ಮೈಸೂರು

ಮೈಸೂರು | ಕಲ್ಯಾಣ್‌ ಜ್ಯೂವೆಲ್ಲರ್ಸ್‌ 2ನೇ ಶೋರೊಮ್‌ ಉದ್ಘಾಟಿಸಿದ ನಟಿ ಶಿಲ್ಪಾ ಶೆಟ್ಟಿ

ಮೈಸೂರು: ಕಲ್ಯಾಣ್ ಜ್ಯುವೆಲ್ಲರ್ಸ್ ಮೈಸೂರಿನಲ್ಲಿ ತನ್ನ 2ನೇ ಹೊಸ ಶೋರೂಮ್ ಅನ್ನು ಪ್ರಾರಂಭಿಸಿದ್ದು, ಈ ಸೊಗಸಾದ ವಿನ್ಯಾಸದ ಶೋರೂಮ್ ಅನ್ನು ಬಾಲಿವುಡ್ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಕುಂದ್ರಾ ಉದ್ಘಾಟಿಸಿದರು.

ಈ ಶೋರೂಮ್‌ನಲ್ಲಿ ಕಲ್ಯಾಣ್ ಜ್ಯುವೆಲ್ಲರ್ಸ್ ಬ್ರ್ಯಾಂಡ್‌ನ ವಿವಿಧ ಸಂಗ್ರಹಗಳ ವ್ಯಾಪಕ ಶ್ರೇಣಿಯ ಡಿಸೈನ್‌ಗಳು ಲಭ್ಯವಿವೆ. ಉದ್ಘಾಟನಾ ಕಾರ್ಯಕ್ರಮವು ಅದ್ಧೂರಿಯಾಗಿ ನಡೆದಿದ್ದು, ಬಾಲಿವುಡ್ ತಾರೆಯನ್ನು ನೋಡಲು, ಈ ಸಂದರ್ಭದಲ್ಲಿ ಭಾಗಿಯಾಗಲು ಅಭಿಮಾನಿಗಳು ಮತ್ತು ಗ್ರಾಹಕರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಮಳಿಗೆ ಉದ್ಘಾಟಿಸಿ ಶಿಲ್ಪಾ ಶೆಟ್ಟಿ ಅವರು ತುಳುವಿನಲ್ಲಿ ಮಾತು ಆರಂಭಿಸಿದ ಅವರು, ಕನ್ನಡದಲ್ಲಿ ಎಲ್ಲರೂ ಚೆನ್ನಾಗಿದ್ದಿರ ಎಂದು ಪ್ರಶ್ನಿಸಿದರು. ನಾನು ಕರ್ನಾಟಕದ ಹುಡುಗಿ. ಮೈಸೂರಿಗೆ ತಂದರೆ ತವರು ಮನೆಗೆ ಬಂದಂತೆ ಭಾವ ಬರುತ್ತದೆ. ಇತ್ತೀಚೆಗೆ ಮೈಸೂರಿನಲ್ಲಿ ಕೆಡಿ ಚಿತ್ರೀಕರಣದಲ್ಲಿ ಭಾಗವಹಿಸಿದ್ದೆ ಎಂದು ಸಂತಸ ಹಂಚಿಕೊಂಡರು.

ವಿಶ್ವಾಸ, ಪಾರದರ್ಶಕತೆ ಮತ್ತು ಗ್ರಾಹಕ ಕೇಂದ್ರಿತ ಮೌಲ್ಯಗಳ ಕುರಿತು ಗಾಢ ನಂಬಿಕೆ ಹೊಂದಿರುವ ಕಲ್ಯಾಣ್ ಜ್ಯುವೆಲ್ಲರ್ಸ್ ಅನ್ನು ಪ್ರತಿನಿಧಿಸುವುದು ಒಂದು ಸೌಭಾಗ್ಯ ಎಂದು ನಾನು ಭಾವಿಸಿದ್ದೇನೆ. ಗ್ರಾಹಕರು ವೈವಿಧ್ಯಮಯ ಆಭರಣ ಸಂಗ್ರಹಗಳನ್ನು ಆನಂದಿಸುತ್ತಾರೆ ಎಂಬ ಭರವಸೆ ನನಗೆ ಇದೆ ಎಂದು ಹೇಳಿದರು.

