ಮೈಸೂರು: ಭಾರತೀಯ ಸಂಸ್ಕೃತಿ ಮತ್ತು ಕಲೆಯಲ್ಲಿ ಜೀವಮಾನ ಸಾಧನೆಗಾಗಿ ಮಧ್ಯಪ್ರದೇಶ ಸರ್ಕಾರದಿಂದ ಪ್ರತಿ ವರ್ಷ ಕೊಡಮಾಡುವ ʼಕಾಳಿದಾಸ ಸಮ್ಮಾನ್ʼ ಪ್ರಶಸ್ತಿಗೆ ಈ ಬಾರಿ ಮೈಸೂರಿನ ಗಂಜೀಫಾ ರಘುಪತಿ ಭಟ್ಟ ಅವರು ಭಾಜನರಾಗಿದ್ದಾರೆ.
ಈ ಪ್ರಶಸ್ತಿ ಪ್ರಧಾನ ಸಮಾರಂಭವೂ ನವೆಂಬರ್ 12 ರಂದು ಉಜ್ಜಯಿನಿಯಲ್ಲಿ ನಡೆಯಲಿದೆ. ಪ್ರಶಸ್ತಿಯು ಐದು ಲಕ್ಷ ರೂ. ನಗದು ಬಹುಮಾನ, ಶಾಲು ಹಾಗೂ ಶ್ರೀಫಲಕವನ್ನು ನೀಡಿ ಗೌರವಿಸಲಾಗುತ್ತದೆ.
ರಘುಪತಿ ಭಟ್ಟ ಅವರ ಹಿನ್ನೆಲೆ
ರಘುಪತಿ ಭಟ್ಟ ಅವರು 1957 ರಲ್ಲಿ ದಕ್ಷಿಣ ಕನ್ನಡದಲ್ಲಿ ಜನಿಸಿದರು. ಭಾರತೀಯ ಶಾಸ್ತ್ರೀಯ ಚಿತ್ರಕಲೆಯಲ್ಲಿ 50 ವರ್ಷದಿಂದ ತೊಡಗಿಸಿಕೊಂಡಿದ್ದಾರೆ. ಭಟ್ಟ ಅವರು ಮೈಸೂರಿನ ಲಕ್ಷಣ ಶಾಸ್ತ್ರದ ಅನ್ವಯ ಚಿತ್ರ ರಚಿಸುವಲ್ಲಿ ಪರಿಣಿತರಾಗಿದ್ದಾರೆ. ಅಲ್ಲದೇ, ಗಂಜೀಫಾ ಚಿತ್ರಕಲೆ ಹಾಗೂ ಕರಾವಳಿ ಭಾಗದ ಕಾವಿ ಕಲೆಯೂ ಅಳಿವಿನಂಚಿನಲ್ಲಿದ್ದಾಗ ಈ ಕಲೆಗಳನ್ನು ಪುನರುಜ್ಜೀವನಗೊಳಿಸುವ ಮೂಲಕ ಇನ್ನಷ್ಟು ಹೆಚ್ಚು ಪ್ರಸಿದ್ಧಿಯನ್ನು ಪಡೆದರು. ಭಟ್ಟರು ಕಾವಿ ಚಿತ್ರಕಲೆಯ ರಚನಾ ವಿಧಾನ ಕೃತಿಯನ್ನು ರಚಿಸಿದ್ದು, ಈ ಚಿತ್ರಕಲೆ ದೇಶ ವಿದೇಶಗಳಲ್ಲಿ ಪ್ರದರ್ಶನ ಕಂಡಿದೆ.
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…
ನಗರ ಪ್ರದೇಶಗಳ ಹೋಟೆಲ್ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…
ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…
ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…
ಪಂಜು ಗಂಗೊಳ್ಳಿ ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…