ಮೈಸೂರು : ಹಿಂದಿ ಮಾತನಾಡುತ್ತಿದ್ದ ರೈಲ್ವೆ ಅಧಿಕಾರಿಗೆ ಕನ್ನಡ ಕಲಿಯುವಂತೆ ಕೇಂದ್ರ ಸಚಿವ ವಿ.ಸೋಮಣ್ಣ ಕ್ಲಾಸ್ ತಗೊಂಡಿದ್ದಾರೆ.
ಇಂದು ಮೈಸೂರಿನ ಅಶೋಕಪುರಂ ರೈಲ್ವೆ ನಿಲ್ದಾಣಕ್ಕೆ ಸಚಿವ ಭೇಟಿ ನೀಡಿ ಪರಿಶೀಲನೆ ನಡೆಸಿ ರೈಲ್ವೆ ಕಾಮಗಾರಿ ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಈ ವೇಳೆ ಕನ್ನಡ ಬರದೇ ಹಿಂದಿಯಲ್ಲಿ ವಿವರಿಸಿದ ರೈಲ್ವೆ ಅಧಿಕಾರಿಯಾದ DRM ಶಿಲ್ಪಾ ಅಗರ್ವಾವಾಲ್ ಅವರಿಗೆ ಸಚಿವ ವಿ ಸೋಮಣ್ಣ ಕ್ಲಾಸ್ ತೆಗೆದುಕೊಂಡಿದ್ದಾರೆ.
ಕರ್ನಾಟಕಕ್ಕೆ ಬಂದು ಎಷ್ಟು ವರ್ಷ ಆಯ್ತಮ್ಮ? ಹೋಗಿ 3 ರೂಪಾಯಿ ಕೊಟ್ಟು ಒಂದ್ ಕನ್ನಡ ಪುಸ್ತಕ ತಗೊಂಡ್ ಕಲಿ.
ಕನ್ನಡ ಕಲಿಯೋಕೆ ಕೇವಲ 3 ರೂಪಾಯಿ ಇನ್ವೆಸ್ಟ್ ಮಾಡಮ್ಮ ಸಾಕು. ನಾನು ಡೆಲ್ಲಿಗೆ ಹೋಗಿ ಹಿಂದಿ ಕಲಿತಿದೀನಿ. ಮೈಸೂರಿಗೆ ಬಂದು ಎರಡು ವರ್ಷವಾಗಿದ್ರು ಕನ್ನಡ ಕಲಿತಿಲ್ವ ಎಂದು ಪ್ರಶ್ನಿಸಿದರು.
ಬಳಿಕ ಅಧಿಕಾರಿಗಳೊಂದಿಗೆ ಹಿಂದಿಯಲ್ಲೇ ಮಾತನಾಡಿ ಸಚಿವ ವಿ ಸೋಮಣ್ಣ ವಿವರ ಪಡೆದುಕೊಂಡರು.
ಹನೋಯ್: ವಿಯೆಟ್ನಾಂ ಫು ಕ್ವಾಕ್ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್ ಬೋಟ್ ಮುಳುಗಡೆಯಾಗಿದ್ದು, ಕನಿಷ್ಠ…
ನವದೆಹಲಿ: ಕೇಂದ್ರ ಸರ್ಕಾರ ಬಡ ರೋಗಿಗಳಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, 39 ಅಗತ್ಯ ಔಷಧಿಗಳ ಬೆಲೆ ಇಳಿಕೆ ಮಾಡಿ ಆದೇಶ ಹೊರಡಿಸಿದೆ.…
ಬೆಂಗಳೂರು: ರಾಜ್ಯದ ಬಹುತೇಕ ಪಂಚಾಯ್ತಿಗಳ ಆಡಳಿತಾವಧಿ ಮುಗಿದಿದ್ದು, ಅಕ್ಟೋಬರ್ ಅಥವಾ ನವೆಂಬರ್ನಲ್ಲಿ ಚುನಾವಣೆ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್…
ಮಡಿಕೇರಿ: ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಬಳಿ ನಡೆದಿದೆ. ಕವನ್(24) ಆತ್ಮಹತ್ಯೆ ಮಾಡಿಕೊಂಡಿರುವ…
ಡಾ.ಪ್ರಮೀಳಾದೇವಿ ಬಿ.ಕೆ ಖಾದಿಯಿಂದ ದೇಶವನ್ನು ಒಂದು ಗೂಡಿಸುವುದು ಸಾಧ್ಯವೇ? ಇಂದು ಸಾಮಾನ್ಯವಾಗಿ ಕೇಳಬಹುದಾದ ಪ್ರಶ್ನೆ. ಸ್ವಾತಂತ್ರ್ಯ ಬಂದು ಏಳು ದಶಕ…
ಜಹಜಿನಲ್ಲಿ ನನಗೆ ಸಮುದ್ರ ಪ್ರಯಾಣದ ಯಾವ ತೊಂದರೆಯೂ ಆಗಲಿಲ್ಲ. ದಿನಗಳು ಕಳೆದಂತೆಲ್ಲ ನನ್ನ ಮನಸ್ಸು ಸಂದಿಗ್ಧ ಪರಿಸ್ಥಿತಿಗೆ ಬೀಳತೊಡಗಿದ್ದಿತು. ಹಡಗಿನ…