ಕಲ್ಯಾಣ್ ಜ್ಯುವೆಲ್ಲರ್ಸ್ ಕಾರ್ಯನಿರ್ವಾಹಕ ನಿರ್ದೇಶಕ ರಮೇಶ್ ಕಲ್ಯಾಣರಾಮನ್ ಮಾತನಾಡಿ, ಗ್ರಾಹಕರು ಉದ್ಘಾಟನಾ ಕೊಡುಗೆಯ ಭಾಗವಾಗಿ ಮೇಕಿಂಗ್ ಚಾರ್ಜ್ ಮೇಲೆ -ಟ್ ಶೇ.50ರಷ್ಟು ರಿಯಾಯಿತಿ ಪಡೆಯಬಹುದು ಎಂದು ತಿಳಿಸಿದರು.

ಕಲ್ಯಾಣ್ ಜ್ಯುವೆಲ್ಲರ‍್ಸ್‌ನಲ್ಲಿ ಯಾವೆಲ್ಲಾ ವಿಶೇಷ ಆಭರಣಗಳು ಲಭ್ಯ?
ಈ ಹೊಸ ಶೋರೂಮ್‌ನಲ್ಲಿ ಕಲ್ಯಾಣ್ ಜ್ಯುವೆಲ್ಲರ್ಸ್‌ನ ಜನಪ್ರಿಯ ಹೋಮ್ ಬ್ರ್ಯಾಂಡ್‌ಗಳಾದ ಮುಹೂರ್ತ್(ವೆಡ್ಡಿಂಗ್ ಜ್ಯುವೆಲ್ಲರಿ ಲೈನ್), ಮುದ್ರಾ(ಕೈಯಿಂದ ಮಾಡಿದ ಆಂಟಿಕ್ ಆಭರಣ), ನಿಮಾಹ್(ಟೆಂಪಲ್ ಜ್ಯುವೆಲ್ಲರಿ), ಗ್ಲೋ(ಡ್ಯಾನ್ಸಿಂಗ್ ಡೈಮಂಡ್ಸ್), ಝಿಯಾಹ್(ಸಾಲಿಟೇರ್ ಲೈಕ್ ಡೈಮಂಡ್ ಜ್ಯುವೆಲ್ಲರಿ), ಅನೋಖಿ(ಅನ್ ಕಟ್ ಡೈಮಂಡ್ಸ್), ಅಪೂರ್ವ(ವಿಶೇಷ ಸಂದರ್ಭಗಳಿಗಾಗಿ ಸಿದ್ಧಗೊಳಿಸಿರುವ ಡೈಮಂಡ್ಸ್), ಅಂತರಾ(ವೆಡ್ಡಿಂಗ್ ಡೈಮಂಡ್ಸ್), ಹೇರಾ(ದೈನಂದಿನ ಧರಿಸುವ ಡೈಮಂಡ್ಸ್), ರಂಗ್(ಪ್ರೀಷಿಯಸ್ ಸ್ಟೋನ್ಸ್ ಜ್ಯುವೆಲ್ಲರಿ) ಮತ್ತು ಇತ್ತೀಚೆಗೆ ಪ್ರಾರಂಭಿಸಲಾದ ಲೀಲಾ (ಕಲರ್ಡ್ ಸ್ಟೋನ್ಸ್ ಮತ್ತು ಡೈಮಂಡ್ ಜ್ಯುವೆಲ್ಲರಿ) ಉತ್ಪನ್ನಗಳೂ ಲಭ್ಯವಿರುತ್ತವೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

11 hours ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

12 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

14 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

15 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

16 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

16 hours ago