲಕವನ್ನು ನೀಡಿ ಗೌರವಿಸಲಾಗುತ್ತದೆ.
ರಘುಪತಿ ಭಟ್ಟ ಅವರ ಹಿನ್ನೆಲೆ
ರಘುಪತಿ ಭಟ್ಟ ಅವರು 1957 ರಲ್ಲಿ ದಕ್ಷಿಣ ಕನ್ನಡದಲ್ಲಿ ಜನಿಸಿದರು. ಭಾರತೀಯ ಶಾಸ್ತ್ರೀಯ ಚಿತ್ರಕಲೆಯಲ್ಲಿ 50 ವರ್ಷದಿಂದ ತೊಡಗಿಸಿಕೊಂಡಿದ್ದಾರೆ. ಭಟ್ಟ ಅವರು ಮೈಸೂರಿನ ಲಕ್ಷಣ ಶಾಸ್ತ್ರದ ಅನ್ವಯ ಚಿತ್ರ ರಚಿಸುವಲ್ಲಿ ಪರಿಣಿತರಾಗಿದ್ದಾರೆ. ಅಲ್ಲದೇ, ಗಂಜೀಫಾ ಚಿತ್ರಕಲೆ ಹಾಗೂ ಕರಾವಳಿ ಭಾಗದ ಕಾವಿ ಕಲೆಯೂ ಅಳಿವಿನಂಚಿನಲ್ಲಿದ್ದಾಗ ಈ ಕಲೆಗಳನ್ನು ಪುನರುಜ್ಜೀವನಗೊಳಿಸುವ ಮೂಲಕ ಇನ್ನಷ್ಟು ಹೆಚ್ಚು ಪ್ರಸಿದ್ಧಿಯನ್ನು ಪಡೆದರು. ಭಟ್ಟರು ಕಾವಿ ಚಿತ್ರಕಲೆಯ ರಚನಾ ವಿಧಾನ ಕೃತಿಯನ್ನು ರಚಿಸಿದ್ದು, ಈ ಚಿತ್ರಕಲೆ ದೇಶ ವಿದೇಶಗಳಲ್ಲಿ ಪ್ರದರ್ಶನ ಕಂಡಿದೆ.
ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…
ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…
ಸಿದ್ದಾಪುರ : ಎರಡು ಬೈಕ್ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…
ಹೊಸದಿಲ್ಲಿ : ಎಲ್ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…
ಟೆಹ್ರಾನ್ : ಇರಾನ್ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…