ಮೈಸೂರು

ಗಂಜೀಫಾ ಭಟ್ಟರಿಗೆ ʼಕಾಳಿದಾಸ ಸಮ್ಮಾನ್‌’ ಪ್ರಶಸ್ತಿ

ಮೈಸೂರು:  ಭಾರತೀಯ ಸಂಸ್ಕೃತಿ ಮತ್ತು ಕಲೆಯಲ್ಲಿ ಜೀವಮಾನ ಸಾಧನೆಗಾಗಿ ಮಧ್ಯಪ್ರದೇಶ ಸರ್ಕಾರದಿಂದ  ಪ್ರತಿ ವರ್ಷ ಕೊಡಮಾಡುವ ʼಕಾಳಿದಾಸ ಸಮ್ಮಾನ್‌ʼ ಪ್ರಶಸ್ತಿಗೆ ಈ ಬಾರಿ ಮೈಸೂರಿನ ಗಂಜೀಫಾ ರಘುಪತಿ ಭಟ್ಟ ಅವರು ಭಾಜನರಾಗಿದ್ದಾರೆ.

ಈ ಪ್ರಶಸ್ತಿ ಪ್ರಧಾನ ಸಮಾರಂಭವೂ ನವೆಂಬರ್‌ 12 ರಂದು ಉಜ್ಜಯಿನಿಯಲ್ಲಿ ನಡೆಯಲಿದೆ. ಪ್ರಶಸ್ತಿಯು  ಐದು ಲಕ್ಷ ರೂ. ನಗದು ಬಹುಮಾನ, ಶಾಲು ಹಾಗೂ ಶ್ರೀಫಲಕವನ್ನು ನೀಡಿ ಗೌರವಿಸಲಾಗುತ್ತದೆ.

ರಘುಪತಿ ಭಟ್ಟ ಅವರ ಹಿನ್ನೆಲೆ
ರಘುಪತಿ ಭಟ್ಟ ಅವರು 1957 ರಲ್ಲಿ ದಕ್ಷಿಣ ಕನ್ನಡದಲ್ಲಿ ಜನಿಸಿದರು. ಭಾರತೀಯ ಶಾಸ್ತ್ರೀಯ ಚಿತ್ರಕಲೆಯಲ್ಲಿ 50 ವರ್ಷದಿಂದ ತೊಡಗಿಸಿಕೊಂಡಿದ್ದಾರೆ. ಭಟ್ಟ ಅವರು ಮೈಸೂರಿನ ಲಕ್ಷಣ ಶಾಸ್ತ್ರದ ಅನ್ವಯ ಚಿತ್ರ ರಚಿಸುವಲ್ಲಿ ಪರಿಣಿತರಾಗಿದ್ದಾರೆ. ಅಲ್ಲದೇ, ಗಂಜೀಫಾ ಚಿತ್ರಕಲೆ ಹಾಗೂ ಕರಾವಳಿ ಭಾಗದ ಕಾವಿ ಕಲೆಯೂ ಅಳಿವಿನಂಚಿನಲ್ಲಿದ್ದಾಗ ಈ ಕಲೆಗಳನ್ನು ಪುನರುಜ್ಜೀವನಗೊಳಿಸುವ ಮೂಲಕ ಇನ್ನಷ್ಟು ಹೆಚ್ಚು ಪ್ರಸಿದ್ಧಿಯನ್ನು ಪಡೆದರು. ಭಟ್ಟರು ಕಾವಿ ಚಿತ್ರಕಲೆಯ ರಚನಾ ವಿಧಾನ ಕೃತಿಯನ್ನು ರಚಿಸಿದ್ದು, ಈ ಚಿತ್ರಕಲೆ ದೇಶ ವಿದೇಶಗಳಲ್ಲಿ ಪ್ರದರ್ಶನ ಕಂಡಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…

1 hour ago

ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯರಿ : ರೈತರಿಗೆ ಸಿಎಂ ಕರೆ

ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…

2 hours ago

ಟಿ-20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ :ಸೂರ್ಯಕುಮಾರ್ ಯಾದವ್ ನಾಯಕ

ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್‌ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…

2 hours ago

ಮೊಟ್ಟೆ ಕ್ಯಾನ್ಸರ್‌ ಕಾರಕವಲ್ಲ : ಕೇಂದ್ರ ವರದಿ

ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…

2 hours ago

‘ಅಂತರ್ಜಲ ಹೆಚ್ಚಳಕ್ಕೆ ಆದ್ಯತೆ ನೀಡಿ’ : ಶಿವಶಂಕರ್ ಸೂಚನೆ

ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…

2 hours ago

ಮೈಸೂರು | ನಾಳೆಯಿಂದ ಅರಮನೆ ಅಂಗಳದಲ್ಲಿ ಫಲಪುಷ್ಪ ಪ್ರದರ್ಶನ

ಮೈಸೂರು : ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…

2 hours ago