ಮೈಸೂರು: ಕಲ್ಯಾಣ್ ಜ್ಯುವೆಲ್ಲರ್ಸ್ ಮೈಸೂರಿನಲ್ಲಿ ತನ್ನ 2ನೇ ಹೊಸ ಶೋರೂಮ್ ಅನ್ನು ಪ್ರಾರಂಭಿಸಿದ್ದು, ಈ ಸೊಗಸಾದ ವಿನ್ಯಾಸದ ಶೋರೂಮ್ ಅನ್ನು ಬಾಲಿವುಡ್ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಕುಂದ್ರಾ ಉದ್ಘಾಟಿಸಿದರು.
ಈ ಶೋರೂಮ್ನಲ್ಲಿ ಕಲ್ಯಾಣ್ ಜ್ಯುವೆಲ್ಲರ್ಸ್ ಬ್ರ್ಯಾಂಡ್ನ ವಿವಿಧ ಸಂಗ್ರಹಗಳ ವ್ಯಾಪಕ ಶ್ರೇಣಿಯ ಡಿಸೈನ್ಗಳು ಲಭ್ಯವಿವೆ. ಉದ್ಘಾಟನಾ ಕಾರ್ಯಕ್ರಮವು ಅದ್ಧೂರಿಯಾಗಿ ನಡೆದಿದ್ದು, ಬಾಲಿವುಡ್ ತಾರೆಯನ್ನು ನೋಡಲು, ಈ ಸಂದರ್ಭದಲ್ಲಿ ಭಾಗಿಯಾಗಲು ಅಭಿಮಾನಿಗಳು ಮತ್ತು ಗ್ರಾಹಕರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಮಳಿಗೆ ಉದ್ಘಾಟಿಸಿ ಶಿಲ್ಪಾ ಶೆಟ್ಟಿ ಅವರು ತುಳುವಿನಲ್ಲಿ ಮಾತು ಆರಂಭಿಸಿದ ಅವರು, ಕನ್ನಡದಲ್ಲಿ ಎಲ್ಲರೂ ಚೆನ್ನಾಗಿದ್ದಿರ ಎಂದು ಪ್ರಶ್ನಿಸಿದರು. ನಾನು ಕರ್ನಾಟಕದ ಹುಡುಗಿ. ಮೈಸೂರಿಗೆ ತಂದರೆ ತವರು ಮನೆಗೆ ಬಂದಂತೆ ಭಾವ ಬರುತ್ತದೆ. ಇತ್ತೀಚೆಗೆ ಮೈಸೂರಿನಲ್ಲಿ ಕೆಡಿ ಚಿತ್ರೀಕರಣದಲ್ಲಿ ಭಾಗವಹಿಸಿದ್ದೆ ಎಂದು ಸಂತಸ ಹಂಚಿಕೊಂಡರು.
ವಿಶ್ವಾಸ, ಪಾರದರ್ಶಕತೆ ಮತ್ತು ಗ್ರಾಹಕ ಕೇಂದ್ರಿತ ಮೌಲ್ಯಗಳ ಕುರಿತು ಗಾಢ ನಂಬಿಕೆ ಹೊಂದಿರುವ ಕಲ್ಯಾಣ್ ಜ್ಯುವೆಲ್ಲರ್ಸ್ ಅನ್ನು ಪ್ರತಿನಿಧಿಸುವುದು ಒಂದು ಸೌಭಾಗ್ಯ ಎಂದು ನಾನು ಭಾವಿಸಿದ್ದೇನೆ. ಗ್ರಾಹಕರು ವೈವಿಧ್ಯಮಯ ಆಭರಣ ಸಂಗ್ರಹಗಳನ್ನು ಆನಂದಿಸುತ್ತಾರೆ ಎಂಬ ಭರವಸೆ ನನಗೆ ಇದೆ ಎಂದು ಹೇಳಿದರು.
