ಕಂಪಲಾಪುರ: ಪಿರಿಯಾಪಟ್ಟಣ ತಾಲ್ಲೂಕಿನ ಕಂಪಲಾಪುರ ಗ್ರಾಮದ ಎ.ಮಂಜುನಾಥ್ ಎಂಬವರ ತೋಟದಲ್ಲಿ ಕಳೆದ ವರ್ಷ ನಾಟಿ ಮಾಡಿದ್ದ 2 ಸಾವಿರ ಬಾಳೆ ಗಿಡಗಳು, ಕಟಾವಿಗೆ ಬಂದಿರುವ 500 ಬಾಳೆ ಗಿಡಗಳು ಮಳೆ ಗಾಳಿಗೆ ನೆಲಕ್ಕುರಳಿವೆ.
ಗುರುವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ ಬಾಳೆ ಗಿಡಗಳು ನಾಶವಾಗಿವೆ. ಈ ಕುರಿತು ರೈತ ಮಂಜುನಾಥ್ ಮಾತನಾಡಿ, ಕಳೆದ ವರ್ಷ 2 ಸಾವಿರ ಬಾಳೆ ನಾಟಿ ಮಾಡಿದ್ದೆ. ಹಣ ಖರ್ಚು ಮಾಡಿ ಹನಿ ನೀರಾವರಿ ಅಳವಡಿಸಿದ್ದೆ. ಒಂದು ವಾರದಲ್ಲಿ ಕಟಾವು ಮಾಡಬೇಕಾಗಿತ್ತು. ಮಾರುಕಟ್ಟೆಯಲ್ಲಿ ಒಳ್ಳೆಯ ಬೆಲೆ ಇದೆ. ಮಾಡಿರುವ ಸಾಲ ತೀರಿಸುವ ಲೆಕ್ಕಾಚಾರ ಮಾಡಿದ್ದೆ, ಆದರೆ ಬಿರುಗಾಳಿಗೆ ಬಾಳೆ ಗಿಡಗಳು ನೆಲಕ್ಕುರಳಿವೆ. ನನಗೆ 1ಲಕ್ಷ ರೂ.ನಷ್ಟು ನಷ್ಟವಾಗಿದೆ ಎಂದರು.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…