ಮೈಸೂರು : ಹಿಂದಿ ಮಾತನಾಡುತ್ತಿದ್ದ ರೈಲ್ವೆ ಅಧಿಕಾರಿಗೆ ಕನ್ನಡ ಕಲಿಯುವಂತೆ ಕೇಂದ್ರ ಸಚಿವ ವಿ.ಸೋಮಣ್ಣ ಕ್ಲಾಸ್ ತಗೊಂಡಿದ್ದಾರೆ.
ಇಂದು ಮೈಸೂರಿನ ಅಶೋಕಪುರಂ ರೈಲ್ವೆ ನಿಲ್ದಾಣಕ್ಕೆ ಸಚಿವ ಭೇಟಿ ನೀಡಿ ಪರಿಶೀಲನೆ ನಡೆಸಿ ರೈಲ್ವೆ ಕಾಮಗಾರಿ ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಈ ವೇಳೆ ಕನ್ನಡ ಬರದೇ ಹಿಂದಿಯಲ್ಲಿ ವಿವರಿಸಿದ ರೈಲ್ವೆ ಅಧಿಕಾರಿಯಾದ DRM ಶಿಲ್ಪಾ ಅಗರ್ವಾವಾಲ್ ಅವರಿಗೆ ಸಚಿವ ವಿ ಸೋಮಣ್ಣ ಕ್ಲಾಸ್ ತೆಗೆದುಕೊಂಡಿದ್ದಾರೆ.
ಕರ್ನಾಟಕಕ್ಕೆ ಬಂದು ಎಷ್ಟು ವರ್ಷ ಆಯ್ತಮ್ಮ? ಹೋಗಿ 3 ರೂಪಾಯಿ ಕೊಟ್ಟು ಒಂದ್ ಕನ್ನಡ ಪುಸ್ತಕ ತಗೊಂಡ್ ಕಲಿ.
ಕನ್ನಡ ಕಲಿಯೋಕೆ ಕೇವಲ 3 ರೂಪಾಯಿ ಇನ್ವೆಸ್ಟ್ ಮಾಡಮ್ಮ ಸಾಕು. ನಾನು ಡೆಲ್ಲಿಗೆ ಹೋಗಿ ಹಿಂದಿ ಕಲಿತಿದೀನಿ. ಮೈಸೂರಿಗೆ ಬಂದು ಎರಡು ವರ್ಷವಾಗಿದ್ರು ಕನ್ನಡ ಕಲಿತಿಲ್ವ ಎಂದು ಪ್ರಶ್ನಿಸಿದರು.
ಬಳಿಕ ಅಧಿಕಾರಿಗಳೊಂದಿಗೆ ಹಿಂದಿಯಲ್ಲೇ ಮಾತನಾಡಿ ಸಚಿವ ವಿ ಸೋಮಣ್ಣ ವಿವರ ಪಡೆದುಕೊಂಡರು.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…