ಮೈಸೂರು

ಮೈಸೂರು | ಕಲ್ಯಾಣ್‌ ಜ್ಯೂವೆಲ್ಲರ್ಸ್‌ 2ನೇ ಶೋರೊಮ್‌ ಉದ್ಘಾಟಿಸಿದ ನಟಿ ಶಿಲ್ಪಾ ಶೆಟ್ಟಿ

ಮೈಸೂರು: ಕಲ್ಯಾಣ್ ಜ್ಯುವೆಲ್ಲರ್ಸ್ ಮೈಸೂರಿನಲ್ಲಿ ತನ್ನ 2ನೇ ಹೊಸ ಶೋರೂಮ್ ಅನ್ನು ಪ್ರಾರಂಭಿಸಿದ್ದು, ಈ ಸೊಗಸಾದ ವಿನ್ಯಾಸದ ಶೋರೂಮ್ ಅನ್ನು ಬಾಲಿವುಡ್ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಕುಂದ್ರಾ ಉದ್ಘಾಟಿಸಿದರು.

ಈ ಶೋರೂಮ್‌ನಲ್ಲಿ ಕಲ್ಯಾಣ್ ಜ್ಯುವೆಲ್ಲರ್ಸ್ ಬ್ರ್ಯಾಂಡ್‌ನ ವಿವಿಧ ಸಂಗ್ರಹಗಳ ವ್ಯಾಪಕ ಶ್ರೇಣಿಯ ಡಿಸೈನ್‌ಗಳು ಲಭ್ಯವಿವೆ. ಉದ್ಘಾಟನಾ ಕಾರ್ಯಕ್ರಮವು ಅದ್ಧೂರಿಯಾಗಿ ನಡೆದಿದ್ದು, ಬಾಲಿವುಡ್ ತಾರೆಯನ್ನು ನೋಡಲು, ಈ ಸಂದರ್ಭದಲ್ಲಿ ಭಾಗಿಯಾಗಲು ಅಭಿಮಾನಿಗಳು ಮತ್ತು ಗ್ರಾಹಕರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಮಳಿಗೆ ಉದ್ಘಾಟಿಸಿ ಶಿಲ್ಪಾ ಶೆಟ್ಟಿ ಅವರು ತುಳುವಿನಲ್ಲಿ ಮಾತು ಆರಂಭಿಸಿದ ಅವರು, ಕನ್ನಡದಲ್ಲಿ ಎಲ್ಲರೂ ಚೆನ್ನಾಗಿದ್ದಿರ ಎಂದು ಪ್ರಶ್ನಿಸಿದರು. ನಾನು ಕರ್ನಾಟಕದ ಹುಡುಗಿ. ಮೈಸೂರಿಗೆ ತಂದರೆ ತವರು ಮನೆಗೆ ಬಂದಂತೆ ಭಾವ ಬರುತ್ತದೆ. ಇತ್ತೀಚೆಗೆ ಮೈಸೂರಿನಲ್ಲಿ ಕೆಡಿ ಚಿತ್ರೀಕರಣದಲ್ಲಿ ಭಾಗವಹಿಸಿದ್ದೆ ಎಂದು ಸಂತಸ ಹಂಚಿಕೊಂಡರು.

ವಿಶ್ವಾಸ, ಪಾರದರ್ಶಕತೆ ಮತ್ತು ಗ್ರಾಹಕ ಕೇಂದ್ರಿತ ಮೌಲ್ಯಗಳ ಕುರಿತು ಗಾಢ ನಂಬಿಕೆ ಹೊಂದಿರುವ ಕಲ್ಯಾಣ್ ಜ್ಯುವೆಲ್ಲರ್ಸ್ ಅನ್ನು ಪ್ರತಿನಿಧಿಸುವುದು ಒಂದು ಸೌಭಾಗ್ಯ ಎಂದು ನಾನು ಭಾವಿಸಿದ್ದೇನೆ. ಗ್ರಾಹಕರು ವೈವಿಧ್ಯಮಯ ಆಭರಣ ಸಂಗ್ರಹಗಳನ್ನು ಆನಂದಿಸುತ್ತಾರೆ ಎಂಬ ಭರವಸೆ ನನಗೆ ಇದೆ ಎಂದು ಹೇಳಿದರು.

ಕಲ್ಯಾಣ್ ಜ್ಯುವೆಲ್ಲರ್ಸ್ ಕಾರ್ಯನಿರ್ವಾಹಕ ನಿರ್ದೇಶಕ ರಮೇಶ್ ಕಲ್ಯಾಣರಾಮನ್ ಮಾತನಾಡಿ, ಗ್ರಾಹಕರು ಉದ್ಘಾಟನಾ ಕೊಡುಗೆಯ ಭಾಗವಾಗಿ ಮೇಕಿಂಗ್ ಚಾರ್ಜ್ ಮೇಲೆ -ಟ್ ಶೇ.50ರಷ್ಟು ರಿಯಾಯಿತಿ ಪಡೆಯಬಹುದು ಎಂದು ತಿಳಿಸಿದರು.

