ಮೈಸೂರು : ಹಿಂದಿ ಮಾತನಾಡುತ್ತಿದ್ದ ರೈಲ್ವೆ ಅಧಿಕಾರಿಗೆ ಕನ್ನಡ ಕಲಿಯುವಂತೆ ಕೇಂದ್ರ ಸಚಿವ ವಿ.ಸೋಮಣ್ಣ ಕ್ಲಾಸ್ ತಗೊಂಡಿದ್ದಾರೆ.
ಇಂದು ಮೈಸೂರಿನ ಅಶೋಕಪುರಂ ರೈಲ್ವೆ ನಿಲ್ದಾಣಕ್ಕೆ ಸಚಿವ ಭೇಟಿ ನೀಡಿ ಪರಿಶೀಲನೆ ನಡೆಸಿ ರೈಲ್ವೆ ಕಾಮಗಾರಿ ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಈ ವೇಳೆ ಕನ್ನಡ ಬರದೇ ಹಿಂದಿಯಲ್ಲಿ ವಿವರಿಸಿದ ರೈಲ್ವೆ ಅಧಿಕಾರಿಯಾದ DRM ಶಿಲ್ಪಾ ಅಗರ್ವಾವಾಲ್ ಅವರಿಗೆ ಸಚಿವ ವಿ ಸೋಮಣ್ಣ ಕ್ಲಾಸ್ ತೆಗೆದುಕೊಂಡಿದ್ದಾರೆ.
ಕರ್ನಾಟಕಕ್ಕೆ ಬಂದು ಎಷ್ಟು ವರ್ಷ ಆಯ್ತಮ್ಮ? ಹೋಗಿ 3 ರೂಪಾಯಿ ಕೊಟ್ಟು ಒಂದ್ ಕನ್ನಡ ಪುಸ್ತಕ ತಗೊಂಡ್ ಕಲಿ.
ಕನ್ನಡ ಕಲಿಯೋಕೆ ಕೇವಲ 3 ರೂಪಾಯಿ ಇನ್ವೆಸ್ಟ್ ಮಾಡಮ್ಮ ಸಾಕು. ನಾನು ಡೆಲ್ಲಿಗೆ ಹೋಗಿ ಹಿಂದಿ ಕಲಿತಿದೀನಿ. ಮೈಸೂರಿಗೆ ಬಂದು ಎರಡು ವರ್ಷವಾಗಿದ್ರು ಕನ್ನಡ ಕಲಿತಿಲ್ವ ಎಂದು ಪ್ರಶ್ನಿಸಿದರು.
ಬಳಿಕ ಅಧಿಕಾರಿಗಳೊಂದಿಗೆ ಹಿಂದಿಯಲ್ಲೇ ಮಾತನಾಡಿ ಸಚಿವ ವಿ ಸೋಮಣ್ಣ ವಿವರ ಪಡೆದುಕೊಂಡರು.
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…
ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…