ಕಲ್ಯಾಣ್ ಜ್ಯುವೆಲ್ಲರ್ಸ್ ಕಾರ್ಯನಿರ್ವಾಹಕ ನಿರ್ದೇಶಕ ರಮೇಶ್ ಕಲ್ಯಾಣರಾಮನ್ ಮಾತನಾಡಿ, ಗ್ರಾಹಕರು ಉದ್ಘಾಟನಾ ಕೊಡುಗೆಯ ಭಾಗವಾಗಿ ಮೇಕಿಂಗ್ ಚಾರ್ಜ್ ಮೇಲೆ -ಟ್ ಶೇ.50ರಷ್ಟು ರಿಯಾಯಿತಿ ಪಡೆಯಬಹುದು ಎಂದು ತಿಳಿಸಿದರು.
ಕಲ್ಯಾಣ್ ಜ್ಯುವೆಲ್ಲರ್ಸ್ನಲ್ಲಿ ಯಾವೆಲ್ಲಾ ವಿಶೇಷ ಆಭರಣಗಳು ಲಭ್ಯ?
ಈ ಹೊಸ ಶೋರೂಮ್ನಲ್ಲಿ ಕಲ್ಯಾಣ್ ಜ್ಯುವೆಲ್ಲರ್ಸ್ನ ಜನಪ್ರಿಯ ಹೋಮ್ ಬ್ರ್ಯಾಂಡ್ಗಳಾದ ಮುಹೂರ್ತ್(ವೆಡ್ಡಿಂಗ್ ಜ್ಯುವೆಲ್ಲರಿ ಲೈನ್), ಮುದ್ರಾ(ಕೈಯಿಂದ ಮಾಡಿದ ಆಂಟಿಕ್ ಆಭರಣ), ನಿಮಾಹ್(ಟೆಂಪಲ್ ಜ್ಯುವೆಲ್ಲರಿ), ಗ್ಲೋ(ಡ್ಯಾನ್ಸಿಂಗ್ ಡೈಮಂಡ್ಸ್), ಝಿಯಾಹ್(ಸಾಲಿಟೇರ್ ಲೈಕ್ ಡೈಮಂಡ್ ಜ್ಯುವೆಲ್ಲರಿ), ಅನೋಖಿ(ಅನ್ ಕಟ್ ಡೈಮಂಡ್ಸ್), ಅಪೂರ್ವ(ವಿಶೇಷ ಸಂದರ್ಭಗಳಿಗಾಗಿ ಸಿದ್ಧಗೊಳಿಸಿರುವ ಡೈಮಂಡ್ಸ್), ಅಂತರಾ(ವೆಡ್ಡಿಂಗ್ ಡೈಮಂಡ್ಸ್), ಹೇರಾ(ದೈನಂದಿನ ಧರಿಸುವ ಡೈಮಂಡ್ಸ್), ರಂಗ್(ಪ್ರೀಷಿಯಸ್ ಸ್ಟೋನ್ಸ್ ಜ್ಯುವೆಲ್ಲರಿ) ಮತ್ತು ಇತ್ತೀಚೆಗೆ ಪ್ರಾರಂಭಿಸಲಾದ ಲೀಲಾ (ಕಲರ್ಡ್ ಸ್ಟೋನ್ಸ್ ಮತ್ತು ಡೈಮಂಡ್ ಜ್ಯುವೆಲ್ಲರಿ) ಉತ್ಪನ್ನಗಳೂ ಲಭ್ಯವಿರುತ್ತವೆ.
ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಉಂಟಾಗಿರುವ ಎಲ್ಪಿಜಿ ಸಂಕಷ್ಟವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ತಕ್ಷಣವೇ ವಿದೇಶಾಂಗ…
ದಾವಣಗೆರೆ: ಕೊಡಗಿನ ತಡಿಯಾಂಡಮೋಳ್ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಹೆಚ್ಚುವರಿಯಾಗಿ 40 ಸಿಬ್ಬಂದಿಯ…
ಬೆಂಗಳೂರು: ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹಾವೇರಿ ವಿಶ್ವವಿದ್ಯಾನಿಲಯವು ನೀಡಲು ತೀರ್ಮಾನಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ ಮುಖ್ಯಮಂತ್ರಿ…
ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…
ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್ನಲ್ಲಿ ಕಾಣೆಯಾಗಿದ್ದ…
ಬೆಂಗಳೂರು: ಹಳೆಯ ವಾಹನಗಳಿಗೆ ಎಚ್ಎಸ್ಆರ್ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…