ಕಲ್ಯಾಣ್ ಜ್ಯುವೆಲ್ಲರ‍್ಸ್‌ನಲ್ಲಿ ಯಾವೆಲ್ಲಾ ವಿಶೇಷ ಆಭರಣಗಳು ಲಭ್ಯ?
ಈ ಹೊಸ ಶೋರೂಮ್‌ನಲ್ಲಿ ಕಲ್ಯಾಣ್ ಜ್ಯುವೆಲ್ಲರ್ಸ್‌ನ ಜನಪ್ರಿಯ ಹೋಮ್ ಬ್ರ್ಯಾಂಡ್‌ಗಳಾದ ಮುಹೂರ್ತ್(ವೆಡ್ಡಿಂಗ್ ಜ್ಯುವೆಲ್ಲರಿ ಲೈನ್), ಮುದ್ರಾ(ಕೈಯಿಂದ ಮಾಡಿದ ಆಂಟಿಕ್ ಆಭರಣ), ನಿಮಾಹ್(ಟೆಂಪಲ್ ಜ್ಯುವೆಲ್ಲರಿ), ಗ್ಲೋ(ಡ್ಯಾನ್ಸಿಂಗ್ ಡೈಮಂಡ್ಸ್), ಝಿಯಾಹ್(ಸಾಲಿಟೇರ್ ಲೈಕ್ ಡೈಮಂಡ್ ಜ್ಯುವೆಲ್ಲರಿ), ಅನೋಖಿ(ಅನ್ ಕಟ್ ಡೈಮಂಡ್ಸ್), ಅಪೂರ್ವ(ವಿಶೇಷ ಸಂದರ್ಭಗಳಿಗಾಗಿ ಸಿದ್ಧಗೊಳಿಸಿರುವ ಡೈಮಂಡ್ಸ್), ಅಂತರಾ(ವೆಡ್ಡಿಂಗ್ ಡೈಮಂಡ್ಸ್), ಹೇರಾ(ದೈನಂದಿನ ಧರಿಸುವ ಡೈಮಂಡ್ಸ್), ರಂಗ್(ಪ್ರೀಷಿಯಸ್ ಸ್ಟೋನ್ಸ್ ಜ್ಯುವೆಲ್ಲರಿ) ಮತ್ತು ಇತ್ತೀಚೆಗೆ ಪ್ರಾರಂಭಿಸಲಾದ ಲೀಲಾ (ಕಲರ್ಡ್ ಸ್ಟೋನ್ಸ್ ಮತ್ತು ಡೈಮಂಡ್ ಜ್ಯುವೆಲ್ಲರಿ) ಉತ್ಪನ್ನಗಳೂ ಲಭ್ಯವಿರುತ್ತವೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸೈಬರ್‌ ವಂಚನೆ ಕೇವಲ ಆರ್ಥಿಕ ಅಪರಾಧವಲ್ಲ. ರಾಷ್ಟ್ರೀಯ ಭದ್ರತೆಗೆ ಸವಾಲು: ಅಮಿತ್‌ ಶಾ

ನವದೆಹಲಿ: ಭಾರತದಲ್ಲಿ ವೇಗವಾಗಿ ಬೆಳೆಯುತ್ತಿರುವ ಸೈಬರ್‌ ಅಪರಾಧಗಳ ವಿರುದ್ಧ ಕೇಂದ್ರ ಸರ್ಕಾರ ಸಮರ ಸಾರಿದೆ. ಸೈಬರ್‌ ಭದ್ರತೆಯು ಈಗ ಕೇವಲ…

33 mins ago

ಬೆಂಗಳೂರಿನಲ್ಲಿ ಭೀಕರ ಅಪಘಾತ: ಶಾಲಾ ಬಸ್‌ ಹರಿದು ಇಬ್ಬರು ಪುಟ್ಟ ಮಕ್ಕಳ ದಾರುಣ ಸಾವು

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಶಾಲಾ ಬಸ್ಸೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.…

34 mins ago

ಮಲೆಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಭಕ್ತರಿಂದ ಪಾದಯಾತ್ರೆ: ಪೊಲೀಸರಿಂದ ಬ್ಯಾರಿಕೇಡ್‌ ಹಾಕಿ ಜಾಗೃತಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆಮಾದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾದಿಗಳು ಪಾದಯಾತ್ರೆಯ…

1 hour ago

ಶಾಸಕರು ಯಾವಾಗ ಬೇಕಾದರೂ ಪ್ರವಾಸಕ್ಕೆ ಹೋಗಬಹುದು: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಶಾಸಕರ ವಿದೇಶ ಪ್ರವಾಸದ ಬಗ್ಗೆ ಮಾಹಿತಿ ಇಲ್ಲ. ಆದರೆ ಶಾಸಕರು ಯಾವಾಗ ಬೇಕಾದರೂ ಪ್ರವಾಸಕ್ಕೆ ಹೋಗಬಹುದು ಎಂದು ಆರೋಗ್ಯ…

2 hours ago

ಟಾಕ್ಸಿಕ್‌ ಚಿತ್ರಕ್ಕೆ ಮತ್ತೊಂದು ಸಂಕಷ್ಟ: ರಾಷ್ಟ್ರೀಯ ಕ್ರೈಸ್ತರ ಒಕ್ಕೂಟದಿಂದ ದೂರು ಸಲ್ಲಿಕೆ

ಬೆಂಗಳೂರು: ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್‌ ಸಿನಿಮಾ ಬಿಡುಗಡೆಗೂ ಮುನ್ನವೇ ಸಾಲು ಸಾಲು ವಿವಾದಗಳಿಗೆ ಗುರಿಯಾಗುತ್ತಿದೆ. ಇದೀಗ…

2 hours ago

ನಾನು ಹೈಕಮಾಂಡ್‌ ಹೇಳಿದಂತೆ ನಡೆದುಕೊಳ್ಳುತ್ತೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂಬ ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್‌ ಕೊಟ್ಟಿದ್ದಾರೆ. ಸಿಎಂ…

3 hours ago