ಮೈಸೂರು: ಭಾರತೀಯ ಸಂಸ್ಕೃತಿ ಮತ್ತು ಕಲೆಯಲ್ಲಿ ಜೀವಮಾನ ಸಾಧನೆಗಾಗಿ ಮಧ್ಯಪ್ರದೇಶ ಸರ್ಕಾರದಿಂದ ಪ್ರತಿ ವರ್ಷ ಕೊಡಮಾಡುವ ʼಕಾಳಿದಾಸ ಸಮ್ಮಾನ್ʼ ಪ್ರಶಸ್ತಿಗೆ ಈ ಬಾರಿ ಮೈಸೂರಿನ ಗಂಜೀಫಾ ರಘುಪತಿ ಭಟ್ಟ ಅವರು ಭಾಜನರಾಗಿದ್ದಾರೆ.
ಈ ಪ್ರಶಸ್ತಿ ಪ್ರಧಾನ ಸಮಾರಂಭವೂ ನವೆಂಬರ್ 12 ರಂದು ಉಜ್ಜಯಿನಿಯಲ್ಲಿ ನಡೆಯಲಿದೆ. ಪ್ರಶಸ್ತಿಯು ಐದು ಲಕ್ಷ ರೂ. ನಗದು ಬಹುಮಾನ, ಶಾಲು ಹಾಗೂ ಶ್ರೀಫಲಕವನ್ನು ನೀಡಿ ಗೌರವಿಸಲಾಗುತ್ತದೆ.
ರಘುಪತಿ ಭಟ್ಟ ಅವರ ಹಿನ್ನೆಲೆ
ರಘುಪತಿ ಭಟ್ಟ ಅವರು 1957 ರಲ್ಲಿ ದಕ್ಷಿಣ ಕನ್ನಡದಲ್ಲಿ ಜನಿಸಿದರು. ಭಾರತೀಯ ಶಾಸ್ತ್ರೀಯ ಚಿತ್ರಕಲೆಯಲ್ಲಿ 50 ವರ್ಷದಿಂದ ತೊಡಗಿಸಿಕೊಂಡಿದ್ದಾರೆ. ಭಟ್ಟ ಅವರು ಮೈಸೂರಿನ ಲಕ್ಷಣ ಶಾಸ್ತ್ರದ ಅನ್ವಯ ಚಿತ್ರ ರಚಿಸುವಲ್ಲಿ ಪರಿಣಿತರಾಗಿದ್ದಾರೆ. ಅಲ್ಲದೇ, ಗಂಜೀಫಾ ಚಿತ್ರಕಲೆ ಹಾಗೂ ಕರಾವಳಿ ಭಾಗದ ಕಾವಿ ಕಲೆಯೂ ಅಳಿವಿನಂಚಿನಲ್ಲಿದ್ದಾಗ ಈ ಕಲೆಗಳನ್ನು ಪುನರುಜ್ಜೀವನಗೊಳಿಸುವ ಮೂಲಕ ಇನ್ನಷ್ಟು ಹೆಚ್ಚು ಪ್ರಸಿದ್ಧಿಯನ್ನು ಪಡೆದರು. ಭಟ್ಟರು ಕಾವಿ ಚಿತ್ರಕಲೆಯ ರಚನಾ ವಿಧಾನ ಕೃತಿಯನ್ನು ರಚಿಸಿದ್ದು, ಈ ಚಿತ್ರಕಲೆ ದೇಶ ವಿದೇಶಗಳಲ್ಲಿ ಪ್ರದರ್ಶನ ಕಂಡಿದೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…